Homeಕರ್ನಾಟಕರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

‘ಮಲ್ಟಿಪ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಂಗಳವಾರ (ಸೆ.23) ಮಧ್ಯಂತರ ತಡೆ ನೀಡಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ಮತ್ತು ಇತರ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸ್ಮನಿ ಅವರು, ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಅರ್ಜಿದಾರರು ಕರ್ನಾಟಕ ಸಿನಿಮಾಸ್ (ನಿಯಂತ್ರಣ) ಕಾಯ್ದೆಯಡಿಯಲ್ಲಿ ರೂಪಿಸಲಾದ ನಿಯಮವನ್ನು ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ಪ್ರಶ್ನಿಸಿದ್ದಾರೆ. ತಿದ್ದುಪಡಿಯಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ, ಇದು ಸಂಪೂರ್ಣವಾಗಿ ಅನಿಯಂತ್ರಿತವಾಗಿದೆ” ಎಂದು ಹೇಳಿದರು.

“ಟಿಕೆಟ್ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಸ್ಥಿರ ಬೆಲೆಗೆ ಯಾವುದೇ ತಾರ್ಕಿಕ ಆಧಾರವಿಲ್ಲ. ಗ್ರಾಹಕರು ಹೆಚ್ಚಿನ ಐಷಾರಾಮಿ ಸೌಲಭ್ಯಗಳಿಗಾಗಿ ಹೆಚ್ಚು ಹಣ ಪಾವತಿಸಲು ಸಿದ್ಧರಿದ್ದರೂ, ಎಲ್ಲರಿಗೂ ಒಂದೇ ಬೆಲೆಯನ್ನು ವಿಧಿಸುವುದು ಸರಿಯಲ್ಲ” ಎಂದರು.

ಏಪ್ರಿಲ್ 2017ರಲ್ಲಿ ಇದೇ ರೀತಿಯ ಸರ್ಕಾರಿ ಆದೇಶವೊಂದು ಜಾರಿಯಾಗಿತ್ತು. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ನಂತರ, ಆದೇಶವನ್ನು ಸ್ಥಗಿತಗೊಳಿಸಲಾಗಿತ್ತು. ಕೊನೆಗೆ ಸರ್ಕಾರ ಅದನ್ನು ವಾಪಸ್ ಪಡೆಯಿತು. ಅದೇ ವಿಷಯ ಈಗ ಪುನರಾವರ್ತನೆಯಾಗುತ್ತಿದೆ. ಈ ಹಿಂದೆ ಸರ್ಕಾರಿ ಆದೇಶದ (ಜಿಒ) ಮೂಲಕ ನಿಯಮ ಜಾರಿಗೊಳಿಸಲಾಗಿತ್ತು. ಈಗ ಕಾಯ್ದೆಗೆ ತಿದ್ದುಪಡಿಯ ಮೂಲಕ ಜಾರಿಗೆ ತರಲಾಗಿದೆ ಎಂದು ಮುಕುಲ್ ರೋಹಟಗಿ ಪೀಠದ ಗಮನಕ್ಕೆ ತಂದರು.

“ನಾವು ಸಿನಿಮಾ ಥಿಯೇಟರ್‌ಗಳನ್ನು ನಿರ್ಮಿಸಲು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದೇವೆ. ಎಲ್ಲಾ ಟಿಕೆಟ್‌ಗಳ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಬೇಕು ಎಂದು ಆದೇಶಿಸುವುದು ಸರಿಯಲ್ಲ. ಇದು ಎಲ್ಲಾ ವಿಮಾನಗಳನ್ನು ಕೇವಲ ಇಕಾನಮಿ ಕ್ಲಾಸ್‌ಗೆ ಸೀಮಿತಗೊಳಿಸುವಂತೆ ಹೇಳುವುದಕ್ಕೆ ಸಮಾನವಾಗಿದೆ. ಈ ಕಾಯ್ದೆಯಡಿಯಲ್ಲಿ ಬೆಲೆ ನಿಗದಿಪಡಿಸುದಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ವಾದಿಸಿದರು.

“ಈ ಕಾಯ್ದೆಯು ಟಿಕೆಟ್‌ ಬೆಲೆಯನ್ನು ನಿಗದಿಪಡಿಸುವುದನ್ನು ಎಂದಿಗೂ ಉದ್ದೇಶಿಸಿರಲಿಲ್ಲ, ಮತ್ತು ಈ ತಿದ್ದುಪಡಿಯು ಸಿನಿಮಾ ಥಿಯೇಟರ್ ಮಾಲೀಕರ ವ್ಯಾಪಾರ ನಡೆಸುವ ಹಕ್ಕಿನ ಮೇಲೆ ನೇರವಾದ ನಿರ್ಬಂಧವಾಗಿದೆ. ನೂರಾರು ಸಿನಿಮಾ ಥಿಯೇಟರ್‌ಗಳಿಗೆ ಇದರಿಂದ ಪರಿಣಾಮ ಬೀರುತ್ತದೆ. ಹಾಗಾಗಿ, ಈ ವಿಷಯವನ್ನು ನ್ಯಾಯಾಲಯ ಅಂತಿಮವಾಗಿ ನಿರ್ಧರಿಸುವವರೆಗೆ 200 ರೂಪಾಯಿ ಟಿಕೆಟ್ ಬೆಲೆಯ ನಿಯಮವನ್ನು ತಡೆ ಹಿಡಿಯಬೇಕು” ಎಂದು ಮನವಿ ಮಾಡಿದರು.

