Homeಮುಖಪುಟಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

ಬಜರಂಗದಳದಿಂದ ಮತಾಂತರ ಆರೋಪ: ಕ್ರೈಸ್ತ ಸನ್ಯಾಸಿನಿ, 19 ಆದಿವಾಸಿ ಅಪ್ರಾಪ್ತರನ್ನು ವಿಚಾರಣೆಗೊಳಪಡಿಸಿದ ಪೊಲೀಸರು

- Advertisement -
- Advertisement -

ಬಜರಂಗದಳದ ಮತಾಂತರ ಮತ್ತು ಮಾನವ ಕಳ್ಳ ಸಾಗಣಿಕೆ ಆರೋಪದ ಬಳಿಕ, ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಪೊಲೀಸರು ಬಂಧಿಸಿದ ಪ್ರಕರಣ ಕಳೆದ ಜುಲೈ ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಡೆದಿತ್ತು. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.

ಅದೇ ರೀತಿ, ಬಜರಂಗದಳ ಸದಸ್ಯರು ಮತಾಂತರದ ಆರೋಪ ಮಾಡಿದ ಹಿನ್ನೆಲೆ, ಕ್ಯಾಥೋಲಿಕ್ ಸನ್ಯಾಸಿನಿ ಮತ್ತು 19 ಆದಿವಾಸಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದ ಪೊಲೀಸರು, ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಸೆ.19) ರಾತ್ರಿ ಜಾರ್ಖಂಡ್‌ನ ಟಾಟಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ಪ್ರಕರಣದ ಚರ್ಚೆಯೂ ದಿನಕಳೆದಂತೆ ಕಾವು ಪಡೆದುಕೊಳ್ಳುತ್ತಿದೆ.

ವಿಚಾರಣೆಯ ಬಳಿಕ ಬಜರಂಗದಳದ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಲ್ವರು ಹುಡುಗರು ಮತ್ತು 15 ಹುಡುಗಿಯರನ್ನು ಒಳಗೊಂಡ, ಒಟ್ಟು 19 ಜನರ ಗುಂಪು ಎರಡು ದಿನಗಳ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕಾಗಿ ದಕ್ಷಿಣ ಬಿಹಾರ ಎಕ್ಸ್‌ಪ್ರೆಸ್ ಮೂಲಕ ಜಾರ್ಖಂಡ್‌ನ ಜಮ್ಶೆಡ್‌ಪುರಕ್ಕೆ ತೆರಳಿದ್ದರು. ಜಾರ್ಖಂಡ್‌ನ ಸರೈಕೇಲಾ-ಖರ್ಸವಾನ್ ಜಿಲ್ಲೆಯಲ್ಲಿ ಹದಿಹರೆಯದ ಜಾಗೃತಿ ಯೋಜನೆಗಳಲ್ಲಿ ಕೆಲಸ ಮಾಡುವ ಕ್ರೈಸ್ತ ಸನ್ಯಾಸಿನಿ ತಂಡದ ನೇತೃತ್ವ ವಹಿಸಿದ್ದರು.

“ರೈಲು ಪ್ರಯಾಣದ ಸಮಯದಲ್ಲಿ ಒಂದಷ್ಟು ಜನರು ತನ್ನನ್ನು ಮತ್ತು ಮಕ್ಕಳನ್ನು ಹಿಂಬಾಲಿಸುತ್ತಿದ್ದರು. ಈ ನಡುವೆ ಟಿಟಿಇ ಬಂದು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಅದಾದ, ಬಳಿಕ ಒಂದು ಗುಂಪು ಜಮಾಯಿಸಿತು. ನಂತರ ಆ ಗುಂಪು ಮತ್ತು ಟಿಟಿಇ ಮಕ್ಕಳಲ್ಲಿ ಅವರ ಧರ್ಮ ಕೇಳಲು ಪ್ರಾರಂಭಿಸಿದರು” ಎಂದು ಸನ್ಯಾಸಿನಿ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಹೇಳಿದೆ.

“ಹದಿಹರೆಯದವರ ಆರೋಗ್ಯ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳನ್ನು ಆಹ್ವಾನಿಸಲಾಗಿತ್ತು. ಸೆಪ್ಟೆಂಬರ್ 20-21 ರಂದು ಸುಂದರನಗರದಲ್ಲಿರುವ ಎನ್‌ಜಿಒ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು.”

