Homeಮುಖಪುಟಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ 'ನಕಲ್ ಜಿಹಾದ್' ಎಂದ ಸಿಎಂ ಧಾಮಿ

ಉತ್ತರಾಖಂಡ: ಪ್ರಶ್ನೆ ಪತ್ರಿಕೆ ಸೋರಿಕೆ ‘ನಕಲ್ ಜಿಹಾದ್’ ಎಂದ ಸಿಎಂ ಧಾಮಿ

- Advertisement -
- Advertisement -

ಉತ್ತರಾಖಂಡದಲ್ಲಿ ಸರ್ಕಾರ ಉದ್ಯೋಗ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ಬುಧವಾರ (ಸೆ.24) ಬೃಹತ್ ಪ್ರತಿಭಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಶ್ನೆ ಪತ್ರಿಕೆ ಸೋರಿಕೆ ಒಂದು ‘ನಕಲ್ ಜಿಹಾದ್’ ಅಥವಾ ‘ವಂಚನೆ ಜಿಹಾದ್’ ಕೃತ್ಯ ಎಂದು ಹೇಳಿದ್ದಾರೆ.

‘ಉತ್ತರಾಖಂಡ ಅಧೀನ ಸೇವಾ ಆಯ್ಕೆ ಆಯೋಗ’ದ ಪರೀಕ್ಷೆಯು ಭಾನುವಾರ (ಸೆ.21) ನಡೆದಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಮೂರು ಪುಟಗಳು ಆನ್‌ಲೈನ್‌ನಲ್ಲಿ ಹರಿದಾಡಿವೆ ಎಂದು ವರದಿಯಾಗಿದೆ. ಆ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ದ ನೂರಾರು ಮಂದಿ ಭಾನುವಾರದಿಂದಲೇ ಡೆಹ್ರಾಡೂನ್‌ನ ಪರೇಡ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲಿಗೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ‘ಉತ್ತರಾಖಂಡ್ ಬೆರೋಝ್‌ಗರ್ ಸಂಘಟನ್’ ಮತ್ತು ಇತರ ಗುಂಪುಗಳು ಜನರಿಗೆ ಕರೆ ನೀಡಿದ್ದವು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಲಿದ್ ಮಲಿಕ್ ಮತ್ತು ಆತನ ಸಹೋದರಿ ಸಬಿಯಾ ಎಂಬ ಇಬ್ಬರು ವ್ಯಕ್ತಿಗಳನ್ನು ಮಂಗಳವಾರ (ಸೆ.23) ಪೊಲೀಸರು ಬಂಧಿಸಿದ್ದಾರೆ. ಹರಿದ್ವಾರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಮಲಿಕ್, ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಹೋದರಿ ಸಬಿಯಾ ಜೊತೆ ಹಂಚಿಕೊಂಡಿದ್ದ. ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಬಿಯಾ ಅದನ್ನು ಮಲಿಕ್‌ನ ಸ್ನೇಹಿತ ಸುಮನ್‌ಗೆ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

“ಪ್ರಾಧ್ಯಾಪಕ ಸುಮನ್ ಅವರು ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಿದ್ದರು. ಆದರೆ, ಅದನ್ನು ಸಬಿಯಾಗೆ ವಾಪಸ್ ಕಳುಹಿಸಿರಲಿಲ್ಲ. ಬದಲಾಗಿ, ಸ್ಥಳೀಯ ರಾಜಕಾರಣಿ ಬಾಬಿ ಪನ್ವಾರ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪನ್ವಾರ್ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ” ಎಂದು ಡೆಹ್ರಾಡೂನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸಿಂಗ್ ಹೇಳಿದ್ದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಮಲಿಕ್ ಮತ್ತು ಸಬಿಯಾ ಮಾತ್ರ ಕಾರಣರಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ನಡೆದ ಕಾಲೇಜಿನ ಪ್ರಾಂಶುಪಾಲ ಧರ್ಮೇಂದ್ರ ಚೌಹಾನ್ ಆಡಳಿತಾರೂಢ ಬಿಜೆಪಿಯ ಹರಿದ್ವಾರ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದಾರೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಚೌಹಾನ್ ಪ್ರಕಾರ, ಪರೀಕ್ಷೆಯ ಸಮಯದಲ್ಲಿ ಬಳಸಲಾದ 18 ಕೊಠಡಿಗಳಲ್ಲಿ ಕೇವಲ 15 ಕೊಠಡಿಗಳಲ್ಲಿ ಮಾತ್ರ ಮೊಬೈಲ್ ಸಿಗ್ನಲ್‌ಗಳನ್ನು ತಡೆಯಲು ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಖಾಲಿದ್ ಜಾಮರ್ ಇಲ್ಲದ ಕೊಠಡಿಯಲ್ಲಿ ಇದ್ದರು.

