Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...