Homeಮುಖಪುಟನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ‘ಮತಗಳ್ಳತನ’ ನಿಲ್ಲುವವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ಯುವಜನರು ‘ಉದ್ಯೋಗ ಕಳ್ಳತನ’ ಮತ್ತು ‘ಮತ ಕಳ್ಳತನ’ವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, “ನಿರುದ್ಯೋಗವು ಭಾರತದಲ್ಲಿ ಯುವಕರು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾಗಿದ್ದು, ಅದು ನೇರವಾಗಿ ಮತಗಳ್ಳತನದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ.

ಒಂದು ಸರ್ಕಾರ ಜನರ ವಿಶ್ವಾಸಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವುದು ಆಗಿರುತ್ತದೆ. ಆದರೆ, ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುವುದಿಲ್ಲ. ಅವರು ಮತಗಳನ್ನು ಕದಿಯುವ ಮೂಲಕ ಮತ್ತು ಸಂಸ್ಥೆಗಳನ್ನು ನಿಯಂತ್ರಿಸುವ ಮೂಲಕ ಅಧಿಕಾರದಲ್ಲಿ ಉಳಿಯುತ್ತಾರೆ” ಎಂದು ಆರೋಪಿಸಿದ್ದಾರೆ.

“ಈ ಕಾರಣಕ್ಕೆ ದೇಶದಲ್ಲಿ ನಿರುದ್ಯೋಗ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ. ಉದ್ಯೋಗವಕಾಶಗಳು ಕಡಿಮೆಯಾಗುತ್ತಿವೆ. ನೇಮಕಾತಿ ಪ್ರಕ್ರಿಯೆಗಳು ಕುಸಿದಿವೆ. ಯುವಕರ ಭವಿಷ್ಯ ಅಪಾಯಕ್ಕೆ ಸಿಲುಕುತ್ತಿದೆ. ಪ್ರತಿಯೊಂದು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರತಿಯೊಂದು ನೇಮಕಾತಿಯು ಭ್ರಷ್ಟಾಚಾರದ ಕಥೆಗಳೊಂದಿಗೆ ಸಂಬಂಧ ಹೊಂದಿದೆ” ಎಂದು ಹೇಳಿದ್ದಾರೆ.

“ದೇಶದ ಯುವಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಕನಸು ಕಾಣುತ್ತಾರೆ ಮತ್ತು ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಾರೆ. ಆದರೆ, ಮೋದಿ ತಮ್ಮ ಪಿಆರ್, ಸೆಲೆಬ್ರಿಟಿಗಳು ತಮ್ಮನ್ನು ಹೊಗಳುವಂತೆ ಮಾಡುವುದು ಮತ್ತು ಕೋಟ್ಯಾಧಿಪತಿಗಳ ಲಾಭದ ಮೇಲೆ ಮಾತ್ರ ಗಮನಹರಿಸಿದ್ದಾರೆ. ಯುವಕರ ಭರವಸೆಗಳನ್ನು ಛಿದ್ರಗೊಳಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರ್ಕಾರದ ಗುರುತಾಗಿದೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಈಗ ಪರಿಸ್ಥಿತಿ ಬದಲಾಗುತ್ತಿದೆ. ಭಾರತದ ಯುವಕರು ನಿಜವಾದ ಹೋರಾಟ ಕೇವಲ ಉದ್ಯೋಗಗಳಿಗಾಗಿ ಅಲ್ಲ, ಮತ ಕಳ್ಳತನದ ವಿರುದ್ಧ ಎಂದು ಅರ್ಥಮಾಡಿಕೊಂಡಿದ್ದಾರೆ. ಏಕೆಂದರೆ, ಎಲ್ಲಿಯವರೆಗೆ ಮತಗಳ್ಳತನ ನಡೆಯುತ್ತದೆಯೋ, ಅಲ್ಲಿಯವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ” ಎಂದಿದ್ದಾರೆ.

“ಯುವಜನರು ಇನ್ನು ಮುಂದೆ “ಉದ್ಯೋಗ ಕಳ್ಳತನ” ಅಥವಾ “ಮತ ಕಳ್ಳತನ”ವನ್ನು ಸಹಿಸುವುದಿಲ್ಲ. ಈಗ ಅಂತಿಮ ದೇಶಭಕ್ತಿ ಭಾರತವನ್ನು ನಿರುದ್ಯೋಗ ಮತ್ತು ಮತ ಕಳ್ಳತನದಿಂದ ಮುಕ್ತಗೊಳಿಸುವುದರಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉದ್ಯೋಗಕ್ಕಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್ ದೃಶ್ಯ ಹಾಗೂ ಇನ್ನೊಂದೆಡೆ ಪ್ರಧಾನಿ ಮೋದಿ ಸಸಿಗಳನ್ನು ನೆಡುವುದು, ನವಿಲುಗಳಿಗೆ ಆಹಾರ ನೀಡುವುದು ಮತ್ತು ಯೋಗಾಭ್ಯಾಸ ಮಾಡುತ್ತಿರುವ ದೃಶ್ಯಗಳಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಪೋಸ್ಟ್ ಜೊತೆ ಹಂಚಿಕೊಂಡಿದ್ದಾರೆ.

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...