Homeಮುಖಪುಟ'ಮಾನವೀಯತೆ, ನೈತಿಕತೆಯ ಪತನ': ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

‘ಮಾನವೀಯತೆ, ನೈತಿಕತೆಯ ಪತನ’: ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಹಿಸಿರುವ ‘ಮಹಾ ಮೌನ’ವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿದ್ದು, ಇದು ‘ಮಾನವೀಯತೆ ಮತ್ತು ನೈತಿಕತೆಯ ಸಂಪೂರ್ಣ ಪತನ’ ಎಂದಿದ್ದಾರೆ.

ದಿ ಹಿಂದೂ ಪತ್ರಿಕೆಯಲ್ಲಿ ಪ್ರಕಟವಾದ ‘ಭಾರತದ ಮೌನ ಸ್ವರ, ಪ್ಯಾಲೆಸ್ತೀನ್‌ನೊಂದಿಗಿನ ಅಂತರ’ ಎಂಬ ತೀಕ್ಷ್ಣವಾದ ತನ್ನ ಅಭಿಪ್ರಾಯ ಲೇಖನದಲ್ಲಿ, ಸೋನಿಯಾ ಗಾಂಧಿಯವರು “ಭಾರತವು ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ತನ್ನ ಹಳೆಯ ನಾಯಕತ್ವವನ್ನು ಮರಳಿ ಪಡೆಯಬೇಕು. ವೈಯಕ್ತಿಕ ರಾಜತಾಂತ್ರಿಕತೆಯನ್ನು ಮೀರಿ, ನ್ಯಾಯ, ಮಾನವ ಹಕ್ಕುಗಳು ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ತನ್ನ ಬದ್ಧತೆಯನ್ನು ಮರಳಿ ದೃಢಪಡಿಸಬೇಕೆಂದು ಒತ್ತಾಯಿಸಿದ್ದಾರೆ.

“ಪ್ರಸ್ತುತ ಸರ್ಕಾರದ ಪ್ರತಿಕ್ರಿಯೆಯು ಭಾರತದ ಸಾಂವಿಧಾನಿಕ ಮೌಲ್ಯಗಳು ಅಥವಾ ಕಾರ್ಯತಂತ್ರದ ಹಿತಾಸಕ್ತಿಗಳಿಗಿಂತ ಪ್ರಧಾನಿ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ವೈಯಕ್ತಿಕ ಸ್ನೇಹದಿಂದ ಹೆಚ್ಚಾಗಿ ಪ್ರೇರಿತವಾಗಿದೆ. ಈ ರೀತಿಯ ರಾಜತಾಂತ್ರಿಕತೆಯು ಸಮರ್ಥನೀಯವಲ್ಲ ಮತ್ತು ವಿದೇಶಾಂಗ ನೀತಿಯನ್ನು ಯಾರೋ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಗುರುತಿಸಿದ ಫ್ರಾನ್ಸ್ , ಇಂಗ್ಲೆಂಡ್, ಕೆನಡಾ, ಪೋರ್ಚುಗಲ್ ಆಸ್ಟ್ರೇಲಿಯಾ ಬಗ್ಗೆ ಉಲ್ಲೇಖಿಸಿದ ಸೋನಿಯಾ ಗಾಂಧಿ, ದೀರ್ಘಕಾಲದಿಂದ ಬಳಲುತ್ತಿರುವ ಪ್ಯಾಲೆಸ್ತೀನ್ ಜನರ ನ್ಯಾಯ ಸಮ್ಮತ ಆಕಾಂಕ್ಷೆಗಳನ್ನು ಈಡೇರಿಸುವ ಮೊದಲ ಹೆಜ್ಜೆ ಇದು ಎಂದು ಹೇಳಿದ್ದಾರೆ. ಇಂದಿನವರೆಗೆ, ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳಲ್ಲಿ 150ಕ್ಕೂ ಹೆಚ್ಚು ದೇಶಗಳು ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ನೀಡಿವೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್‌ಗೆ (ಪಿಎಲ್ಒ) ವರ್ಷಗಳ ಬೆಂಬಲದ ನಂತರ, 1988ರ ನವೆಂಬರ್ 18ರಂದು ಭಾರತ ಅಧಿಕೃತವಾಗಿ ಪ್ಯಾಲೆಸ್ತೀನ್‌ ಅನ್ನು ರಾಷ್ಟ್ರವನ್ನಾಗಿ ಗುರುತಿಸಿತ್ತು. ಈ ವಿಚಾರದಲ್ಲಿ ಭಾರತ ನಾಯಕತ್ವವನ್ನು ಮೆರೆದಿತ್ತು ಎಂದು ಸೋನಿಯಾ ಗಾಂಧಿ ನೆನಪಿಸಿದ್ದಾರೆ.

