Homeಮುಖಪುಟಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ...ಪತ್ನಿ ಗೀತಾಂಜಲಿ ಹೇಳಿದ್ದೇನು?

ಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ…ಪತ್ನಿ ಗೀತಾಂಜಲಿ ಹೇಳಿದ್ದೇನು?

- Advertisement -
- Advertisement -

ಜೈಲಿನಲ್ಲಿರುವ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ‘ಪಾಕಿಸ್ತಾನದೊಂದಿಗೆ ಸಂಪರ್ಕ’ ಇದೆ, ‘ಆರ್ಥಿಕ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪಗಳನ್ನು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಳ್ಳಿ ಹಾಕಿದ್ದಾರೆ. ವಾಂಗ್ಚುಕ್ ಲೇಹ್‌ನಲ್ಲಿ ಹಿಂಸಾಚಾರ ಪ್ರಚೋದಿಸಿದ್ದಾರೆ ಎಂಬ ಆರೋಪ ಸುಳ್ಳು ಎಂದಿದ್ದಾರೆ.

ವಾಂಗ್ಚುಕ್ ಸಾಧ್ಯವಾದಷ್ಟು ಗಾಂಧಿ ಹಾದಿಯಲ್ಲಿ ಪ್ರತಿಭಟಿಸಿದ್ದಾರೆ. ಸೆಪ್ಟೆಂಬರ್ 24ರಂದು ಪರಿಸ್ಥಿತಿ ಉಲ್ಬಣಗೊಂಡಿದ್ದು ನನ್ನ ಪತಿಯಿಂದ ಅಲ್ಲ, ಸಿಆರ್‌ಪಿಎಫ್‌ನ ಕ್ರಮಗಳಿಂದಾಗಿ ಎಂದು ಆಂಗ್ಮೋ ಹೇಳಿದ್ದಾರೆ.

ವಾಂಗ್ಚುಕ್ ಅವರನ್ನು ಬಂಧಿಸಿದ್ದು ಏಕೆ?

ಲಡಾಖ್‌ನ ಹಕ್ಕುಗಳಿಗಾಗಿ ಕಳೆದ ಐದು ವರ್ಷಗಳಿಂದ ಸತತ ಹೋರಾಟ ನಡೆಸಿಕೊಂಡು ಬರುತಿದ್ದ ವಾಂಗ್ಚುಕ್ ಅವರನ್ನು ಶುಕ್ರವಾರ (ಸೆ.26) ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು, ಸಂವಿಧಾನದ ಆರನೇ ಪರಿಚ್ಛೇಧದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಯುವಜನರ ಗುಂಪೊಂದು ಲೇಹ್‌ನಲ್ಲಿ ಹಠಾತ್ ಬೀದಿಗಿಳಿದಿತ್ತು. ಇದರಿಂದ ಹೋರಾಟ ಹಿಂಸಾತ್ಮಕ ರೂಪ ಪಡೆದಿತ್ತು. ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡು, ಸುಮಾರು 90 ಜನರು ಗಾಯಗೊಂಡಿದ್ದರು.

ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲು ಪ್ರಚೋದಿಸಿದ್ದು ಸೋನಮ್ ವಾಂಗ್ಚುಕ್ ಎಂದು ಆರೋಪಿಸಿ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ಲಡಾಖ್‌ನಿಂದ ಸ್ಥಳಾಂತರಿಸಲಾಗಿದ್ದು, ರಾಜಸ್ಥಾನದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಲರ್ನಿಂಗ್ (ಹೆಚ್‌ಐಎಎಲ್‌) ನ ಸಹ-ಸಂಸ್ಥಾಪಕಿಯಾಗಿರುವ ಆಂಗ್ಮೋ, ತನ್ನ ಪತಿಯ ಬಂಧನದ ನಂತರ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗಿಲ್ಲ ಮತ್ತು ಬಂಧನ ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಬಂಧನದ ಆದೇಶದ ಪ್ರತಿಯನ್ನು ಶುಕ್ರವಾರ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇನ್ನೂ ಸಿಕ್ಕಿಲ್ಲ, ನಾವು ಕಾನೂನು ಮೊರೆ ಹೋಗುತ್ತೇವೆ ಎಂದು ಆಂಗ್ಮೋ ಹೇಳಿದ್ದಾರೆ.