ಇದೇ ವೇಳೆ, ಮತ್ತೊಬ್ಬ ಅರ್ಜಿದಾರರ ಪರವಾಗಿ ವಾದಿ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ಹಿಂದಿನ ಸರ್ಕಾರಿ ಆದೇಶದಲ್ಲಿ ಟಿಕೆಟ್‌ ಬೆಲೆಯ ಮೇಲೆ ಮಿತಿಯನ್ನು ವಿಧಿಸಲಾಗಿತ್ತು. 2017ರಲ್ಲಿ ಟಿಕೆಟ್‌ ಬೆಲೆಯ ಮೇಲೆ 200 ರೂಪಾಯಿಗಳ ಮಿತಿಯನ್ನು ಹಾಕಲಾಗಿತ್ತು. ಹಲವು ವರ್ಷಗಳ ನಂತರ ಈಗ ಮತ್ತೆ ಅದೇ ಮಿತಿಯನ್ನು ವಿಧಿಸಲಾಗಿದೆ. ಹಿಂದಿನ ಸರ್ಕಾರಿ ಆದೇಶವನ್ನು ವಾಪಸ್ ಪಡೆಯಲಾಗಿತ್ತು. ಆದ್ದರಿಂದ, ತಾತ್ಕಾಲಿಕವಾಗಿ ಈ ಆದೇಶವನ್ನು ತಡೆ ಹಿಡಿದು ಮಧ್ಯಂತರ ಆದೇಶ ನೀಡಲು ನಾವು ಕೋರುತ್ತಿದ್ದೇವೆ ಎಂದರು.

ಹೊಂಬಾಳೆ ಫಿಲ್ಮ್ಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು, ನಿಯಮ ತಿದ್ದುಪಡಿ ಮಾಡುವ ನೆಪದಲ್ಲಿ ನಿಯಮ ಮಾಡುವ ಕ್ರಮವು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ವಾದಿಸಿದರು.

“ಇದು ಸಂಪೂರ್ಣವಾಗಿ ಪ್ರದರ್ಶಕ ಮತ್ತು ಚಿತ್ರ ವೀಕ್ಷಕರ ನಡುವಿನ ಖಾಸಗಿ ಒಪ್ಪಂದವಾಗಿದೆ. ಒಂದು ಚಿತ್ರಮಂದಿರದಲ್ಲಿ ಒಂದು ಚಿತ್ರಕ್ಕೆ ಒಂದು ಟಿಕೆಟ್ ಬೆಲೆ ಮತ್ತು ಇನ್ನೊಂದು ಚಿತ್ರ ಮಂದಿರದಲ್ಲಿ ಅದೇ ಚಿತ್ರಕ್ಕೆ ಇನ್ನೊಂದು ಟಿಕೆಟ್ ಬೆಲೆ ಇರುತ್ತದೆ” ಎಂದು ಥಿಯೇಟರ್ ಪರವಾಗಿ ಹಾಜರಾದ ಹಿರಿಯ ವಕೀಲ ಡಿ ಆರ್ ರವಿಶಂಕರ್ ಹೇಳಿದರು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಎಎಜಿ ಇಸ್ಮಾಯಿಲ್ ಝಬಿಉಲ್ಲಾ ಅವರು, “ಜುಲೈ 15 ರಂದು ಪ್ರಕಟವಾದ ಕರಡು ಅಧಿಸೂಚನೆಗೆ ಕೆಲವು ಅರ್ಜಿದಾರರು ಆಕ್ಷೇಪಣೆ ಸಲ್ಲಿಸಿದ್ದಾರೆ. ಟಿಕೆಟ್ ಬೆಲೆಗೆ ಮಿತಿ ವಿಧಿಸುವ ನಿರ್ಧಾರವನ್ನು ಮಾರ್ಚ್ 7 ರ ರಾಜ್ಯ ಬಜೆಟ್ ಭಾಷಣದಲ್ಲಿ ಘೋಷಿಸಲಾಗಿತ್ತು. ಇದು ಸಾರ್ವಜನಿಕರ ಹಿತದೃಷ್ಟಿಯಿಂದ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ಅನೆಕ್ಸರ್ ಎ ಜಾರಿಗೆ ಬಂದಿದೆ. ಜೊತೆಗೆ, ಈ ರೀತಿಯ ನಿಯಂತ್ರಣವನ್ನು ವಿಧಿಸುವ ಅಧಿಕಾರವು ಸಂವಿಧಾನದಿಂದ ದೊರೆತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಕೆಎಫ್‌ಸಿಸಿ) ಪರ ವಕೀಲರು, ತಾವು ಈ ಪ್ರಕರಣದಲ್ಲಿ ಒಳಗೊಳ್ಳಲು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯಕ್ಕೆ ಸಹಾಯ ಮಾಡಲು ಇಚ್ಛಿಸುವುದಾಗಿ ತಿಳಿಸಿದರು. ಆದರೆ, ನ್ಯಾಯಾಲಯವು ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಸ್ಪಷ್ಟಪಡಿಸಿತು. ಕೆಎಫ್‌ಸಿಸಿಯು ಈ ಪ್ರಕರಣದಲ್ಲಿ ಭಾಗವಹಿಸಲು ತನ್ನ ಕಾನೂನು ಅರ್ಹತೆಯನ್ನು ಸಾಬೀತುಪಡಿಸಬೇಕು ಎಂದು ಮೌಖಿಕವಾಗಿ ಹೇಳಿತು.

ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...