Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...