ಆಪಾದಿತ ಪಾಕಿಸ್ತಾನ ಸಂಪರ್ಕ

ಸೋನಮ್ ವಾಂಗ್ಚುಕ್‌ ಅವರಿಗೆ ಪಾಕಿಸ್ತಾನದೊಂದಿಗೆ ಸಂಬಂಧ ಇದೆಯೇ? ಎಂದು ತನಿಖೆ ಮಾಡಲಾಗುತ್ತಿದೆ. ಕಳೆದ ತಿಂಗಳು ಒಬ್ಬ ಪಾಕಿಸ್ತಾನಿ ಗುಪ್ತಚರನನ್ನು ಬಂಧಿಸಲಾಗಿತ್ತು, ಆತ ಗಡಿಯಾಚೆಗಿನ ಪ್ರತಿಭಟನೆಗಳ ವಿಡಿಯೋ ಕಳುಹಿಸಿದ್ದ ಎಂದು ಆರೋಪವಿದೆ. ಇದರ ಜೊತೆಗೆ, ಸೋನಮ್ ವಾಂಗ್ಚುಕ್‌ ಅವರು ಪಾಕಿಸ್ತಾನಕ್ಕೆ ಒಂದು ಡಾನ್ ಮೀಡಿಯಾ ಕಾರ್ಯಕ್ರಮಕ್ಕೆ ಹೋಗಿದ್ದು, ಅಧಿಕಾರಿಗಳಿಗೆ ‘ಸಂದೇಹಾಸ್ಪದ’ ಎನಿಸಿದೆ. ಹೀಗಾಗಿ, ಈ ವಿಷಯಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಲಡಾಖ್‌ನ ಪೊಲೀಸ್ ಮುಖ್ಯಸ್ಥ ಎಸ್‌ಡಿ ಸಿಂಗ್ ಜಮ್ವಾಲ್ ತಿಳಿಸಿದ್ದಾರೆ.

ಆಂಗ್ಮೋ ಪೊಲೀಸರ ಆರೋಪಗಳನ್ನು ತಳ್ಳಿ ಹಾಕಿದ್ದು, ವಾಂಗ್ಚುಕ್ ಅವರ ಭೇಟಿಗಳು ವೃತ್ತಿಪರ ಮತ್ತು ಹವಾಮಾನ ಕೇಂದ್ರಿತವಾಗಿದ್ದವು ಎಂದಿದ್ದಾರೆ.