ಸ್ವಾತಂತ್ರ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿಯ ವಿರುದ್ಧ ಭಾರತ ಧ್ವನಿ ಗೂಡಿಸಿತ್ತು, 1954 ರಿಂದ 1962ರ ನಡುವೆ ನಡೆದ ಅಲ್ಜೀರಿಯಾ ಸ್ವಾತಂತ್ರ್ಯ ಹೋರಾಟಕ್ಕೆ ಭಾರತವು ಬಲವಾಗಿ ಬೆಂಬಲ ನೀಡಿತ್ತು. ಆಧುನಿಕ ಬಾಂಗ್ಲಾದೇಶದ ರಚನೆಯ ವೇಳೆ 1971ರಲ್ಲಿ ಪೂರ್ವ ಪಾಕಿಸ್ತಾನದಲ್ಲಿನ ಹತ್ಯಾಕಾಂಡ ತಡೆಯುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿತ್ತು ಎಂದು ಸೋನಿಯಾ ಗಾಂಧಿ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಇಸ್ರೇಲ್–ಪ್ಯಾಲೆಸ್ತೀನ್‌ ನಿರ್ಣಾಯಕ ಮತ್ತು ಸೂಕ್ಷ್ಮ ವಿಷಯದ ಬಗ್ಗೆಯೂ ಕೂಡ ಭಾರತವು ಬಹಳ ಹಿಂದಿನಿಂದಲೂ ತತ್ವಬದ್ಧ ನಿಲುವನ್ನು ಕಾಯ್ದುಕೊಂಡಿದೆ. ಶಾಂತಿ ಮತ್ತು ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೂಕ್ಷ್ಮವಾದ ನಿಲುವು ತೆಗೆದುಕೊಂಡಿದೆ. ಪ್ಯಾಲೆಸ್ತೀನ್ ವಿಚಾರದಲ್ಲಿ ಭಾರತವು ನಾಯಕತ್ವ ತೋರಬೇಕು. ಇದು ಈಗ ನ್ಯಾಯ, ಗುರುತು, ಗೌರವ ಮತ್ತು ಮಾನವ ಹಕ್ಕುಗಳ ಹೋರಾಟವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಕ್ಟೋಬರ್ 2023ರಲ್ಲಿ ಹಮಾಸ್-ಇಸ್ರೇಲ್ ಸಂಘರ್ಷ ಭುಗಿಲೆದ್ದ ನಂತರ ಗಾಝಾ ಬಿಕ್ಕಟ್ಟಿನ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಸೋನಿಯಾ ಗಾಂಧಿಯವರು ಸಾರ್ವಜನಿಕವಾಗಿ ಟೀಕಿಸುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ಇಸ್ರೇಲ್ ಆಕ್ರಮಣದಲ್ಲಿ 17,000 ಮಕ್ಕಳು ಸೇರಿದಂತೆ 55,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಇದು ‘ಜನಾಂಗೀಯ ಹತ್ಯೆಗಿಂತ ಕಡಿಮೆಯಿಲ್ಲ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...