Homeಮುಖಪುಟಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ...

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

- Advertisement -
- Advertisement -

ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಮತ್ತು ಜಾತಿ ಆಧಾರಿತ ಫಲಕಗಳ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಈ ಆದೇಶ ಅಪಾಯಕಾರಿ ಮತ್ತು ಹಿಂದುಳಿದ ಸಮುದಾಯಗಳ ಧ್ವನಿಯನ್ನು ಅಡಗಿಸಲು ಮಾಡಿದ ‘ಕಣ್ಣೊರೆಸುವ ತಂತ್ರ’ ಎಂದು ಹೇಳಿದೆ.

ಭಾನುವಾರ (ಸೆ.21) ಉತ್ತರ ಪ್ರದೇಶ ಸರ್ಕಾರ ಹೊರಡಿಸಿ ನಿರ್ದೇಶನದಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಸಾಮಾಜಿಕ ಸಂಘರ್ಷವನ್ನು ಉತ್ತೇಜಿಸುತ್ತವೆ. ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಉಂಟು ಮಾಡುತ್ತವೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದೆ.

ಜಿಲ್ಲಾ ನ್ಯಾಯಾಧೀಶರು, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಅವರು ಹೊರಡಿಸಿದ ನಿರ್ದೇಶನದಲ್ಲಿ, ಜಾತಿ ಆಧಾರಿತ ಪ್ರದರ್ಶನಗಳು ಮತ್ತು ಪ್ರತಿಭಟನೆಗಳ ಮೂಲಕ ವಿಭಜನೆಯನ್ನು ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪೊಲೀಸ್ ದಾಖಲೆಗಳು ಸೇರಿದಂತೆ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ಘೋಷಣೆಯನ್ನು ನಿಷೇಧಿಸಿ ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿದ ಐದು ದಿನಗಳ ನಂತರ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ವಾಹನಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜಾತಿ ವೈಭವೀಕರಣದ ಅಭ್ಯಾಸವನ್ನು ನ್ಯಾಯಾಲಯವು ಆಕ್ಷೇಪಿಸಿದೆ.

ಸರ್ಕಾರದ ನಿರ್ದೇಶವನ್ನು ಉಲ್ಲೇಖಿಸಿ ಸೋಮವಾರ (ಸೆ.22) ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು “5,000 ವರ್ಷಗಳಿಂದ ನಮ್ಮ ಮನಸ್ಸಿನಲ್ಲಿ ಬೇರೂರಿರುವ ಜಾತಿ ತಾರತಮ್ಯವನ್ನು ತೆಗೆದುಹಾಕಲು ಏನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ಬಟ್ಟೆ, ವೇಷಭೂಷಣಗಳು ಮತ್ತು ಚಿಹ್ನೆಗಳ ಪ್ರದರ್ಶನಗಳಿಂದ ಉಂಟಾಗುವ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡಲು ಏನು ಮಾಡುವುದು?” ಎಂದು ಕೇಳಿದ್ದಾರೆ.

“ಯಾರನ್ನಾದರೂ ಭೇಟಿಯಾದಾಗ ಅವರ ಹೆಸರಿಗಿಂತ ಮೊದಲು ‘ಜಾತಿ’ ಕೇಳುವ ಜಾತಿ ತಾರತಮ್ಯದ ಮನಸ್ಥಿತಿಯನ್ನು ಕೊನೆಗೊಳಿಸಲು ಏನು ಮಾಡುವುದು? ಯಾರನ್ನಾದರೂ ತಮ್ಮ ಮನೆಯನ್ನು ಸ್ವಚ್ಛಗೊಳಿಸುವಂತೆ ಮಾಡುವ ಜಾತಿ ತಾರತಮ್ಯದ ಚಿಂತನೆಯನ್ನು ಕೊನೆಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತೀರಾ?”ಎಂದಿದ್ದಾರೆ.

ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮಾಡುವ ಮೂಲಕ ಯಾರನ್ನಾದರೂ ದೂಷಿಸಲು ಮಾಡುವ ‘ಜಾತಿ ಆಧಾರಿತ ಪಿತೂರಿಗಳನ್ನು’ ಕೊನೆಗೊಳಿಸಲು ಏನು ಮಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

ಗುರ್ಜರ್ ಸಮುದಾಯದ ರಾಜಕೀಯ ಅರಿವಿನ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ‘ಹೆದರಿಕೆ’ ಇದೆಯೇ? ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜ್‌ಕುಮಾರ್ ಭಾಟಿ ಕೇಳಿದ್ದಾರೆ.

