Homeಕರ್ನಾಟಕಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು 'ಸೌಹಾರ್ದ ನಡಿಗೆ' ಜಾಥಾದಲ್ಲಿ ಆಕ್ರೋಶ

ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ

- Advertisement -
- Advertisement -

ಮದ್ದೂರು, ಮಂಡ್ಯ: ಕಳೆದ ಕೆಲವು ದಿನಗಳ ಹಿಂದೆ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆಯ ನಂತರ, ಕೋಮು ದ್ವೇಷವನ್ನು ಪ್ರಚೋದಿಸುವಂತಹ ಹೇಳಿಕೆಗಳು ಮತ್ತು ಘಟನೆಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಸಹಬಾಳ್ವೆಯನ್ನು ಪುನಃ ಸ್ಥಾಪಿಸುವ ಉದ್ದೇಶದಿಂದ, ಮಂಡ್ಯ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳು “ಸೌಹಾರ್ದ-ಸಾಮರಸ್ಯ ನಡಿಗೆ ಮದ್ದೂರು ಕಡೆಗೆ” ಎಂಬ ಬೃಹತ್ ಜಾಥಾವನ್ನು ಆಯೋಜಿಸಿದ್ದವು. ಈ ನಡಿಗೆಯು ಐತಿಹಾಸಿಕ ಶಿವಪುರ ಸತ್ಯಾಗ್ರಹ ಸೌಧವನ್ನು ತಲುಪಬೇಕಿತ್ತು. ಆದರೆ, ಈ ಶಾಂತಿ ನಡಿಗೆಗೆ ಪೊಲೀಸರು ಅನುಮತಿ ನಿರಾಕರಿಸಿದರು. ಪೊಲೀಸರ ಈ ನಡೆ ಸರ್ಕಾರದ ಧೋರಣೆ ಮತ್ತು ಕಾನೂನು ಸುವ್ಯವಸ್ಥೆ ನಿರ್ವಹಣೆಯ ಬಗ್ಗೆ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಸರ್ಕಾರ ಮತ್ತು ಪೊಲೀಸರ ವಿರುದ್ಧ ಸಿಪಿಐಎಂ ಮುಖಂಡ ಕೃಷ್ಣೇಗೌಡರ ತೀವ್ರ ಆರೋಪ

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಮುಖಂಡ ಕೃಷ್ಣೇಗೌಡ ಅವರು, ಸರ್ಕಾರದ ಕೋಮುವಾದಿ ಶಕ್ತಿಗಳ ಮೇಲಿನ ಮೃದು ಧೋರಣೆಯೇ ಇಂತಹ ಗಲಭೆಗಳಿಗೆ ಮೂಲ ಕಾರಣ ಎಂದು ತೀವ್ರವಾಗಿ ಆರೋಪಿಸಿದರು. ಮದ್ದೂರಿನಲ್ಲಿನ ಪೊಲೀಸ್ ಕಾರ್ಯವೈಖರಿಯನ್ನು ಆರಂಭದಲ್ಲಿ ಸ್ವಾಗತಿಸಿದ್ದರೂ, ಒಟ್ಟಾರೆ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ಹೇಳಿದರು.

