Homeಮುಖಪುಟನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ‘ಮತಗಳ್ಳತನ’ ನಿಲ್ಲುವವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ಯುವಜನರು ‘ಉದ್ಯೋಗ ಕಳ್ಳತನ’ ಮತ್ತು ‘ಮತ ಕಳ್ಳತನ’ವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, “ನಿರುದ್ಯೋಗವು ಭಾರತದಲ್ಲಿ ಯುವಕರು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾಗಿದ್ದು, ಅದು ನೇರವಾಗಿ ಮತಗಳ್ಳತನದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ.

ಒಂದು ಸರ್ಕಾರ ಜನರ ವಿಶ್ವಾಸಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವುದು ಆಗಿರುತ್ತದೆ. ಆದರೆ, ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುವುದಿಲ್ಲ. ಅವರು ಮತಗಳನ್ನು ಕದಿಯುವ ಮೂಲಕ ಮತ್ತು ಸಂಸ್ಥೆಗಳನ್ನು ನಿಯಂತ್ರಿಸುವ ಮೂಲಕ ಅಧಿಕಾರದಲ್ಲಿ ಉಳಿಯುತ್ತಾರೆ” ಎಂದು ಆರೋಪಿಸಿದ್ದಾರೆ.

“ಈ ಕಾರಣಕ್ಕೆ ದೇಶದಲ್ಲಿ ನಿರುದ್ಯೋಗ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ. ಉದ್ಯೋಗವಕಾಶಗಳು ಕಡಿಮೆಯಾಗುತ್ತಿವೆ. ನೇಮಕಾತಿ ಪ್ರಕ್ರಿಯೆಗಳು ಕುಸಿದಿವೆ. ಯುವಕರ ಭವಿಷ್ಯ ಅಪಾಯಕ್ಕೆ ಸಿಲುಕುತ್ತಿದೆ. ಪ್ರತಿಯೊಂದು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರತಿಯೊಂದು ನೇಮಕಾತಿಯು ಭ್ರಷ್ಟಾಚಾರದ ಕಥೆಗಳೊಂದಿಗೆ ಸಂಬಂಧ ಹೊಂದಿದೆ” ಎಂದು ಹೇಳಿದ್ದಾರೆ.

“ದೇಶದ ಯುವಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಕನಸು ಕಾಣುತ್ತಾರೆ ಮತ್ತು ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಾರೆ. ಆದರೆ, ಮೋದಿ ತಮ್ಮ ಪಿಆರ್, ಸೆಲೆಬ್ರಿಟಿಗಳು ತಮ್ಮನ್ನು ಹೊಗಳುವಂತೆ ಮಾಡುವುದು ಮತ್ತು ಕೋಟ್ಯಾಧಿಪತಿಗಳ ಲಾಭದ ಮೇಲೆ ಮಾತ್ರ ಗಮನಹರಿಸಿದ್ದಾರೆ. ಯುವಕರ ಭರವಸೆಗಳನ್ನು ಛಿದ್ರಗೊಳಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರ್ಕಾರದ ಗುರುತಾಗಿದೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಈಗ ಪರಿಸ್ಥಿತಿ ಬದಲಾಗುತ್ತಿದೆ. ಭಾರತದ ಯುವಕರು ನಿಜವಾದ ಹೋರಾಟ ಕೇವಲ ಉದ್ಯೋಗಗಳಿಗಾಗಿ ಅಲ್ಲ, ಮತ ಕಳ್ಳತನದ ವಿರುದ್ಧ ಎಂದು ಅರ್ಥಮಾಡಿಕೊಂಡಿದ್ದಾರೆ. ಏಕೆಂದರೆ, ಎಲ್ಲಿಯವರೆಗೆ ಮತಗಳ್ಳತನ ನಡೆಯುತ್ತದೆಯೋ, ಅಲ್ಲಿಯವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ” ಎಂದಿದ್ದಾರೆ.

“ಯುವಜನರು ಇನ್ನು ಮುಂದೆ “ಉದ್ಯೋಗ ಕಳ್ಳತನ” ಅಥವಾ “ಮತ ಕಳ್ಳತನ”ವನ್ನು ಸಹಿಸುವುದಿಲ್ಲ. ಈಗ ಅಂತಿಮ ದೇಶಭಕ್ತಿ ಭಾರತವನ್ನು ನಿರುದ್ಯೋಗ ಮತ್ತು ಮತ ಕಳ್ಳತನದಿಂದ ಮುಕ್ತಗೊಳಿಸುವುದರಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉದ್ಯೋಗಕ್ಕಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್ ದೃಶ್ಯ ಹಾಗೂ ಇನ್ನೊಂದೆಡೆ ಪ್ರಧಾನಿ ಮೋದಿ ಸಸಿಗಳನ್ನು ನೆಡುವುದು, ನವಿಲುಗಳಿಗೆ ಆಹಾರ ನೀಡುವುದು ಮತ್ತು ಯೋಗಾಭ್ಯಾಸ ಮಾಡುತ್ತಿರುವ ದೃಶ್ಯಗಳಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಪೋಸ್ಟ್ ಜೊತೆ ಹಂಚಿಕೊಂಡಿದ್ದಾರೆ.

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...