Homeಮುಖಪುಟಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.

ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) ರಾತ್ರಿ ಜಾರ್ಖಂಡ್‌ನ ಟಾಟಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣದ ಚರ್ಚೆಯೂ ದಿನಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ.

ವಿಚಾರಣೆಯ ಬಳಿಕ ಬಜರಂಗದಳದ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಲ್ವರು ಹುಡುಗರು ಮತ್ತು 15 ಹುಡುಗಿಯರನ್ನು ಒಳಗೊಂಡ, ಒಟ್ಟು 19 ಜನರ ಗುಂಪು ಎರಡು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಬಿಹಾರ ಎಕ್ಸ್‌ಪ್ರೆಸ್ ಮೂಲಕ ಜಾರ್ಖಂಡ್‌ನ ಜಮ್ಶೆಡ್‌ಪುರಕ್ಕೆ ತೆರಳಿದ್ದರು. ಜಾರ್ಖಂಡ್‌ನ ಸರೈಕೇಲಾ-ಖರ್ಸವಾನ್ ಜಿಲ್ಲೆಯಲ್ಲಿ ಹದಿಹರೆಯದ ಜಾಗೃತಿ ಯೋಜನೆಗಳಲ್ಲಿ ಕೆಲಸ ಮಾಡುವ ಕ್ರೈಸ್ತ ಸನ್ಯಾಸಿನಿ ತಂಡದ ನೇತೃತ್ವ ವಹಿಸಿದ್ದರು.

“ರೈಲು ಪ್ರಯಾಣದ ಸಮಯದಲ್ಲಿ ಒಂದಷ್ಟು ಜನರು ತನ್ನನ್ನು ಮತ್ತು ಮಕ್ಕಳನ್ನು ಹಿಂಬಾಲಿಸುತ್ತಿದ್ದರು. ಈ ನಡುವೆ ಟಿಟಿಇ ಬಂದು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಅದಾದ, ಬಳಿಕ ಒಂದು ಗುಂಪು ಜಮಾಯಿಸಿತು. ನಂತರ ಆ ಗುಂಪು ಮತ್ತು ಟಿಟಿಇ ಮಕ್ಕಳಲ್ಲಿ ಅವರ ಧರ್ಮ ಕೇಳಲು ಪ್ರಾರಂಭಿಸಿದರು” ಎಂದು ಸನ್ಯಾಸಿನಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಹೇಳಿದೆ.

“ಹದಿಹರೆಯದವರ ಆರೋಗ್ಯ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 20-21 ರಂದು ಸುಂದರನಗರದಲ್ಲಿರುವ ಎನ್‌ಜಿಒ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು.”

“ಪ್ರತಿ ಕೆಲವು ತಿಂಗಳಿಗೊಮ್ಮೆ ನಡೆಸುವ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಅನುಮತಿ ನೀಡುವ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರು (ಮುಖ್ಯಸ್ಥ) ಸಹಿ ಮಾಡಿದ ಅನುಮತಿ ಪತ್ರಗಳನ್ನು ತೋರಿಸಿರುವುದಾಗಿ ನಾನು ನಮ್ಮನ್ನು ಸುತ್ತುವರಿದಿದ್ದ ಗುಂಪಿಗೆ ಹೇಳಿದೆ” ಎಂದು ಸನ್ಯಾಸಿನಿ ವಿವರಿಸಿದ್ದಾರೆ.

“ನನ್ನ ಜೊತೆಗಿದ್ದ ಮಕ್ಕಳಲ್ಲಿ ಕೆಲವರು ಹಲವು ವರ್ಷಗಳಿಂದ ನಮ್ಮೊಂದಿಗಿದ್ದಾರೆ. ಅನೇಕರು ತಮ್ಮದೇ ಆದ ಧರ್ಮವನ್ನು ಅನುಸರಿಸುತ್ತಿರುವ ಕ್ರೈಸ್ತೇತರ ಕುಟುಂಬಗಳಿಂದ ಬಂದವರು. ಕೆಲವು ಮಕ್ಕಳು ಕೊನೆಯ ಕ್ಷಣದಲ್ಲಿ ಸೇರಿಕೊಂಡ ಕಾರಣ ಅವರ ಆಧಾರ್ ಕಾರ್ಡ್‌ಗಳನ್ನು ಹೊಂದಿರಲಿಲ್ಲ” ಎಂದಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಭಯದಿಂದ ನಾನು ಕಾರ್ಯಕ್ರಮದ ನಿರ್ದೇಶಕ ಮತ್ತು ಪಾದ್ರಿ ಬೀರೇಂದ್ರ ಟೆಟೆ ಅವರಿಗೆ ಕರೆ ಮಾಡಿದೆ. ಅವರು ಬಂದಾಗ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ರಾಪ್ತ ವಯಸ್ಕರು ಕುಳಿತಿರುವುದನ್ನು ಮತ್ತು ಬಜರಂಗದಳ ಸದಸ್ಯರು ಹುಡುಗಿಯರ ಛಾಯಾಚಿತ್ರ ತೆಗೆಯುತ್ತಿದ್ದುದನ್ನು ಕಂಡರು” ಎಂದು ಸನ್ಯಾಸಿನಿ ಹೇಳಿದ್ದಾರೆ.