“ದ್ವೇಷ ಭಾಷಣ ಮಾಡುವ ಯತ್ನಾಳ್, ಸಿ.ಟಿ. ರವಿ, ಪ್ರತಾಪ್ ಸಿಂಹನಂತಹ ಕೋಮುವಾದಿಗಳಿಗೆ ಮುಕ್ತ ಅವಕಾಶ ನೀಡಲಾಗುತ್ತದೆ. ಆದರೆ, ಸೌಹಾರ್ದತೆ ಮತ್ತು ಶಾಂತಿಗಾಗಿ ನಡೆಯುವ ಜನಸಾಮಾನ್ಯರ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗುತ್ತದೆ. ಇದು ಪೊಲೀಸ್ ಇಲಾಖೆಗೆ ಅಪರಾಧಿಗಳು ಯಾರು ಮತ್ತು ಸಜ್ಜನರು ಯಾರು ಎಂಬ ವ್ಯತ್ಯಾಸವೇ ಗೊತ್ತಿಲ್ಲದಿರುವುದನ್ನು ಸಾಬೀತುಪಡಿಸುತ್ತದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಮುಂದಿನ ದಿನಗಳಲ್ಲಿ ಸೌಹಾರ್ದ ಕೂಟಗಳು, ಜಾತ್ರೆಗಳು ಹಾಗೂ ಸಮಾರಂಭಗಳನ್ನು ಆಯೋಜಿಸುತ್ತೇವೆ. ಮದ್ದೂರಿನ ಗಡಿಭಾಗದಲ್ಲಾದರೂ ತಮ್ಮ ನಡಿಗೆ ಯಶಸ್ವಿಯಾಗಿದೆ, ಪೊಲೀಸರ ನಿರ್ಬಂಧ ತಮ್ಮ ಸಂಕಲ್ಪವನ್ನು ತಡೆಯಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡಿದರು.

ಸೌಹಾರ್ದ ನಡಿಗೆಗೆ ನಿರ್ಬಂಧ: ಡಿಎಸ್‌ಎಸ್‌ ಮುಖಂಡರ ಆಕ್ರೋಶ

ಡಿಎಸ್‌ಎಸ್ ಮುಖಂಡ ಶಿವು ಮರಳಿಗ ಮಾತನಾಡಿ, ಜಿಲ್ಲಾಡಳಿತವು ಹಿಂದೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು. “ಮದ್ದೂರಿನಲ್ಲಿ ಶಾಂತಿ ಹದಗೆಟ್ಟಾಗ, ಶಾಂತಿ ಮೂಡಿಸಲು ಮುಂದೆ ಬರುವವರಿಗೆ ಅವಕಾಶ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದರು. ಆದರೆ, ಇಂದು ನಮ್ಮ ಸೌಹಾರ್ದ ನಡಿಗೆಯನ್ನು ಬ್ಯಾರಿಕೇಡ್‌ ಹಾಕಿ ತಡೆಯುವ ಮೂಲಕ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸುವ ಪ್ರಯತ್ನ ಮಾಡಿದ್ದಾರೆ. ನಾವು ಗುಲಾಬಿ ಹೂ ಹಂಚಿ ಪ್ರೀತಿ ಮತ್ತು ಸಹಬಾಳ್ವೆಯನ್ನು ಸಾರುತ್ತಿದ್ದೇವೆ, ಆದರೆ ಪೊಲೀಸರು ನಮ್ಮನ್ನು ರಸ್ತೆಗೆ ಇಳಿಯಲು ಬಿಡುತ್ತಿಲ್ಲ. ಇದು ಪೊಲೀಸ್ ಇಲಾಖೆಯ ವಿಫಲತೆಗೆ ಸಾಕ್ಷಿ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ಹೆಸರಿನಲ್ಲಿ ಕೋಮು ಶಕ್ತಿಗಳು ತಮ್ಮ ತಂತ್ರಗಳನ್ನು ಹರಡುತ್ತಿವೆ ಎಂದು ಅವರು ಎಚ್ಚರಿಸಿದರು.

“ಮೊದಲು ಶ್ರೀರಂಗಪಟ್ಟಣ, ನಂತರ ಕೆರಗೋಡು ಬಾವುಟ ವಿಚಾರ, ಆನಂತರ ನಾಗಮಂಗಲ ಮತ್ತು ಈಗ ಮದ್ದೂರನ್ನು ಗುರಿಯಾಗಿಸಿಕೊಂಡು ಮಂಡ್ಯದ ಸಾಮರಸ್ಯ ಕೆಡಿಸಲು ಮುಂದಾಗಿದ್ದಾರೆ. ಇಂತಹ ಕೆಡುಕುಗಳಿಗೆ ಜಿಲ್ಲಾಡಳಿತವೇ ನೇರ ಹೊಣೆ” ಎಂದು ಅವರು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನ ಸ್ವಾರ್ಥ ರಾಜಕೀಯದ ವಿರುದ್ಧ ವಾಗ್ದಾಳಿ

ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಅವರು ಮಾತನಾಡಿ, ಬಿಜೆಪಿ ಜೊತೆ ಕೈಜೋಡಿಸಿರುವ ಜೆಡಿಎಸ್‌ ಜಾತ್ಯತೀತತೆ ಎಂಬ ಪದಕ್ಕೆ ಅಪಮಾನ ಮಾಡಿದೆ ಎಂದು ಆರೋಪಿಸಿದರು.

