Homeಮುಖಪುಟಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ...ಪತ್ನಿ ಗೀತಾಂಜಲಿ ಹೇಳಿದ್ದೇನು?

ಸೋನಮ್ ವಾಂಗ್ಚುಕ್‌ಗೆ ಪಾಕಿಸ್ತಾನದೊಂದಿಗೆ ಸಂಪರ್ಕ ಇತ್ತಾ…ಪತ್ನಿ ಗೀತಾಂಜಲಿ ಹೇಳಿದ್ದೇನು?

- Advertisement -
- Advertisement -

ಜೈಲಿನಲ್ಲಿರುವ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ‘ಪಾಕಿಸ್ತಾನದೊಂದಿಗೆ ಸಂಪರ್ಕ’ ಇದೆ, ‘ಆರ್ಥಿಕ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪಗಳನ್ನು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಳ್ಳಿ ಹಾಕಿದ್ದಾರೆ. ವಾಂಗ್ಚುಕ್ ಲೇಹ್‌ನಲ್ಲಿ ಹಿಂಸಾಚಾರ ಪ್ರಚೋದಿಸಿದ್ದಾರೆ ಎಂಬ ಆರೋಪ ಸುಳ್ಳು ಎಂದಿದ್ದಾರೆ.

ವಾಂಗ್ಚುಕ್ ಸಾಧ್ಯವಾದಷ್ಟು ಗಾಂಧಿ ಹಾದಿಯಲ್ಲಿ ಪ್ರತಿಭಟಿಸಿದ್ದಾರೆ. ಸೆಪ್ಟೆಂಬರ್ 24ರಂದು ಪರಿಸ್ಥಿತಿ ಉಲ್ಬಣಗೊಂಡಿದ್ದು ನನ್ನ ಪತಿಯಿಂದ ಅಲ್ಲ, ಸಿಆರ್‌ಪಿಎಫ್‌ನ ಕ್ರಮಗಳಿಂದಾಗಿ ಎಂದು ಆಂಗ್ಮೋ ಹೇಳಿದ್ದಾರೆ.

ವಾಂಗ್ಚುಕ್ ಅವರನ್ನು ಬಂಧಿಸಿದ್ದು ಏಕೆ?

ಲಡಾಖ್‌ನ ಹಕ್ಕುಗಳಿಗಾಗಿ ಕಳೆದ ಐದು ವರ್ಷಗಳಿಂದ ಸತತ ಹೋರಾಟ ನಡೆಸಿಕೊಂಡು ಬರುತಿದ್ದ ವಾಂಗ್ಚುಕ್ ಅವರನ್ನು ಶುಕ್ರವಾರ (ಸೆ.26) ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು, ಸಂವಿಧಾನದ ಆರನೇ ಪರಿಚ್ಛೇಧದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಯುವಜನರ ಗುಂಪೊಂದು ಲೇಹ್‌ನಲ್ಲಿ ಹಠಾತ್ ಬೀದಿಗಿಳಿದಿತ್ತು. ಇದರಿಂದ ಹೋರಾಟ ಹಿಂಸಾತ್ಮಕ ರೂಪ ಪಡೆದಿತ್ತು. ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡು, ಸುಮಾರು 90 ಜನರು ಗಾಯಗೊಂಡಿದ್ದರು.

ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲು ಪ್ರಚೋದಿಸಿದ್ದು ಸೋನಮ್ ವಾಂಗ್ಚುಕ್ ಎಂದು ಆರೋಪಿಸಿ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ಲಡಾಖ್‌ನಿಂದ ಸ್ಥಳಾಂತರಿಸಲಾಗಿದ್ದು, ರಾಜಸ್ಥಾನದ ಜೋಧ್‌ಪುರದ ಜೈಲಿನಲ್ಲಿ ಇರಿಸಲಾಗಿದೆ.

ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಲರ್ನಿಂಗ್ (ಹೆಚ್‌ಐಎಎಲ್‌) ನ ಸಹ-ಸಂಸ್ಥಾಪಕಿಯಾಗಿರುವ ಆಂಗ್ಮೋ, ತನ್ನ ಪತಿಯ ಬಂಧನದ ನಂತರ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗಿಲ್ಲ ಮತ್ತು ಬಂಧನ ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಬಂಧನದ ಆದೇಶದ ಪ್ರತಿಯನ್ನು ಶುಕ್ರವಾರ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇನ್ನೂ ಸಿಕ್ಕಿಲ್ಲ, ನಾವು ಕಾನೂನು ಮೊರೆ ಹೋಗುತ್ತೇವೆ ಎಂದು ಆಂಗ್ಮೋ ಹೇಳಿದ್ದಾರೆ.

