Homeಕರ್ನಾಟಕರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

‘ಮಲ್ಟಿಪ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಂಗಳವಾರ (ಸೆ.23) ಮಧ್ಯಂತರ ತಡೆ ನೀಡಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ಮತ್ತು ಇತರ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸ್ಮನಿ ಅವರು, ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಅರ್ಜಿದಾರರು ಕರ್ನಾಟಕ ಸಿನಿಮಾಸ್ (ನಿಯಂತ್ರಣ) ಕಾಯ್ದೆಯಡಿಯಲ್ಲಿ ರೂಪಿಸಲಾದ ನಿಯಮವನ್ನು ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ಪ್ರಶ್ನಿಸಿದ್ದಾರೆ. ತಿದ್ದುಪಡಿಯಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ, ಇದು ಸಂಪೂರ್ಣವಾಗಿ ಅನಿಯಂತ್ರಿತವಾಗಿದೆ” ಎಂದು ಹೇಳಿದರು.

“ಟಿಕೆಟ್ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಸ್ಥಿರ ಬೆಲೆಗೆ ಯಾವುದೇ ತಾರ್ಕಿಕ ಆಧಾರವಿಲ್ಲ. ಗ್ರಾಹಕರು ಹೆಚ್ಚಿನ ಐಷಾರಾಮಿ ಸೌಲಭ್ಯಗಳಿಗಾಗಿ ಹೆಚ್ಚು ಹಣ ಪಾವತಿಸಲು ಸಿದ್ಧರಿದ್ದರೂ, ಎಲ್ಲರಿಗೂ ಒಂದೇ ಬೆಲೆಯನ್ನು ವಿಧಿಸುವುದು ಸರಿಯಲ್ಲ” ಎಂದರು.

ಏಪ್ರಿಲ್ 2017ರಲ್ಲಿ ಇದೇ ರೀತಿಯ ಸರ್ಕಾರಿ ಆದೇಶವೊಂದು ಜಾರಿಯಾಗಿತ್ತು. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ನಂತರ, ಆದೇಶವನ್ನು ಸ್ಥಗಿತಗೊಳಿಸಲಾಗಿತ್ತು. ಕೊನೆಗೆ ಸರ್ಕಾರ ಅದನ್ನು ವಾಪಸ್ ಪಡೆಯಿತು. ಅದೇ ವಿಷಯ ಈಗ ಪುನರಾವರ್ತನೆಯಾಗುತ್ತಿದೆ. ಈ ಹಿಂದೆ ಸರ್ಕಾರಿ ಆದೇಶದ (ಜಿಒ) ಮೂಲಕ ನಿಯಮ ಜಾರಿಗೊಳಿಸಲಾಗಿತ್ತು. ಈಗ ಕಾಯ್ದೆಗೆ ತಿದ್ದುಪಡಿಯ ಮೂಲಕ ಜಾರಿಗೆ ತರಲಾಗಿದೆ ಎಂದು ಮುಕುಲ್ ರೋಹಟಗಿ ಪೀಠದ ಗಮನಕ್ಕೆ ತಂದರು.

“ನಾವು ಸಿನಿಮಾ ಥಿಯೇಟರ್‌ಗಳನ್ನು ನಿರ್ಮಿಸಲು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದೇವೆ. ಎಲ್ಲಾ ಟಿಕೆಟ್‌ಗಳ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಬೇಕು ಎಂದು ಆದೇಶಿಸುವುದು ಸರಿಯಲ್ಲ. ಇದು ಎಲ್ಲಾ ವಿಮಾನಗಳನ್ನು ಕೇವಲ ಇಕಾನಮಿ ಕ್ಲಾಸ್‌ಗೆ ಸೀಮಿತಗೊಳಿಸುವಂತೆ ಹೇಳುವುದಕ್ಕೆ ಸಮಾನವಾಗಿದೆ. ಈ ಕಾಯ್ದೆಯಡಿಯಲ್ಲಿ ಬೆಲೆ ನಿಗದಿಪಡಿಸುದಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ವಾದಿಸಿದರು.

“ಈ ಕಾಯ್ದೆಯು ಟಿಕೆಟ್‌ ಬೆಲೆಯನ್ನು ನಿಗದಿಪಡಿಸುವುದನ್ನು ಎಂದಿಗೂ ಉದ್ದೇಶಿಸಿರಲಿಲ್ಲ, ಮತ್ತು ಈ ತಿದ್ದುಪಡಿಯು ಸಿನಿಮಾ ಥಿಯೇಟರ್ ಮಾಲೀಕರ ವ್ಯಾಪಾರ ನಡೆಸುವ ಹಕ್ಕಿನ ಮೇಲೆ ನೇರವಾದ ನಿರ್ಬಂಧವಾಗಿದೆ. ನೂರಾರು ಸಿನಿಮಾ ಥಿಯೇಟರ್‌ಗಳಿಗೆ ಇದರಿಂದ ಪರಿಣಾಮ ಬೀರುತ್ತದೆ. ಹಾಗಾಗಿ, ಈ ವಿಷಯವನ್ನು ನ್ಯಾಯಾಲಯ ಅಂತಿಮವಾಗಿ ನಿರ್ಧರಿಸುವವರೆಗೆ 200 ರೂಪಾಯಿ ಟಿಕೆಟ್ ಬೆಲೆಯ ನಿಯಮವನ್ನು ತಡೆ ಹಿಡಿಯಬೇಕು” ಎಂದು ಮನವಿ ಮಾಡಿದರು.

