Homeಅಂತರಾಷ್ಟ್ರೀಯಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

- Advertisement -
- Advertisement -

ಜಾಗತಿಕ ಕನ್ಸಲ್ಟೆನ್ಸಿ ದೈತ್ಯ ಆಕ್ಸೆಂಚರ್ ಕಳೆದ ಮೂರು ತಿಂಗಳಲ್ಲಿ ಪ್ರಪಂಚದಾದ್ಯಂತ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.

ಕೃತಕ ಬುದ್ದಿಮತ್ತೆಯ (ಎಐ) ತ್ವರಿತ ಅಳವಡಿಕೆ ಮತ್ತು ಕಾರ್ಪೊರೇಟ್ ಬೇಡಿಕೆ ನಿಧಾನವಾಗುತ್ತಿರುವುದು ವಜಾಗೊಳಿಸುವಿಕೆಗೆ ಕಾರಣ ಎಂದು ಕಂಪನಿ ಬಹಿರಂಗಪಡಿಸಿದೆ.

ಕಂಪನಿಯು 865 ಮಿಲಿಯನ್ ಡಾಲರ್‌ ಮೊತ್ತದ ಮರುರಚನೆ ಕಾರ್ಯಕ್ರಮದ ಭಾಗವಾಗಿ ಉದ್ಯೋಗ ಕಡಿತ ಮಾಡಲಾಗಿದೆ ಎಂದು ದೃಢಪಡಿಸಿದೆ. ಇದರ ಜೊತೆಗೆ, ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಕಂಪನಿಯು ಕೆಲವು ಉದ್ಯೋಗಿಗಳನ್ನು ತ್ವರಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಿದೆ. ಏಕೆಂದರೆ, ನಮಗೆ ಅವರನ್ನು ಮರುಕೌಶಲ್ಯಗೊಳಿಸುವ ಮೂಲಕ ಕಂಪನಿಗೆ ಬೇಕಾದ ಹೊಸ ಕೌಶಲ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಕಂಪನಿಯು ಉದ್ಯೋಗಿಗಳನ್ನು ಕೃತಕ ಬುದ್ಧಿಮತ್ತೆ ಆಧಾರಿತ ಸೇವೆಗಳಿಗೆ ಕ್ಲೈಂಟ್‌ಗಳ ಬೇಡಿಕೆಗೆ ತಕ್ಕಂತೆ ಹೊಂದಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪ್ರಕ್ರಿಯೆಯಲ್ಲಿ, ಕೆಲವು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡಬೇಕಾಗಿದೆ. ಏಕೆಂದರೆ, ಅವರನ್ನು ಉಳಿಸಿಕೊಳ್ಳಲು ನಮಗೆ ಸಾಧ್ಯವಿಲ್ಲ ಎಂದು ಆಕ್ಸೆಂಚರ್‌ನ ಸಿಇಒ ಜೂಲಿ ಸ್ವೀಟ್ ಹೇಳಿದ್ದಾರೆ.

ಆಗಸ್ಟ್ ತಿಂಗಳ ಅಂತ್ಯದಲ್ಲಿ, ಆಕ್ಸೆಂಚರ್‌ನ ಜಾಗತಿಕ ಉದ್ಯೋಗಿಗಳ ಸಂಖ್ಯೆ 7,79,000 ಆಗಿತ್ತು, ಇದು ಮೂರು ತಿಂಗಳ ಹಿಂದೆ ಇದ್ದ 7,91,000 ರಿಂದ ಕಡಿಮೆಯಾಗಿದೆ. ಆಕ್ಸೆಂಚರ್‌ನಲ್ಲಿ ಉದ್ಯೋಗ ಕಡಿತದ ಈ ಸುತ್ತು ಈ ವರ್ಷದ ಆರಂಭದಲ್ಲಿ ಪ್ರಾರಂಭವಾಗಿದ್ದು, ಇದು 2025ರ ನವೆಂಬರ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಕಂಪನಿಯ ಮರುರಚನೆಯು ಮುಖ್ಯವಾಗಿ ವಜಾಗೊಳಿಸುವಿಕೆಯ ವೆಚ್ಚಗಳನ್ನು ಒಳಗೊಂಡಿದ್ದು, ಇದರಿಂದ ಕಂಪನಿಗೆ 1 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.

ಉದ್ಯೋಗ ಕಡಿತದ ಜೊತೆಗೆ, ಆಕ್ಸೆಂಚರ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಕೌಶಲ್ಯ ವೃದ್ಧಿಯ ತರಬೇತಿಯಲ್ಲಿ ಹೂಡಿಕೆ ಮಾಡುತ್ತಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಏಜೆಂಟಿಕ್ ಕೃತಕ ಬುದ್ಧಿಮತ್ತೆ (ಏಜೆಂಟಿಕ್ ಎಐ) ಕುರಿತು ತರಬೇತಿ ನೀಡಲು ಪ್ರಾರಂಭಿಸಿದೆ. ಇದು ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸಲು ವಿನ್ಯಾಸಗೊಳಿಸಲಾದ ಎಐ ಉಪಕರಣಗಳ ಹೊಸ ತರಂಗವಾಗಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ತರಬೇತಿಯು ಕ್ಲೈಂಟ್‌ಗಳ ನಿರೀಕ್ಷೆಗಳನ್ನು ಪೂರೈಸಲು ಮುಖ್ಯವಾಗಿದೆ ಎಂದು ಹೇಳಿದ್ದಾರೆ, ಏಕೆಂದರೆ ವಿಶ್ವದಾದ್ಯಂತದ ವ್ಯವಹಾರಗಳು ಎಐನೊಂದಿಗೆ ತಮ್ಮ ಕಾರ್ಯಾಚರಣೆಗಳನ್ನು ಮರುಆವಿಷ್ಕಾರ ಮಾಡಲು ಪ್ರಯತ್ನಿಸುತ್ತಿದೆ.

ಉದ್ಯೋಗ ಕಡಿತದ ಹೊರತಾಗಿಯೂ, ಆಕ್ಸೆಂಚರ್ ಕಂಪನಿಯು 2025ನೇ ಆರ್ಥಿಕ ವರ್ಷದ ಜೂನ್-ಆಗಸ್ಟ್ ತ್ರೈಮಾಸಿಕದಲ್ಲಿ ವಾರ್ಷಿಕವಾಗಿ 7% ಆದಾಯ ವೃದ್ಧಿಯನ್ನು ವರದಿ ಮಾಡಿದೆ. ಒಟ್ಟು 17.6 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದ್ದು, ಇದು ನಿರೀಕ್ಷೆಗಳನ್ನು ಮೀರಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ಫಲಿತಾಂಶಗಳು ಆಕ್ಸೆಂಚರ್‌ ತನ್ನ “ಕ್ಲೈಂಟ್‌ಗಳಿಗೆ ಎಐನೊಂದಿಗೆ ಮರುಆವಿಷ್ಕಾರ ಮಾಡಲು ಮತ್ತು ಮುನ್ನಡೆಸಲು ಸಹಾಯ ಮಾಡುವ ವಿಶಿಷ್ಟ ಸಾಮರ್ಥ್ಯವನ್ನು” ಪ್ರದರ್ಶಿಸುತ್ತವೆ ಎಂದು ಹೇಳಿದ್ದಾರೆ.

ಆಮದು ಔಷಧಗಳಿಗೆ ಭಾರೀ ಹೊರೆ: ಶೇ.100ರಷ್ಟು ತೆರಿಗೆ ವಿಧಿಸಲು ಟ್ರಂಪ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...