Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...