“ಪ್ರತಿ ಕೆಲವು ತಿಂಗಳಿಗೊಮ್ಮೆ ನಡೆಸುವ ಕಾರ್ಯಕ್ರಮದಲ್ಲಿ ಮಕ್ಕಳು ಭಾಗವಹಿಸಲು ಅನುಮತಿ ನೀಡುವ ಪೋಷಕರು ಮತ್ತು ಗ್ರಾಮದ ಮುಖ್ಯಸ್ಥರು (ಮುಖ್ಯಸ್ಥ) ಸಹಿ ಮಾಡಿದ ಅನುಮತಿ ಪತ್ರಗಳನ್ನು ತೋರಿಸಿರುವುದಾಗಿ ನಾನು ನಮ್ಮನ್ನು ಸುತ್ತುವರಿದಿದ್ದ ಗುಂಪಿಗೆ ಹೇಳಿದೆ” ಎಂದು ಸನ್ಯಾಸಿನಿ ವಿವರಿಸಿದ್ದಾರೆ.

“ನನ್ನ ಜೊತೆಗಿದ್ದ ಮಕ್ಕಳಲ್ಲಿ ಕೆಲವರು ಹಲವು ವರ್ಷಗಳಿಂದ ನಮ್ಮೊಂದಿಗಿದ್ದಾರೆ. ಅನೇಕರು ತಮ್ಮದೇ ಆದ ಧರ್ಮವನ್ನು ಅನುಸರಿಸುತ್ತಿರುವ ಕ್ರೈಸ್ತೇತರ ಕುಟುಂಬಗಳಿಂದ ಬಂದವರು. ಕೆಲವು ಮಕ್ಕಳು ಕೊನೆಯ ಕ್ಷಣದಲ್ಲಿ ಸೇರಿಕೊಂಡ ಕಾರಣ ಅವರ ಆಧಾರ್ ಕಾರ್ಡ್‌ಗಳನ್ನು ಹೊಂದಿರಲಿಲ್ಲ” ಎಂದಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಭಯದಿಂದ ನಾನು ಕಾರ್ಯಕ್ರಮದ ನಿರ್ದೇಶಕ ಮತ್ತು ಪಾದ್ರಿ ಬೀರೇಂದ್ರ ಟೆಟೆ ಅವರಿಗೆ ಕರೆ ಮಾಡಿದೆ. ಅವರು ಬಂದಾಗ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ರಾಪ್ತ ವಯಸ್ಕರು ಕುಳಿತಿರುವುದನ್ನು ಮತ್ತು ಬಜರಂಗದಳ ಸದಸ್ಯರು ಹುಡುಗಿಯರ ಛಾಯಾಚಿತ್ರ ತೆಗೆಯುತ್ತಿದ್ದುದನ್ನು ಕಂಡರು” ಎಂದು ಸನ್ಯಾಸಿನಿ ಹೇಳಿದ್ದಾರೆ.

“ಮಕ್ಕಳನ್ನು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 4 ಗಂಟೆಯವರೆಗೆ ರೈಲು ನಿಲ್ದಾಣದಲ್ಲಿ ಇರಿಸಲಾಗಿತ್ತು. ಮೊದಲು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ನಂತರ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಡಿಯಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ತರಬೇತಿ ಅವಧಿಗೆ ಹಾಜರಾಗಲು ಅವಕಾಶ ನೀಡಲಾಯಿತು” ಎಂದು ಸನ್ಯಾಸಿನಿ ತಿಳಿಸಿದ್ದಾರೆ.

ಶನಿವಾರ ಬೆಳಗಿನ ಜಾವ 3 ಗಂಟೆಯವರೆಗೆ ಸನ್ಯಾಸಿನಿಯನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಜೆಮ್ಶೆಡ್‌ಪುರದ ಸುಂದರ್‌ನಗರದಲ್ಲಿರುವ ಕ್ಯಾಥೋಲಿಕ್ ದತ್ತಿ ಕೇಂದ್ರಕ್ಕೆ ಕರೆದೊಯ್ದರು ವರದಿಗಳು ಹೇಳಿವೆ.

