Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...