Homeಮುಖಪುಟಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

ಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ, ಮತಾಂತರವು ಅಕ್ರಮವಾಗಿದ್ದಲ್ಲಿ ಅದರ ಆಧಾರದ ಮೇಲೆ ನಡೆದ ಮದುವೆ ಸ್ವಯಂಚಾಲಿತವಾಗಿ ಅಮಾನ್ಯವಾಗುತ್ತದೆ ಮತ್ತು ಕಾನೂನಿನ ದೃಷ್ಟಿಯಲ್ಲಿ ಗಂಡುಹೆಣ್ಣನ್ನು ದಂಪತಿಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ್ ಅವರು ಮೊಹಮ್ಮದ್ ಬಿನ್ ಖಾಸಿಂ ಅಲಿಯಾಸ್ ಅಕ್ಬರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ. ಅರ್ಜಿಯಲ್ಲಿ, ತಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು. ಆದಾಗ್ಯೂ, ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಇಬ್ಬರೂ ವಿವಾಹವಾಗಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲರು, ಖಾಸಿಂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಜೈನಬ್ ಪರ್ವೀನ್ ಅಲಿಯಾಸ್ ಚಂದ್ರಕಾಂತ ಹಿಂದೂ ಎಂದು ತಿಳಿಸಿದರು. 2025 ಫೆಬ್ರವರಿ 22ರಂದು ಚಂದ್ರಕಾಂತ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದರು ಮತ್ತು ಬಗ್ಗೆ ಖಾನ್ಕಾಹೆ ಆಲಿಯಾ ಆರಿಫಿಯಾ ಒಂದು ಪ್ರಮಾಣಪತ್ರವನ್ನು ನೀಡಿತ್ತು. 2025 ಮೇ 26ರಂದು ಇಬ್ಬರೂ ಮುಸ್ಲಿಂ ಕಾನೂನಿನ ಪ್ರಕಾರ ವಿಧಿವಿಧಾನಗಳಂತೆ ವಿವಾಹವಾಗಿದ್ದು, ಸಂಬಂಧಪಟ್ಟ ಖಾಜಿಯೊಬ್ಬರು ವಿವಾಹ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ವಕೀಲರು ತಿಳಿಸಿದರು.

ಆದರೆ, ಹೆಚ್ಚುವರಿ ಮುಖ್ಯ ಸ್ಥಾಯಿ ಕೌನ್ಸಿಲ್ ಇದನ್ನು ತೀವ್ರವಾಗಿ ವಿರೋಧಿಸಿದರು. ಖಾನ್ಕಾಹೆ ಆಲಿಯಾ ಆರಿಫಿಯಾ ನೀಡಿರುವ ಮತಾಂತರ ಪ್ರಮಾಣಪತ್ರ ನಕಲಿ ಮತ್ತು ಕಪೋಲಕಲ್ಪಿತ ಎಂದು ಅವರು ವಾದಿಸಿದರು. ಏಕೆಂದರೆ, ಜಾಮಿಯಾ ಆರಿಫಿಯಾ, ಸೈಯದ್ ಸರವಾನ್, ಕೌಶಂಬಿ ಅವರ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕರು ಸಂಸ್ಥೆಯು ಫೆಬ್ರವರಿ 22ರಂದು ಯಾವುದೇ ಪ್ರಮಾಣಪತ್ರ ನೀಡಿಲ್ಲ ಎಂದು ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ ಎಂದು ಅವರು ವಾದಿಸಿದರು.

ಇದರ ಮೇಲೆ ನ್ಯಾಯಾಲಯವು, “ಕಕ್ಷಿದಾರರ ಪರ ವಕೀಲರು ಮಂಡಿಸಿದ ವಾದಗಳು ಮತ್ತು ಸಂಪೂರ್ಣ ದಾಖಲೆಗಳ ಪರಿಶೀಲನೆಯ ನಂತರ ಒಂದು ವಿಷಯ ಸ್ಪಷ್ಟವಾಗುತ್ತದೆ, ಅದು ಏನೆಂದರೆ, ನಕಲಿ ದಾಖಲೆಯ ಆಧಾರದ ಮೇಲೆ ಮತಾಂತರವು ಉತ್ತರ ಪ್ರದೇಶ ಅಕ್ರಮ ಮತಾಂತರ ಕಾಯ್ದೆಯಲ್ಲಿ ತಿಳಿಸಲಾದ ಯಾವುದೇ ಅಗತ್ಯ ಅಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲಎಂದು ಹೇಳಿತು.

ಇದೇ ರೀತಿ, ಅರ್ಜಿದಾರರ ನಡುವೆ ನಡೆದಿರುವ ಮದುವೆಯು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗಿಲ್ಲ. ಏಕೆಂದರೆ, ಮುಸ್ಲಿಂ ಕಾನೂನಿನ ಪ್ರಕಾರ, ಮದುವೆ ಎಂಬುದು ಒಂದೇ ಧರ್ಮದ ಅನುಯಾಯಿಗಳು ಮತ್ತು ಭಕ್ತರ ನಡುವಿನ ಒಪ್ಪಂದ. ಒಮ್ಮೆ ಎರಡನೇ ಅರ್ಜಿದಾರರ (ಚಂದ್ರಕಾಂತ) ಮತಾಂತರವು ಅಕ್ರಮವಾದರೆ, ಇಬ್ಬರೂ ಕಾನೂನಿನ ದೃಷ್ಟಿಯಲ್ಲಿ ದಂಪತಿಗಳೆಂದು ಮಾನ್ಯತೆ ಪಡೆಯಲು ಸಾಧ್ಯವಿಲ್ಲಎಂದು ನ್ಯಾಯಾಲಯ ಹೇಳಿತು.

ಆದಾಗ್ಯೂ, ಮತಾಂತರಕ್ಕೆ ಯಾವುದೇ ವಿಧಿವಿಧಾನ ಅಗತ್ಯವಿಲ್ಲದ ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುವಂತೆ ನ್ಯಾಯಾಲಯ ಇಬ್ಬರಿಗೂ ನಿರ್ದೇಶನ ನೀಡಿದೆ.

ಅಲ್ಲದೆ, ಚಂದ್ರಕಾಂತ ಅವರು ತಮ್ಮ ಪೋಷಕರೊಂದಿಗೆ ವಾಸಿಸಲು ಇಷ್ಟವಿಲ್ಲ ಮತ್ತು ರಕ್ಷಣಾ ಗೃಹದಲ್ಲಿ ಉಳಿಯಲು ಒಪ್ಪಿಗೆ ನೀಡಿರುವುದರಿಂದ, ವಿಶೇಷ ವಿವಾಹ ಕಾಯ್ದೆಯಡಿ ಪ್ರಮಾಣಪತ್ರ ಸಿಗುವವರೆಗೂ ಎರಡನೇ ಅರ್ಜಿದಾರರನ್ನು ಪ್ರಯಾಗ್ರಾಜ್ನಲ್ಲಿರುವ ಮಹಿಳಾ ರಕ್ಷಣಾ ಗೃಹದಲ್ಲಿ ಇಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಮ್ ಖಾನ್ 23 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...