ಆಪಾದಿತ ಪಾಕಿಸ್ತಾನ ಸಂಪರ್ಕ

ಸೋನಮ್ ವಾಂಗ್ಚುಕ್‌ ಅವರಿಗೆ ಪಾಕಿಸ್ತಾನದೊಂದಿಗೆ ಸಂಬಂಧ ಇದೆಯೇ? ಎಂದು ತನಿಖೆ ಮಾಡಲಾಗುತ್ತಿದೆ. ಕಳೆದ ತಿಂಗಳು ಒಬ್ಬ ಪಾಕಿಸ್ತಾನಿ ಗುಪ್ತಚರನನ್ನು ಬಂಧಿಸಲಾಗಿತ್ತು, ಆತ ಗಡಿಯಾಚೆಗಿನ ಪ್ರತಿಭಟನೆಗಳ ವಿಡಿಯೋ ಕಳುಹಿಸಿದ್ದ ಎಂದು ಆರೋಪವಿದೆ. ಇದರ ಜೊತೆಗೆ, ಸೋನಮ್ ವಾಂಗ್ಚುಕ್‌ ಅವರು ಪಾಕಿಸ್ತಾನಕ್ಕೆ ಒಂದು ಡಾನ್ ಮೀಡಿಯಾ ಕಾರ್ಯಕ್ರಮಕ್ಕೆ ಹೋಗಿದ್ದು, ಅಧಿಕಾರಿಗಳಿಗೆ ‘ಸಂದೇಹಾಸ್ಪದ’ ಎನಿಸಿದೆ. ಹೀಗಾಗಿ, ಈ ವಿಷಯಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಲಡಾಖ್‌ನ ಪೊಲೀಸ್ ಮುಖ್ಯಸ್ಥ ಎಸ್‌ಡಿ ಸಿಂಗ್ ಜಮ್ವಾಲ್ ತಿಳಿಸಿದ್ದಾರೆ.

ಆಂಗ್ಮೋ ಪೊಲೀಸರ ಆರೋಪಗಳನ್ನು ತಳ್ಳಿ ಹಾಕಿದ್ದು, ವಾಂಗ್ಚುಕ್ ಅವರ ಭೇಟಿಗಳು ವೃತ್ತಿಪರ ಮತ್ತು ಹವಾಮಾನ ಕೇಂದ್ರಿತವಾಗಿದ್ದವು ಎಂದಿದ್ದಾರೆ.

ಪಾಕಿಸ್ತಾನದಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಹವಾಮಾನ ಬದಲಾವಣೆಯ ಸಮ್ಮೇಳನದಲ್ಲಿ ವಾಂಗ್ಚುಕ್ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು. ನಾವು ವಿಶ್ವಸಂಸ್ಥೆ ಆಯೋಜಿಸಿದ್ದ ಸಮ್ಮೇಳನದಲ್ಲಿ ಭಾಗವಹಿಸಿದ್ದೆವು, ಅದು ಹವಾಮಾನ ಬದಲಾವಣೆಯ ಕುರಿತಾಗಿತ್ತು. ಹಿಮಾಲಯದ ತುದಿಯಲ್ಲಿರುವ ಹಿಮನದಿ ನಾನು ಪಾಕಿಸ್ತಾನಕ್ಕೆ ಹರಿಯುತ್ತೇನೋ ಅಥವಾ ಭಾರತಕ್ಕೆ ಹರಿಯುತ್ತೇನೋ ಎಂದು ನೋಡುವುದಿಲ್ಲ” ಎಂದು ಆಂಗ್ಮೋ ಹೇಳಿದ್ದಾರೆ.

ಫೆಬ್ರವರಿಯಲ್ಲಿ ನಡೆದ ‘ಬ್ರೀತ್ ಪಾಕಿಸ್ತಾನ್’ ಸಮ್ಮೇಳನವನ್ನು ವಿಶ್ವಸಂಸ್ಥೆಯ ಪಾಕಿಸ್ತಾನ ಮತ್ತು ಡಾನ್ ಮೀಡಿಯಾ ಆಯೋಜಿಸಿತ್ತು. ಬಹುರಾಷ್ಟ್ರೀಯ ಸಹಕಾರವನ್ನು ಅದು ಒಳಗೊಂಡಿತ್ತು. ಇಂಟರ್ನ್ಯಾಷನಲ್ ಸೆಂಟರ್ ಫಾರ್ ಇಂಟಿಗ್ರೇಟೆಡ್ ಮೌಂಟೇನ್ ಡೆವಲಪ್ಮೆಂಟ್ (ಐಸಿಐಎಂಒಡಿ) ನಂತಹ ಸಂಸ್ಥೆಗಳು ಅದರಲ್ಲಿ ಇತ್ತು. ಇದು ಎಂಟು ಹಿಂದೂ ಕುಶ್ ದೇಶಗಳನ್ನು ಒಟ್ಟುಗೂಡಿಸುತ್ತದೆ ಮತ್ತು ವಿಭಿನ್ನ ವಿಷಯಗಳ ಮೇಲೆ ಕೆಲಸ ಮಾಡುತ್ತದೆ. ನಾವು ಐಸಿಐಎಂಒಡಿಯ ಹಿಮಾಲಯನ್ ವಿಶ್ವವಿದ್ಯಾಲಯ ಒಕ್ಕೂಟದ ಭಾಗವಾಗಿದ್ದೆವು ಎಂದಿದ್ದಾರೆ.

ಐಸಿಐಎಂಒಡಿ 1983ರಲ್ಲಿ ಸ್ಥಾಪನೆಯಾದ ನೇಪಾಳ ಮೂಲದ ಸಂಸ್ಥೆಯಾಗಿದ್ದು, ಇದು ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ ಮತ್ತು ