Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...