ಇದೇ ವೇಳೆ, ಮತ್ತೊಬ್ಬ ಅರ್ಜಿದಾರರ ಪರವಾಗಿ ವಾದಿ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ಹಿಂದಿನ ಸರ್ಕಾರಿ ಆದೇಶದಲ್ಲಿ ಟಿಕೆಟ್‌ ಬೆಲೆಯ ಮೇಲೆ ಮಿತಿಯನ್ನು ವಿಧಿಸಲಾಗಿತ್ತು. 2017ರಲ್ಲಿ ಟಿಕೆಟ್‌ ಬೆಲೆಯ ಮೇಲೆ 200 ರೂಪಾಯಿಗಳ ಮಿತಿಯನ್ನು ಹಾಕಲಾಗಿತ್ತು. ಹಲವು ವರ್ಷಗಳ ನಂತರ ಈಗ ಮತ್ತೆ ಅದೇ ಮಿತಿಯನ್ನು ವಿಧಿಸಲಾಗಿದೆ. ಹಿಂದಿನ ಸರ್ಕಾರಿ ಆದೇಶವನ್ನು ವಾಪಸ್ ಪಡೆಯಲಾಗಿತ್ತು. ಆದ್ದರಿಂದ, ತಾತ್ಕಾಲಿಕವಾಗಿ ಈ ಆದೇಶವನ್ನು ತಡೆ ಹಿಡಿದು ಮಧ್ಯಂತರ ಆದೇಶ ನೀಡಲು ನಾವು ಕೋರುತ್ತಿದ್ದೇವೆ ಎಂದರು.

ಹೊಂಬಾಳೆ ಫಿಲ್ಮ್ಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು, ನಿಯಮ ತಿದ್ದುಪಡಿ ಮಾಡುವ ನೆಪದಲ್ಲಿ ನಿಯಮ ಮಾಡುವ ಕ್ರಮವು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ವಾದಿಸಿದರು.

“ಇದು ಸಂಪೂರ್ಣವಾಗಿ ಪ್ರದರ್ಶಕ ಮತ್ತು ಚಿತ್ರ ವೀಕ್ಷಕರ ನಡುವಿನ ಖಾಸಗಿ ಒಪ್ಪಂದವಾಗಿದೆ. ಒಂದು ಚಿತ್ರಮಂದಿರದಲ್ಲಿ ಒಂದು ಚಿತ್ರಕ್ಕೆ ಒಂದು ಟಿಕೆಟ್ ಬೆಲೆ ಮತ್ತು ಇನ್ನೊಂದು ಚಿತ್ರ ಮಂದಿರದಲ್ಲಿ ಅದೇ ಚಿತ್ರಕ್ಕೆ ಇನ್ನೊಂದು ಟಿಕೆಟ್ ಬೆಲೆ ಇರುತ್ತದೆ” ಎಂದು ಥಿಯೇಟರ್ ಪರವಾಗಿ ಹಾಜರಾದ ಹಿರಿಯ ವಕೀಲ ಡಿ ಆರ್ ರವಿಶಂಕರ್ ಹೇಳಿದರು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಎಎಜಿ ಇಸ್ಮಾಯಿಲ್ ಝಬಿಉಲ್ಲಾ ಅವರು, “ಜುಲೈ 15 ರಂದು ಪ್ರಕಟವಾದ ಕರಡು ಅಧಿಸೂಚನೆಗೆ ಕೆಲವು ಅರ್ಜಿದಾರರು ಆಕ್ಷೇಪಣೆ ಸಲ್ಲಿಸಿದ್ದಾರೆ. ಟಿಕೆಟ್ ಬೆಲೆಗೆ ಮಿತಿ ವಿಧಿಸುವ ನಿರ್ಧಾರವನ್ನು ಮಾರ್ಚ್ 7 ರ ರಾಜ್ಯ ಬಜೆಟ್ ಭಾಷಣದಲ್ಲಿ ಘೋಷಿಸಲಾಗಿತ್ತು. ಇದು ಸಾರ್ವಜನಿಕರ ಹಿತದೃಷ್ಟಿಯಿಂದ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ಅನೆಕ್ಸರ್ ಎ ಜಾರಿಗೆ ಬಂದಿದೆ. ಜೊತೆಗೆ, ಈ ರೀತಿಯ ನಿಯಂತ್ರಣವನ್ನು ವಿಧಿಸುವ ಅಧಿಕಾರವು ಸಂವಿಧಾನದಿಂದ ದೊರೆತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಕೆಎಫ್‌ಸಿಸಿ) ಪರ ವಕೀಲರು, ತಾವು ಈ ಪ್ರಕರಣದಲ್ಲಿ ಒಳಗೊಳ್ಳಲು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯಕ್ಕೆ ಸಹಾಯ ಮಾಡಲು ಇಚ್ಛಿಸುವುದಾಗಿ ತಿಳಿಸಿದರು. ಆದರೆ, ನ್ಯಾಯಾಲಯವು ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಸ್ಪಷ್ಟಪಡಿಸಿತು. ಕೆಎಫ್‌ಸಿಸಿಯು ಈ ಪ್ರಕರಣದಲ್ಲಿ ಭಾಗವಹಿಸಲು ತನ್ನ ಕಾನೂನು ಅರ್ಹತೆಯನ್ನು ಸಾಬೀತುಪಡಿಸಬೇಕು ಎಂದು ಮೌಖಿಕವಾಗಿ ಹೇಳಿತು.

ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...