ಭಾನುವಾರ ನಿರ್ದೇಶನ ಹೊರಡಿಸುವ ಮೊದಲು ಬಿಜೆಪಿಯೇ ಜಾತಿ ರ‍್ಯಾಲಿಗಳು ಮತ್ತು ಸಮ್ಮೇಳನಗಳನ್ನು ಆಯೋಜಿಸುತ್ತಿತ್ತು ಎಂದು ಭಾಟಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಿಂದುತ್ವ ಪಕ್ಷವು ಒಂದು ತಿಂಗಳ ಕಾಲ ಹಲವಾರು ಜಾತಿ ಗುಂಪುಗಳೊಂದಿಗೆ ಸಭೆಗಳನ್ನು ನಡೆಸಿತ್ತು ಎಂದಿದ್ದಾರೆ.

“ಬಿಜೆಪಿ ತಮ್ಮ ಸರ್ಕಾರವು ಪ್ರತಿ ಜಾತಿಯಿಂದ ಎಷ್ಟು ಸಚಿವರನ್ನು ನೇಮಿಸಿದೆ ಎಂಬುದನ್ನು ತೋರಿಸುವ ಫಲಕಗಳನ್ನು ಲಕ್ನೋದಲ್ಲಿ ಹಾಕಿತ್ತು” ಎಂದು ರಾಜ್‌ಕುಮಾರ್ ಭಾಟಿ ಹೇಳಿದ್ದಾರೆ.

ಗಾಝಿಯಾಬಾದ್ ವಿಧಾನಸಭಾ ಉಪಚುನಾವಣೆಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೋಡ್ ಶೋ ನಡೆಸಿದ್ದರು. ಅಲ್ಲಿ ವಿವಿಧ ಜಾತಿಗಳಿಗೆ ಹತ್ತು ಸ್ವಾಗತ ವೇದಿಕೆಗಳನ್ನು ಸ್ಥಾಪಿಸಲಾಗಿತ್ತು, ಪ್ರತಿಯೊಂದರ ಮೇಲೆ ಆಯಾ ಜಾತಿಗಳ ಹೆಸರುಗಳನ್ನು ಬರೆಯಲಾಗಿತ್ತು ಎಂದು ನೆನಪಿಸಿದ್ದಾರೆ.

“ಇಂದು, ಗುರ್ಜರ್ ಸಮುದಾಯದಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಅಭಿಯಾನ ನಡೆಯುತ್ತಿರುವಾಗ ಮತ್ತು ನಾವು ಬೃಹತ್ ಗುರ್ಜರ್ ರ‍್ಯಾಲಿಯನ್ನು ಘೋಷಿಸಿರುವಾಗ, ಜಾತಿಗಳ ಹೆಸರಿನಲ್ಲಿ ರ‍್ಯಾಲಿಗಳನ್ನು ನಡೆಸಬಾರದು ಎಂದು ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಹೇಗೆ ನೆನಪಾಯಿತು?” ಎಂದು ಅವರು ಕೇಳಿದ್ದಾರೆ.

ಸಮಾಜವಾದಿ ಪಕ್ಷದ ಮತ್ತೊಬ್ಬ ನಾಯಕ ಉದಯವೀರ್ ಸಿಂಗ್, “ಬಿಜೆಪಿ ಸರ್ಕಾರವು ಮೊದಲು ತನ್ನ ಜಾತಿ ಆಧಾರಿತ ಮನಸ್ಥಿತಿಯನ್ನು ಹೇಗೆ ತೆಗೆದು ಹಾಕುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಮ್ಮ ಪಕ್ಷ ಎಂದಿಗೂ ಜಾತಿ ಆಧಾರಿತ ರ‍್ಯಾಲಿಗಳನ್ನು ನಡೆಸುವುದಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

“ವಾಸ್ತವವಾಗಿ, ಬಿಜೆಪಿ ಜಾತಿ ಆಧಾರಿತ ರಾಜಕೀಯವನ್ನು ಹೆಚ್ಚು ಉತ್ತೇಜಿಸುತ್ತದೆ” ಎಂದು ಅಜಯ್ ರೈ ಹೇಳಿದ್ದಾಗಿ ಪತ್ರಿಕೆಯೊಂದು ಉಲ್ಲೇಖಿಸಿದೆ. “ಆರ್‌ಎಸ್‌ಎಸ್ [ರಾಷ್ಟ್ರೀಯ ಸ್ವಯಂಸೇವಕ ಸಂಘ] ಜಾತಿ ಆಧಾರಿತ ಪ್ರತಿನಿಧಿಗಳನ್ನು ಹೊಂದಿದೆ” ಎಂದು ರೈ ಹೇಳಿದ್ದಾರೆ.

