Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...