ಧರ್ಮೇಂದ್ರ ಚೌಹಾನ್ ಹೇಳಿಕೆಯ ಪ್ರಕಾರ, ಉತ್ತರಾಖಂಡ ನೇಮಕಾತಿ ಆಯೋಗವು ಪರೀಕ್ಷೆಯ ಸಮಯದಲ್ಲಿ ಕೊಠಡಿಗಳ ಒಳಗಿನ ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಲು ಸೂಚಿಸಿತ್ತು ಮತ್ತು ಕೇವಲ ಕಾಲೇಜಿನ ಮುಖ್ಯದ್ವಾರ ಹಾಗೂ ನಿಯಂತ್ರಣ ಕೊಠಡಿಯಲ್ಲಿ ಮಾತ್ರ ಕ್ಯಾಮರಾಗಳನ್ನು ಇರಿಸಲಾಗಿತ್ತು. ಇದರಿಂದ ಪರೀಕ್ಷಾ ಕೊಠಡಿಗಳ ಒಳಗಿನ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿರಲಿಲ್ಲ.

ಬುಧವಾರ ಬಿಜೆಪಿಯ ಹೊಸ ಕಾರ್ಯಕರ್ತರೊಂದಿಗೆ ಮಾತನಾಡಿದ ಸಿಎಂ ಧಾಮಿ, “ಕೆಲವು ವ್ಯಕ್ತಿಗಳು ಒಗ್ಗಟ್ಟಾಗಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಕೋಚಿಂಗ್ ಮತ್ತು ವಂಚನೆ ಮಾಫಿಯಾದಲ್ಲಿ ತೊಡಗಿರುವ ಗುಂಪುಗಳು ಒಟ್ಟಾಗಿ ರಾಜ್ಯದಲ್ಲಿ ‘ನಕಲ್ ಜಿಹಾದ್’ ನಡೆಸುತ್ತಿವೆ. ಈ ಕೃತ್ಯಗಳ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮಾಫಿಯಾಗಳು ಮತ್ತು ತಪ್ಪಿತಸ್ಥರನ್ನು ಸಂಪೂರ್ಣವಾಗಿ ನಾಶಮಾಡುವವರೆಗೆ ತಾವು ವಿಶ್ರಮಿಸುವುದಿಲ್ಲ ಎಂದು ಧಾಮಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಸೂರ್ಯಕಾಂತ್ ಧಸಾಮಾ ಅವರು ಸಿಎಂ ಧಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಬಿಜೆಪಿ ಕೋಮುವಾದವನ್ನು ಒಂದು ಸುಲಭ ಮಾರ್ಗವಾಗಿ ಬಳಸುತ್ತಿದೆ ಎಂದಿದ್ದಾರೆ.

ಪರೀಕ್ಷೆಗೆ ಒಂದು ದಿನ ಮೊದಲು ವಂಚಕ ಎನ್ನಲಾದ ಹಕಮ್ ಸಿಂಗ್‌ನನ್ನು ಬೇರೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಹೆಸರುಗಳು ಬಹಿರಂಗವಾಗಿವೆ. ಆದರೆ, ಸಿಎಂ ಧಾಮಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಉಲ್ಲೇಖಿಸಿ ಪ್ರಕರಣವನ್ನು ‘ಜಿಹಾದ್’ ಎಂದು ಕರೆದಿದ್ದಾರೆ ಎಂದು ಧಸಾಮಾ ಕಿಡಿಕಾರಿದ್ದಾರೆ.

ಪರೀಕ್ಷೆಯಲ್ಲಿ ಪಾಸ್ ಮಾಡಿಸುವ ಭರವಸೆ ನೀಡಿ ಆರು ಅಭ್ಯರ್ಥಿಗಳಿಂದ 12 ಲಕ್ಷದಿಂದ 15 ಲಕ್ಷ ರೂಪಾಯಿಗಳವರೆಗೆ ಹಣ ವಸೂಲಿ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಪೊಲೀಸರು ಹಕಮ್ ಸಿಂಗ್ ಮತ್ತು ಪಂಕಜ್ ಗೌರ್‌ ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

‘ಕಳ್ಳತನ ನಡೆದ ಬಳಿಕ ಬೀಗ ಹಾಕಿದ್ದಾರೆ’: ಚುನಾವಣಾ ಆಯೋಗದ ಹೊಸ ‘ಇ-ಸೈನ್’ ವೈಶಿಷ್ಟ್ಯ’ಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...