Homeಮುಖಪುಟಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.

ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) ರಾತ್ರಿ ಜಾರ್ಖಂಡ್‌ನ ಟಾಟಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣದ ಚರ್ಚೆಯೂ ದಿನಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ.

ವಿಚಾರಣೆಯ ಬಳಿಕ ಬಜರಂಗದಳದ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಲ್ವರು ಹುಡುಗರು ಮತ್ತು 15 ಹುಡುಗಿಯರನ್ನು ಒಳಗೊಂಡ, ಒಟ್ಟು 19 ಜನರ ಗುಂಪು ಎರಡು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಬಿಹಾರ ಎಕ್ಸ್‌ಪ್ರೆಸ್ ಮೂಲಕ ಜಾರ್ಖಂಡ್‌ನ ಜಮ್ಶೆಡ್‌ಪುರಕ್ಕೆ ತೆರಳಿದ್ದರು. ಜಾರ್ಖಂಡ್‌ನ ಸರೈಕೇಲಾ-ಖರ್ಸವಾನ್ ಜಿಲ್ಲೆಯಲ್ಲಿ ಹದಿಹರೆಯದ ಜಾಗೃತಿ ಯೋಜನೆಗಳಲ್ಲಿ ಕೆಲಸ ಮಾಡುವ ಕ್ರೈಸ್ತ ಸನ್ಯಾಸಿನಿ ತಂಡದ ನೇತೃತ್ವ ವಹಿಸಿದ್ದರು.

“ರೈಲು ಪ್ರಯಾಣದ ಸಮಯದಲ್ಲಿ ಒಂದಷ್ಟು ಜನರು ತನ್ನನ್ನು ಮತ್ತು ಮಕ್ಕಳನ್ನು ಹಿಂಬಾಲಿಸುತ್ತಿದ್ದರು. ಈ ನಡುವೆ ಟಿಟಿಇ ಬಂದು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಅದಾದ, ಬಳಿಕ ಒಂದು ಗುಂಪು ಜಮಾಯಿಸಿತು. ನಂತರ ಆ ಗುಂಪು ಮತ್ತು ಟಿಟಿಇ ಮಕ್ಕಳಲ್ಲಿ ಅವರ ಧರ್ಮ ಕೇಳಲು ಪ್ರಾರಂಭಿಸಿದರು” ಎಂದು ಸನ್ಯಾಸಿನಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಹೇಳಿದೆ.

“ಹದಿಹರೆಯದವರ ಆರೋಗ್ಯ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 20-21 ರಂದು ಸುಂದರನಗರದಲ್ಲಿರುವ ಎನ್‌ಜಿಒ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು.”

“ಪ್ರತಿ ಕೆಲವು ತಿಂಗಳಿಗೊಮ್ಮೆ ನಡೆಸುವ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಅನುಮತಿ ನೀಡುವ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರು (ಮುಖ್ಯಸ್ಥ) ಸಹಿ ಮಾಡಿದ ಅನುಮತಿ ಪತ್ರಗಳನ್ನು ತೋರಿಸಿರುವುದಾಗಿ ನಾನು ನಮ್ಮನ್ನು ಸುತ್ತುವರಿದಿದ್ದ ಗುಂಪಿಗೆ ಹೇಳಿದೆ” ಎಂದು ಸನ್ಯಾಸಿನಿ ವಿವರಿಸಿದ್ದಾರೆ.

“ನನ್ನ ಜೊತೆಗಿದ್ದ ಮಕ್ಕಳಲ್ಲಿ ಕೆಲವರು ಹಲವು ವರ್ಷಗಳಿಂದ ನಮ್ಮೊಂದಿಗಿದ್ದಾರೆ. ಅನೇಕರು ತಮ್ಮದೇ ಆದ ಧರ್ಮವನ್ನು ಅನುಸರಿಸುತ್ತಿರುವ ಕ್ರೈಸ್ತೇತರ ಕುಟುಂಬಗಳಿಂದ ಬಂದವರು. ಕೆಲವು ಮಕ್ಕಳು ಕೊನೆಯ ಕ್ಷಣದಲ್ಲಿ ಸೇರಿಕೊಂಡ ಕಾರಣ ಅವರ ಆಧಾರ್ ಕಾರ್ಡ್‌ಗಳನ್ನು ಹೊಂದಿರಲಿಲ್ಲ” ಎಂದಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಭಯದಿಂದ ನಾನು ಕಾರ್ಯಕ್ರಮದ ನಿರ್ದೇಶಕ ಮತ್ತು ಪಾದ್ರಿ ಬೀರೇಂದ್ರ ಟೆಟೆ ಅವರಿಗೆ ಕರೆ ಮಾಡಿದೆ. ಅವರು ಬಂದಾಗ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ರಾಪ್ತ ವಯಸ್ಕರು ಕುಳಿತಿರುವುದನ್ನು ಮತ್ತು ಬಜರಂಗದಳ ಸದಸ್ಯರು ಹುಡುಗಿಯರ ಛಾಯಾಚಿತ್ರ ತೆಗೆಯುತ್ತಿದ್ದುದನ್ನು ಕಂಡರು” ಎಂದು ಸನ್ಯಾಸಿನಿ ಹೇಳಿದ್ದಾರೆ.

