Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...