ಪಾಕಿಸ್ತಾನದಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಹವಾಮಾನ ಬದಲಾವಣೆಯ ಸಮ್ಮೇಳನದಲ್ಲಿ ವಾಂಗ್ಚುಕ್ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು. ನಾವು ವಿಶ್ವಸಂಸ್ಥೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿದ್ದೆವು, ಅದು ಹವಾಮಾನ ಬದಲಾವಣೆಯ ಕುರಿತಾಗಿತ್ತು. ಹಿಮಾಲಯದ ತುದಿಯಲ್ಲಿರುವ ಹಿಮನದಿ ನಾನು ಪಾಕಿಸ್ತಾನಕ್ಕೆ ಹರಿಯುತ್ತೇನೋ ಅಥವಾ ಭಾರತಕ್ಕೆ ಹರಿಯುತ್ತೇನೋ ಎಂದು ನೋಡುವುದಿಲ್ಲ” ಎಂದು ಆಂಗ್ಮೋ ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ‘ಬ್ರೀತ್ ಪಾಕಿಸ್ತಾನ್’ ಸಮ್ಮೇಳನವನ್ನು ವಿಶ್ವಸಂಸ್ಥೆಯ ಪಾಕಿಸ್ತಾನ ಮತ್ತು ಡಾನ್ ಮೀಡಿಯಾ ಆಯೋಜಿಸಿತ್ತು. ಬಹುರಾಷ್ಟ್ರೀಯ ಸಹಕಾರವನ್ನು ಅದು ಒಳಗೊಂಡಿತ್ತು. ಇಂಟರ್ನ್ಯಾಷನಲ್ ಸೆಂಟರ್ ಫಾರ್ ಇಂಟಿಗ್ರೇಟೆಡ್ ಮೌಂಟೇನ್ ಡೆವಲಪ್ಮೆಂಟ್ (ಐಸಿಐಎಂಒಡಿ) ನಂತಹ ಸಂಸ್ಥೆಗಳು ಅದರಲ್ಲಿ ಇತ್ತು. ಇದು ಎಂಟು ಹಿಂದೂ ಕುಶ್ ದೇಶಗಳನ್ನು ಒಟ್ಟುಗೂಡಿಸುತ್ತದೆ ಮತ್ತು ವಿಭಿನ್ನ ವಿಷಯಗಳ ಮೇಲೆ ಕೆಲಸ ಮಾಡುತ್ತದೆ. ನಾವು ಐಸಿಐಎಂಒಡಿಯ ಹಿಮಾಲಯನ್ ವಿಶ್ವವಿದ್ಯಾಲಯ ಒಕ್ಕೂಟದ ಭಾಗವಾಗಿದ್ದೆವು ಎಂದಿದ್ದಾರೆ.

ಐಸಿಐಎಂಒಡಿ 1983ರಲ್ಲಿ ಸ್ಥಾಪನೆಯಾದ ನೇಪಾಳ ಮೂಲದ ಸಂಸ್ಥೆಯಾಗಿದ್ದು, ಇದು ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ ಮತ್ತು ಪಾಕಿಸ್ತಾನ ಸೇರಿ ಹಿಂದೂ ಕುಶ್ ಹಿಮಾಲಯ ಪ್ರದೇಶದ ಎಂಟು ಪ್ರಾದೇಶಿಕ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ನೇಪಾಳ ಮತ್ತು ಬಾಂಗ್ಲಾದೇಶದ ಉಲ್ಲೇಖವನ್ನು ಸೋನಮ್ ಒಂದು ಉದಾಹರಣೆಯಾಗಿ ನೀಡಿದ್ದಾರೆ. ಅವರ ಹೇಳಿಕೆಯ ಮೂಲ ಉದ್ದೇಶವೆಂದರೆ, “ಸರ್ಕಾರಗಳು ಜನರ ಕೂಗಿಗೆ ಗಮನ ಕೊಡದಿದ್ದರೆ, ಅದು ಕ್ರಾಂತಿಗೆ ಕಾರಣವಾಗಬಹುದು” ಎಂಬುದು. ಆದ್ದರಿಂದ, ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರದು ಎಂದು ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಶಾಂತಿಯುತ ಪ್ರತಿಭಟನೆ ಮತ್ತು ಭದ್ರತಾ ಪಡೆಗಳ ಪ್ರತಿಕ್ರಿಯೆ