“ಮಕ್ಕಳನ್ನು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ರೈಲು ನಿಲ್ದಾಣದಲ್ಲಿ ಇರಿಸಲಾಗಿತ್ತು. ಮೊದಲು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ನಂತರ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಡಿಯಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ತರಬೇತಿ ಅವಧಿಗೆ ಹಾಜರಾಗಲು ಅವಕಾಶ ನೀಡಲಾಯಿತು” ಎಂದು ಸನ್ಯಾಸಿನಿ ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆಯವರೆಗೆ ಸನ್ಯಾಸಿನಿಯನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಜೆಮ್ಶೆಡ್‌ಪುರದ ಸುಂದರ್‌ನಗರದಲ್ಲಿರುವ ಕ್ಯಾಥೋಲಿಕ್ ದತ್ತಿ ಕೇಂದ್ರಕ್ಕೆ ಕರೆದೊಯ್ದರು ವರದಿಗಳು ಹೇಳಿವೆ.

ಮಕ್ಕಳ ಸಹಾಯವಾಣಿ 1098ರ ಪಂಕಜ್ ಗುಪ್ತಾ ಅವರು ಅಧಿಕಾರಿಗಳಿಗೆ ‘ಯಾವುದೇ ಅನುಮಾನಾಸ್ಪದ ಚಟುವಟಿಕೆ’ ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಸನ್ಯಾಸಿನಿಯ ಉದ್ದೇಶ ಮಕ್ಕಳನ್ನು ಜಾಗೃತಿ ಕಾರ್ಯಕ್ರಮಕ್ಕೆ ಕರೆದೊಯ್ಯುವುದೇ ಆಗಿತ್ತು ಎಂದು ಒತ್ತಿ ಹೇಳಿದ್ದಾರೆ.

ಜಿಆರ್‌ಪಿ ಉಪ ಅಧೀಕ್ಷಕಿ ಜಯಶ್ರೀ ಕುಜೂರ್ ಅವರು “ಇಲ್ಲಿಯವರೆಗೆ ಯಾವುದೇ ದೃಢೀಕೃತ ಧಾರ್ಮಿಕ ಮತಾಂತರ ಪ್ರಕರಣ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸ್ಥಳೀಯ ಮುಖ್ಯಸ್ಥ ಅರುಣ್ ಸಿಂಗ್ ತಮ್ಮ ಹಸ್ತಕ್ಷೇಪವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಬಜರಂಗದಳದ ಒಬ್ಬ ಕಾರ್ಯಕರ್ತ ಚಿಕ್ಕ ಮಕ್ಕಳ ಕೈಯಲ್ಲಿ ಕ್ರೈಸ್ತರ “ರಕ್ಷಾ ದಾರ” (ಪವಿತ್ರ ದಾರ) ಇರುವುದನ್ನು ಗಮನಿಸಿ ಸಂದೇಹ ವ್ಯಕ್ತಪಡಿಸಿದ್ದರು. ಆ ಬಳಿಕ ಸನ್ಯಾಸಿನಿ ಮತ್ತು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ.

“ಮಕ್ಕಳಿಗೆ ಸ್ಪಷ್ಟ ಉತ್ತರಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಸನ್ಯಾಸಿನಿ ಮತ್ತು ಪಾದ್ರಿಯವರು ಮಕ್ಕಳ ಪೋಷಕರಿಂದ ಅನುಮತಿ ಇದೆ ಎಂದು ಹೇಳಿದ್ದಾರೆ. ನಮಗೆ ಆ ಮಕ್ಕಳು ಈ ಕಾರ್ಯಕ್ರಮವನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರು ಎನಿಸಿದ್ದಾರೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಅಪ್ರಾಪ್ತ ಹುಡುಗಿಯ ಪೋಟೋಗಳನ್ನು ಸಾಕ್ಷ್ಯ ಸಂಗ್ರಹಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಡೆತಡೆಗಳ ಹೊರತಾಗಿಯೂ, ಅಪ್ರಾಪ್ತ ವಯಸ್ಕರು ಅಂತಿಮವಾಗಿ ಮನೆಗೆ ಮರಳುವ ಮೊದಲು ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಮಕ್ಕಳ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದು ಕ್ರಿಶ್ಚಿಯನ್ ಹಕ್ಕುಗಳ ಗುಂಪುಗಳು ಬಜರಂಗದಳದ ವಿರುದ್ದ ಆರೋಪ ಮಾಡಿದೆ. ಆಲ್ ಇಂಡಿಯಾ ಕ್ರಿಶ್ಚಿಯನ್ ಮೈನಾರಿಟಿ ಫ್ರಂಟ್ ಉಪಾಧ್ಯಕ್ಷ ಅಜಿತ್ ಟಿರ್ಕಿ, ಈ ​​ವಿಷಯವನ್ನು ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...