“ಮಕ್ಕಳನ್ನು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ರೈಲು ನಿಲ್ದಾಣದಲ್ಲಿ ಇರಿಸಲಾಗಿತ್ತು. ಮೊದಲು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ನಂತರ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಡಿಯಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ತರಬೇತಿ ಅವಧಿಗೆ ಹಾಜರಾಗಲು ಅವಕಾಶ ನೀಡಲಾಯಿತು” ಎಂದು ಸನ್ಯಾಸಿನಿ ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆಯವರೆಗೆ ಸನ್ಯಾಸಿನಿಯನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಜೆಮ್ಶೆಡ್‌ಪುರದ ಸುಂದರ್‌ನಗರದಲ್ಲಿರುವ ಕ್ಯಾಥೋಲಿಕ್ ದತ್ತಿ ಕೇಂದ್ರಕ್ಕೆ ಕರೆದೊಯ್ದರು ವರದಿಗಳು ಹೇಳಿವೆ.

ಮಕ್ಕಳ ಸಹಾಯವಾಣಿ 1098ರ ಪಂಕಜ್ ಗುಪ್ತಾ ಅವರು ಅಧಿಕಾರಿಗಳಿಗೆ ‘ಯಾವುದೇ ಅನುಮಾನಾಸ್ಪದ ಚಟುವಟಿಕೆ’ ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಸನ್ಯಾಸಿನಿಯ ಉದ್ದೇಶ ಮಕ್ಕಳನ್ನು ಜಾಗೃತಿ ಕಾರ್ಯಕ್ರಮಕ್ಕೆ ಕರೆದೊಯ್ಯುವುದೇ ಆಗಿತ್ತು ಎಂದು ಒತ್ತಿ ಹೇಳಿದ್ದಾರೆ.

ಜಿಆರ್‌ಪಿ ಉಪ ಅಧೀಕ್ಷಕಿ ಜಯಶ್ರೀ ಕುಜೂರ್ ಅವರು “ಇಲ್ಲಿಯವರೆಗೆ ಯಾವುದೇ ದೃಢೀಕೃತ ಧಾರ್ಮಿಕ ಮತಾಂತರ ಪ್ರಕರಣ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸ್ಥಳೀಯ ಮುಖ್ಯಸ್ಥ ಅರುಣ್ ಸಿಂಗ್ ತಮ್ಮ ಹಸ್ತಕ್ಷೇಪವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಬಜರಂಗದಳದ ಒಬ್ಬ ಕಾರ್ಯಕರ್ತ ಚಿಕ್ಕ ಮಕ್ಕಳ ಕೈಯಲ್ಲಿ ಕ್ರೈಸ್ತರ “ರಕ್ಷಾ ದಾರ” (ಪವಿತ್ರ ದಾರ) ಇರುವುದನ್ನು ಗಮನಿಸಿ ಸಂದೇಹ ವ್ಯಕ್ತಪಡಿಸಿದ್ದರು. ಆ ಬಳಿಕ ಸನ್ಯಾಸಿನಿ ಮತ್ತು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ.

“ಮಕ್ಕಳಿಗೆ ಸ್ಪಷ್ಟ ಉತ್ತರಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಸನ್ಯಾಸಿನಿ ಮತ್ತು ಪಾದ್ರಿಯವರು ಮಕ್ಕಳ ಪೋಷಕರಿಂದ ಅನುಮತಿ ಇದೆ ಎಂದು ಹೇಳಿದ್ದಾರೆ. ನಮಗೆ ಆ ಮಕ್ಕಳು ಈ ಕಾರ್ಯಕ್ರಮವನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರು ಎನಿಸಿದ್ದಾರೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಅಪ್ರಾಪ್ತ ಹುಡುಗಿಯ ಪೋಟೋಗಳನ್ನು ಸಾಕ್ಷ್ಯ ಸಂಗ್ರಹಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಡೆತಡೆಗಳ ಹೊರತಾಗಿಯೂ, ಅಪ್ರಾಪ್ತ ವಯಸ್ಕರು ಅಂತಿಮವಾಗಿ ಮನೆಗೆ ಮರಳುವ ಮೊದಲು ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಮಕ್ಕಳ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದು ಕ್ರಿಶ್ಚಿಯನ್ ಹಕ್ಕುಗಳ ಗುಂಪುಗಳು ಬಜರಂಗದಳದ ವಿರುದ್ದ ಆರೋಪ ಮಾಡಿದೆ. ಆಲ್ ಇಂಡಿಯಾ ಕ್ರಿಶ್ಚಿಯನ್ ಮೈನಾರಿಟಿ ಫ್ರಂಟ್ ಉಪಾಧ್ಯಕ್ಷ ಅಜಿತ್ ಟಿರ್ಕಿ, ಈ ​​ವಿಷಯವನ್ನು ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...