Homeಮುಖಪುಟಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

ಬಿಹಾರ ಚುನಾವಣೆ ಮೋದಿ ಆಡಳಿತ ಅಂತ್ಯದ ಆರಂಭ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ಮೋದಿ ಸರ್ಕಾರದ ‘ಭ್ರಷ್ಟ’ ಮತ್ತು ‘ಅಸಮರ್ಥ’ ಆಡಳಿತದ ಅಂತ್ಯದ ಆರಂಭ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ (ಸೆ.24) ಹೇಳಿದರು.

ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಬಿಹಾರದ ರಾಜಕೀಯ ಸನ್ನಿವೇಶದ ಕುರಿತು ಪ್ರತಿಕ್ರಿಯಿಸಿದ ಖರ್ಗೆ ಅವರು, ಆಡಳಿತಾರೂಢ ಎನ್‌ಡಿಎಯೊಳಗಿನ ಬಿರುಕನ್ನು ಎತ್ತಿ ತೋರಿಸಿದರು. ಆಂತರಿಕ ಕಲಹ ಈಗ ಬಹಿರಂಗವಾಗಿದೆ ಎಂದರು.

ಬಿಜೆಪಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ನೋಡುತ್ತಿದೆ. ಬಿಹಾರದ ಜನರು ಬಿಜೆಪಿಯ ವಿಭಜಕ ಕಾರ್ಯಸೂಚಿಯನ್ನು ತಿರಸ್ಕರಿಸುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕು, ಧಾರ್ಮಿಕ ಧ್ರುವೀಕರಣವಲ್ಲ ಎಂದು ಖರ್ಗೆ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಖರ್ಗೆ ಅವರು, ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ರಂಗಗಳಲ್ಲಿ ಇವರು ದೇಶವನ್ನು ವಿಫಲಗೊಳಿಸಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ನಾಯಕರನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಭಾರತವು ಅತ್ಯಂತ ಸವಾಲಿನ ಅವಧಿಯನ್ನು ಎದುರಿಸುತ್ತಿದೆ, ರಾಜತಾಂತ್ರಿಕ ತಪ್ಪು ಹೆಜ್ಜೆಗಳು ಮತ್ತು ದೇಶೀಯ ಪ್ರಕ್ಷುಬ್ಧತೆಗಳು ಮೋದಿ ಅವಧಿಯಲ್ಲಿ ‘ಆಡಳಿತದ ಸಂಪೂರ್ಣ ವೈಫಲ್ಯ’ವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಸಮಸ್ಯೆಗಳು ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ರಾಜತಾಂತ್ರಿಕ ವೈಫಲ್ಯದ ಪರಿಣಾಮವಾಗಿದೆ. ಪ್ರಧಾನಿಯವರು ‘ನನ್ನ ಸ್ನೇಹಿತ’ ಎಂದು ಹೆಮ್ಮೆಪಟ್ಟವರು ಇಂದು ಭಾರತವನ್ನು ಹಲವು ಸಮಸ್ಯೆಗಳಿಗೆ ಸಿಲುಕಿಸುತ್ತಿದ್ದಾರೆ ಎಂದರು.

ಇಂದು, ನಮ್ಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ತಿರುಚುತ್ತಿರುವಾಗ, ಪ್ರಜಾಪ್ರಭುತ್ವದ ತಾಯಿಯಾದ ಬಿಹಾರದಲ್ಲಿ ನಮ್ಮ ವಿಸ್ತೃತ ಸಿಡಬ್ಲ್ಯೂಸಿ ಸಭೆಯನ್ನು ನಡೆಸುವುದು ಮತ್ತು ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸುವುದು ಅತ್ಯಗತ್ಯ ಎಂದು ಖರ್ಗೆ ಹೇಳಿದರು.

ಪ್ರಜಾಪ್ರಭುತ್ವದ ಅಡಿಪಾಯ ನ್ಯಾಯಯುತ ಮತ್ತು ಪಾರದರ್ಶಕ ಚುನಾವಣೆಗಳು ಎಂದು ಪ್ರತಿಪಾದಿಸಿದ ಖರ್ಗೆ, ಚುನಾವಣಾ ಆಯೋಗದ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಇಂದು ಗಂಭೀರ ಪ್ರಶ್ನೆಗಳು ಎದ್ದಿವೆ ಎಂದರು.

ವಿವಿಧ ರಾಜ್ಯಗಳಲ್ಲಿ ಬಹಿರಂಗಗೊಂಡಿರುವ ಮತಗಳ್ಳತನ ಕುರಿತ ಪ್ರಶ್ನೆಗಳಿಗೆ ಉತ್ತರಿಸುವ ಬದಲು, ಚುನಾವಣಾ ಆಯೋಗವು ನಮ್ಮಿಂದ ಅಫಿಡವಿಟ್‌ ಕೇಳುತ್ತಿದೆ ಎಂದು ಖರ್ಗೆ ಕಿಡಿಕಾರಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಉಲ್ಲೇಖಿಸಿದ ಖರ್ಗೆ, “ಬಿಹಾರದ ಉದಾಹರಣೆಯನ್ನು ಮುಂದಿಟ್ಟುಕೊಂಡು ಈಗ ದೇಶದಾದ್ಯಂತ ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

‘ಮತಗಳ್ಳತನ’ ಎಂದರೆ ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದುರ್ಬಲರು ಮತ್ತು ಬಡವರಿಗೆ ಸೇರಿದ ಪಡಿತರ, ಪಿಂಚಣಿ, ಔಷಧ, ಮಕ್ಕಳ ವಿದ್ಯಾರ್ಥಿವೇತನ ಮತ್ತು ಪರೀಕ್ಷಾ ಶುಲ್ಕದ ಕಳ್ಳತನ ಎಂದು ಖರ್ಗೆ ಹೇಳಿದರು.

‘ಮತದಾರರ ಅಧಿಕಾರ ಯಾತ್ರೆ’ ಬಿಹಾರದ ಜನರಲ್ಲಿ ಜಾಗೃತಿ ಮೂಡಿಸಿದೆ. ಜನರು ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಎಂದರು.

ಹೆಚ್ಚುತ್ತಿರುವ ನಿರುದ್ಯೋಗ, ಸಾಮಾಜಿಕ ಧ್ರುವೀಕರಣ ಮತ್ತು ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥಿತ ದುರ್ಬಲಗೊಳಿಸುವಿಕೆಯ ಬಿಕ್ಕಟ್ಟುಗಳನ್ನು ಎತ್ತಿ ತೋರಿಸಿದ ಖರ್ಗೆಮ, ಮೋದಿ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

ತೀವ್ರಗೊಂಡ ‘ಲಡಾಖ್ ರಾಜ್ಯತ್ವ’ ಹೋರಾಟ: ಲೇಹ್‌ನಲ್ಲಿ ಬೀದಿಗಿಳಿದ ಯುವಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...