“ರೈತ ಸಂಘಟನೆಗಳು ಯಾವಾಗಲೂ ಗಾಂಧಿ ಮತ್ತು ಬಸವಣ್ಣನವರ ತತ್ವಗಳ ಮೇಲೆ ಕೆಲಸ ಮಾಡುತ್ತವೆ. ಆದರೆ, ಕೋಮು ಪ್ರಚೋದನೆ ಮಾಡುವ ಸಿ.ಟಿ. ರವಿ, ಯತ್ನಾಳ್‌ಗೆ ಮದ್ದೂರಿಗೆ ಬರಲು ಅವಕಾಶ ಇದೆ. ಶಾಂತಿ ಬಯಸುವ ನಮ್ಮನ್ನು ನಿರ್ಬಂಧಿಸುವುದು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ. ಕುಮಾರಸ್ವಾಮಿ ಅವರು ಕೋಮುವಾದಿಗಳ ಜೊತೆ ಕೈಜೋಡಿಸಿರುವ ಕಾರಣ ನಮ್ಮ ಮಾತುಗಳನ್ನು ಕೇಳುತ್ತಿಲ್ಲ. ಆದರೂ ನಾವು ನಮ್ಮ ದನಿ ಎತ್ತಿದ್ದೇವೆ. ಎಲ್ಲ ಜನಪರ ಸಂಘಟನೆಗಳು ಕೋಮು ದ್ವೇಷಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಮಂಡ್ಯ ಜಿಲ್ಲೆಯನ್ನು ಕೋಮುವಾದಿ ಶಕ್ತಿಗಳಿಂದ ರಕ್ಷಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು.

“ನಮ್ಮ ಯುವಕರು ಜೈಲುಪಾಲಾಗುತ್ತಿದ್ದಾರೆ”: ಹಿರಿಯ ಸಾಹಿತಿ ಭೂಮಿಗೌಡ

ಹಿರಿಯ ಸಾಹಿತಿ ಭೂಮಿಗೌಡ ಅವರು, ಬಿಜೆಪಿ ಮತ್ತು ಸಂಘಪರಿವಾರಗಳು ಅಭಿವೃದ್ಧಿಯ ಬದಲು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದು ಆಪಾದಿಸಿದರು. “ಬಿಜೆಪಿ ನಾಯಕರ ಮಕ್ಕಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, ನಮ್ಮ ಶೂದ್ರ ಸಮುದಾಯದ ಯುವಕರು ಗಲಭೆಗಳಲ್ಲಿ ಭಾಗಿಯಾಗಿ ಶಾಂತಿ ಕದಡಿ ಜೈಲು ಸೇರುತ್ತಿದ್ದಾರೆ. ಈ ಬಗ್ಗೆ ಜನರು ಮತ್ತು ಯುವಕರು ಆಳವಾಗಿ ಆಲೋಚಿಸಬೇಕು ಹಾಗೂ ಈ ಹುನ್ನಾರವನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ತಿಳಿಸಿದರು.

ಎಲ್ಲ ಸಮುದಾಯಗಳು ಒಗ್ಗೂಡಿ ಹೋರಾಟಕ್ಕೆ ಕರೆ

ಸಾಮಾಜಿಕ ಕಾರ್ಯಕರ್ತೆ ಕುಮಾರಿ ಅವರು ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದು ಎಲ್ಲ ಧರ್ಮಗಳವರೂ ತಮ್ಮ ಪ್ರಾಣಗಳನ್ನು ಅರ್ಪಿಸಿದ ಫಲದಿಂದ. ಆದರೆ, ಈ ಇತಿಹಾಸವನ್ನು ಮರೆತಿರುವವರು ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದರು.

