Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 'ಜಾತಿ ಗಣತಿ'ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು. “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ‘ಜಾತಿ ಸಮೀಕ್ಷೆ’ ಎಂದು ವ್ಯಾಖ್ಯಾನಿಸುವ ಮೂಲಕ ತಪ್ಪಾಗಿ ಚಿತ್ರಿಸಿದ್ದಾರೆ” ಎಂದು ಆಕ್ಷೇಪಿಸಿದರು.

ಆಗ ಪೀಠವು “ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಹಾಗಾದರೆ, ಜಾತಿ ಸಮೀಕ್ಷೆಗೂ ಇದಕ್ಕೂ ವ್ಯತ್ಯಾಸವೇನು? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಘ್ವಿ, “ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ” ಎಂದರು.

“ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಪ್ರಕ್ರಿಯೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಹಾಗಾಗಿ, ಈ ಹಂತದಲ್ಲಿ ಮಧ್ಯಂತರ ತಡೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಅರ್ಜಿದಾರರ ವಾದವನ್ನು ಒಪ್ಪಿದರೆ ಎಲ್ಲಾ ದತ್ತಾಂಶ ಸಮೀಕ್ಷೆಯು ಗಣತಿ ಎಂದಾಗಲಿದೆ. ಸರ್ಕಾರ ಎಣಿಕೆಯ ದೃಷ್ಟಿಯಿಂದ ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯ್ದೆಗೆ ವಿರುದ್ಧ” ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ” ಎಂದರು.

ಮತ್ತೊಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು, “ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆಯ ಸೆಕ್ಷನ್‌ 9(1)(ii)ಅಡಿ ಸಮೀಕ್ಷೆ ನಡೆಸಲು ಯಾವುದೇ ಕಾರ್ಯ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342ಎ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಅಧಿಕಾರದ ಕುತಂತ್ರ ಕಸರತ್ತು” ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ.ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು, “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು “ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ” ಎಂದರು.

ಎಲ್ಲ ಪಕ್ಷಕಾರರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಇಂದಿಗೆ (ಸೆ.24) ಮುಂದೂಡಿದೆ.

Courtesy: livelaw.in

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...