ಸೋನಮ್ ವಾಂಗ್ಚುಕ್‌ರ ಕಾರ್ಯಕ್ರಮಗಳು ಯಾವಾಗಲೂ ಅಹಿಂಸಾತ್ಮಕವಾಗಿರುತ್ತವೆ. ಲೇಹ್ ಏಪೆಕ್ಸ್ ಬಾಡಿಯ ಪ್ರತಿಭಟನೆ ಶಾಂತಿಯುತವಾಗಿತ್ತು ಮತ್ತು ವಿದ್ಯಾರ್ಥಿಗಳು ಹಾಗೂ ಯುವಕರು ಹಿಂಸಾಚಾರಕ್ಕೆ ಯೋಜನೆ ಮಾಡಿರಲಿಲ್ಲ. ಆದರೆ, ಸಿಆರ್‌ಪಿಎಫ್ ಸಿಬ್ಬಂದಿ ಟಿಯರ್ ಗ್ಯಾಸ್ ಸಿಡಿಸಿದಾಗ, ಯುವಕರು ಕಲ್ಲು ತೂರಾಟ ಮಾಡಿ ಪ್ರತಿಕ್ರಿಯಿಸಿದರು. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು ಎಂದು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ಗೆ ಗುಂಡು ಹಾರಿಸುವ ಹಕ್ಕು ನೀಡಿದ್ದು ಯಾರು? ನಮ್ಮ ಸ್ವಂತ ಜನರ ಮೇಲೆ, ನಮ್ಮ ಸ್ವಂತ ಯುವಕರ ಮೇಲೆ ಏಕೆ ಗುಂಡು ಹಾರಿಸಬೇಕು? ಎಂದು ಸಿಆರ್‌ಪಿಎಫ್‌ನ ಕ್ರಮಗಳನ್ನು ಅಂಗ್ಮೋ ಪ್ರಶ್ನಿಸಿದ್ದಾರೆ.

ಹಣಕಾಸಿನ ಆರೋಪಗಳು ಮತ್ತು ಸಂಸ್ಥೆಗಳು

ಗೀತಾಂಜಲಿ ಆಂಗ್ಮೋ ಅವರು ಸೋನಮ್ ವಾಂಗ್ಚುಕ್‌ರ ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್‌ನೇಟಿವ್ಸ್ (ಹೆಚ್‌ಐಎಎಲ್‌) ಮತ್ತು ಇತರ ಉಪಕ್ರಮಗಳ ಮೇಲಿನ ಆರ್ಥಿಕ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹೆಚ್‌ಐಎಎಲ್‌ಗೆ ಬಂದ ವಿದೇಶಿ ಧನಸಹಾಯವು ದೇಣಿಗೆಯಲ್ಲ, ಅದು ಸಲಹಾ ಕಾರ್ಯಕ್ಕಾಗಿ ಬಂದ ಹಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಸಂಸ್ಥೆಯು ತನ್ನ 400 ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಎಫ್‌ಸಿಆರ್‍ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಮತ್ತು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ವಿಷಯಗಳ ಬಗ್ಗೆ ಅಂಗ್ಮೋ ಮಾತನಾಡಿದ್ದಾರೆ. ಈ ವಿಷಯಗಳಲ್ಲಿ ವಿಳಂಬವಾಗಿರುವುದು ಆಡಳಿತಾತ್ಮಕ ವರ್ಗೀಕರಣ ಮತ್ತು ತಡೆ ಹಿಡಿಯುವಿಕೆಯಿಂದ, ಯಾವುದೇ ತಪ್ಪು ಕೃತ್ಯದಿಂದ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್‌ಐಎಎಲ್‌ ಸಂಸ್ಥೆಯು ಐಸ್ ಸ್ತೂಪಗಳು ಮತ್ತು ನಿಷ್ಕ್ರಿಯ ಸೌರ ಕಟ್ಟಡಗಳಂತಹ ಆವಿಷ್ಕಾರಗಳನ್ನು ಬಳಸಿಕೊಂಡು ಸುಸ್ಥಿರ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 4ರಂದು ನಡೆದ ಹಿಂಸಾಚಾರದ ನಂತರ, ಕೇಂದ್ರ ಗೃಹ ಸಚಿವಾಲಯವು ಸೋನಮ್ ವಾಂಗ್ಚುಕ್‌ ಅವರು ಸ್ಥಾಪಿಸಿದ ಎಸ್‌ಇಸಿಎಂಒಎಲ್‌ ಸಂಸ್ಥೆಯ ಎಫ್‌ಸಿಆರ್‍ಎ ಪರವಾನಗಿಯನ್ನು ಆರ್ಥಿಕ ಅಕ್ರಮಗಳ ಆರೋಪದ ಮೇಲೆ ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....