“ಯಾವುದೇ ಧರ್ಮವು ಮುಸಲ್ಮಾನರನ್ನು ಅಥವಾ ಮನುಷ್ಯರನ್ನು ದ್ವೇಷಿಸಲು ಹೇಳಿಲ್ಲ. ಆದರೆ, ಹಿಂದುತ್ವವಾದಿಗಳು ಮಾತ್ರ ಸಾಮರಸ್ಯಕ್ಕೆ ನಿರಾಕರಿಸಿ, ವಿಭಜನೆಗೆ ಹುನ್ನಾರ ನಡೆಸುತ್ತಿದ್ದಾರೆ. ಮಂಡ್ಯವನ್ನು ಪ್ರಯೋಗಶಾಲೆಯನ್ನಾಗಿ ಮಾಡಿಕೊಳ್ಳುವ ಅವರ ಪ್ರಯತ್ನಕ್ಕೆ ನಮ್ಮ ಸಾಮರಸ್ಯದ ಹೋರಾಟದ ಮೂಲಕ ಹಿನ್ನಡೆಯನ್ನುಂಟು ಮಾಡುತ್ತೇವೆ” ಎಂದು ಅವರು ಹೇಳಿದರು. ಮದ್ದೂರು ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ. ಬಸವರಾಜು, ಜನವಾದಿ ಮಹಿಳಾ ಸಂಘಟನೆಯ ದೇವಿ ಮತ್ತು ದಲಿತ ಸಂಘಟನೆಗಳ ಮುಖಂಡ ಅಂದಾನಿ ಸೋಮನಹಳ್ಳಿ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಮಾತನಾಡಿ, ಕೋಮುದ್ವೇಷವನ್ನು ಹರಡುವವರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

ಪೊಲೀಸ್ ಅನುಮತಿ ಸಿಗದಿದ್ದರೂ, ಮದ್ದೂರು ಎಪಿಎಂಸಿ ಆವರಣದಲ್ಲಿ ನೂರಾರು ಕಾರ್ಯಕರ್ತರು ಒಗ್ಗೂಡಿ, ಮಂಡ್ಯ ಜಿಲ್ಲೆಯಲ್ಲಿ ಕೋಮುವಾದಿಗಳಿಗೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಈ ಮೂಲಕ ಅವರು ಶಾಂತಿ ಮತ್ತು ಸಹಬಾಳ್ವೆಯನ್ನು ಎತ್ತಿಹಿಡಿದರು.

ಈ ಕಾರ್ಯಕ್ರಮದಲ್ಲಿ ಚಿಂತಕರುಗಳಾದ ಶಿವಸುಂದರ್, ಎಂ.ವಿ. ಕೃಷ್ಣ, ಜನಪರ ಸಂಘಟನೆಗಳ ಮುಖಂಡರುಗಳಾದ ಯಶ್ವಂತ್ ಟಿ., ಜಾಗೃತ ಕರ್ನಾಟಕದ ನಾಗೇಶ್,  ಪುರಸಭೆ ಮಾಜಿ ಅಧ್ಯಕ್ಷ ಎಂ ಸಿ ಬಸವರಾಜು, ಜನಪರ ಸಂಘಟನೆಗಳ ಮುಖಂಡರುಗಳಾದ ಕೆಂಪು ಗೌಡ್ರು, ದೇವಿ, ಅಂದಾನಿ ಸೋಮನಹಳ್ಳಿ ಸೇರಿದಂತೆ ಯುವಜನ, ಮಹಿಳಾ, ದಲಿತ, ಕಾರ್ಮಿಕ, ರೈತ ಸಂಘಟನೆ ಹಾಗೂ ಎಲ್ಲ ಜನಪರ ಸಂಘಟನೆಗಳ ಕಾರ್ಯಕರ್ತರು ಇದ್ದರು.

ನಕ್ಸಲರ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಮತ್ತು ಕೋಸಾ ದಾದಾ ಎನ್‌ಕೌಂಟರ್‌ನಲ್ಲಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...