ಮಕ್ಕಳ ಸಹಾಯವಾಣಿ 1098ರ ಪಂಕಜ್ ಗುಪ್ತಾ ಅವರು ಅಧಿಕಾರಿಗಳಿಗೆ ‘ಯಾವುದೇ ಅನುಮಾನಾಸ್ಪದ ಚಟುವಟಿಕೆ’ ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಸನ್ಯಾಸಿನಿಯ ಉದ್ದೇಶ ಮಕ್ಕಳನ್ನು ಜಾಗೃತಿ ಕಾರ್ಯಕ್ರಮಕ್ಕೆ ಕರೆದೊಯ್ಯುವುದೇ ಆಗಿತ್ತು ಎಂದು ಒತ್ತಿ ಹೇಳಿದ್ದಾರೆ.

ಜಿಆರ್‌ಪಿ ಉಪ ಅಧೀಕ್ಷಕಿ ಜಯಶ್ರೀ ಕುಜೂರ್ ಅವರು “ಇಲ್ಲಿಯವರೆಗೆ ಯಾವುದೇ ದೃಢೀಕೃತ ಧಾರ್ಮಿಕ ಮತಾಂತರ ಪ್ರಕರಣ ನಡೆದಿಲ್ಲ” ಎಂದು ಹೇಳಿದ್ದಾರೆ. ಆದರೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸ್ಥಳೀಯ ಮುಖ್ಯಸ್ಥ ಅರುಣ್ ಸಿಂಗ್ ತಮ್ಮ ಹಸ್ತಕ್ಷೇಪವನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಬಜರಂಗದಳದ ಒಬ್ಬ ಕಾರ್ಯಕರ್ತ ಚಿಕ್ಕ ಮಕ್ಕಳ ಕೈಯಲ್ಲಿ ಕ್ರೈಸ್ತರ “ರಕ್ಷಾ ದಾರ” (ಪವಿತ್ರ ದಾರ) ಇರುವುದನ್ನು ಗಮನಿಸಿ ಸಂದೇಹ ವ್ಯಕ್ತಪಡಿಸಿದ್ದರು. ಆ ಬಳಿಕ ಸನ್ಯಾಸಿನಿ ಮತ್ತು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ.

“ಮಕ್ಕಳಿಗೆ ಸ್ಪಷ್ಟ ಉತ್ತರಗಳನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಸನ್ಯಾಸಿನಿ ಮತ್ತು ಪಾದ್ರಿಯವರು ಮಕ್ಕಳ ಪೋಷಕರಿಂದ ಅನುಮತಿ ಇದೆ ಎಂದು ಹೇಳಿದ್ದಾರೆ. ನಮಗೆ ಆ ಮಕ್ಕಳು ಈ ಕಾರ್ಯಕ್ರಮವನ್ನು ಅರ್ಥಮಾಡಿಕೊಳ್ಳಲು ತುಂಬಾ ಚಿಕ್ಕವರು ಎನಿಸಿದ್ದಾರೆ” ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಅಪ್ರಾಪ್ತ ಹುಡುಗಿಯ ಪೋಟೋಗಳನ್ನು ಸಾಕ್ಷ್ಯ ಸಂಗ್ರಹಕ್ಕೆ ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಡೆತಡೆಗಳ ಹೊರತಾಗಿಯೂ, ಅಪ್ರಾಪ್ತ ವಯಸ್ಕರು ಅಂತಿಮವಾಗಿ ಮನೆಗೆ ಮರಳುವ ಮೊದಲು ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ.

ಮಕ್ಕಳ ಫೋಟೋ, ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ ಎಂದು ಕ್ರಿಶ್ಚಿಯನ್ ಹಕ್ಕುಗಳ ಗುಂಪುಗಳು ಬಜರಂಗದಳದ ವಿರುದ್ದ ಆರೋಪ ಮಾಡಿದೆ. ಆಲ್ ಇಂಡಿಯಾ ಕ್ರಿಶ್ಚಿಯನ್ ಮೈನಾರಿಟಿ ಫ್ರಂಟ್ ಉಪಾಧ್ಯಕ್ಷ ಅಜಿತ್ ಟಿರ್ಕಿ, ಈ ​​ವಿಷಯವನ್ನು ಅಧಿಕಾರಿಗಳೊಂದಿಗೆ ಪ್ರಸ್ತಾಪಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...