ಈ ಆದೇಶವನ್ನು ಹೇಗೆ ಜಾರಿಗೆ ತರುತ್ತೀರಿ? ಇದು ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವ ಮತ್ತೊಂದು ಕಾರ್ಯವಿಧಾನವಾಗಿ ಬದಲಾಗುತ್ತಾ? ಎಂದು ಕಾದು ನೋಡಬೇಕಾಗಿದೆ ಎಂದು ರೈ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರ ಅಪಾಯಕಾರಿ. ದಲಿತ ಸಮುದಾಯ ಮತ್ತು ಇತರ ತಳಮಟ್ಟದ ಗುಂಪುಗಳ ಧ್ವನಿಗಳನ್ನು ಅಡಗಿಸಲು ಮಾಡುವ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ನಾಯಕ ಅನಿಲ್ ಯಾದವ್ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಭಾನುವಾರ ಹೊರಡಿಸಲಾದ ನಿರ್ದೇಶನವು ‘ಅನ್ಯಾಯದ ಶಕ್ತಿಗಳನ್ನು ಮತ್ತಷ್ಟು ಧೈರ್ಯಗೊಳಿಸುತ್ತದೆ ಮತ್ತು ಅಂತಿಮವಾಗಿ ತಾರತಮ್ಯದ ವಿರುದ್ಧ ಹೋರಾಡುವ ಸಾಮಾಜಿಕ ಸಮುದಾಯ ಆಧಾರಿತ ಗುಂಪುಗಳನ್ನು ಗುರಿಯಾಗಿಸುತ್ತದೆ’ ಎಂದು ಅನಿಲ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಅಗತ್ಯತೆ ಇಲ್ಲದೆ ಜಾತಿಯನ್ನು ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಭಾನುವಾರ, ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ತನ್ನ ನಿರ್ದೇಶನವನ್ನು ಹೊರಡಿಸಿದೆ.

ಬಂಧನ ಮೆಮೊಗಳು ಮತ್ತು ಠಾಣೆಯ ಸೂಚನಾ ಫಲಕಗಳಂತಹ ಪೊಲೀಸ್ ದಾಖಲೆಗಳು ಜಾತಿ ವಿವರಗಳನ್ನು ಹೊಂದಿರಬಾರದು. ಇಬ್ಬರೂ ಪೋಷಕರ ಹೆಸರನ್ನು ದಾಖಲಿಸಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಅಪರಾಧ ಮತ್ತು ಅಪರಾಧ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ನಿಂದ ಜಾತಿ ಕಾಲಮ್‌ಗಳನ್ನು ತೆಗೆದುಹಾಕಲು ಮತ್ತು ಬದಲಾವಣೆಗಳನ್ನು ಮಾಡುವವರೆಗೆ ಆ ಜಾಗವನ್ನು ಖಾಲಿ ಬಿಡಲು ಅಧಿಕಾರಿಗಳಿಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದೊಂದಿಗೆ ಸಂಯೋಜನೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಅಪರಾಧಗಳಂತಹ ಜಾತಿ ಗುರುತುಗಳನ್ನು ನಮೂದಿಸುವುದು ಕಾನೂನಿನಲ್ಲಿ ಅಗತ್ಯವಿದ್ದಾಗ ಮಾತ್ರ ವಿನಾಯಿತಿಗಳನ್ನು ನೀಡಬಹುದು ಎಂದು ಸರ್ಕಾರದ ನಿರ್ದೇಶನದಲ್ಲಿ ತಿಳಿಸಿದೆ.

ಜಾತಿ ಘೋಷಣೆಗಳು ಅಥವಾ ಸ್ಟಿಕ್ಕರ್‌ಗಳನ್ನು ಹೊತ್ತ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ದಂಡ ವಿಧಿಸಬೇಕು ಮತ್ತು ಜಾತಿಯನ್ನು ವೈಭವೀಕರಿಸುವ ಅಥವಾ ಪ್ರದೇಶಗಳನ್ನು ಜಾತಿ ಪ್ರದೇಶಗಳಾಗಿ ಘೋಷಿಸುವ ಸೈನ್‌ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...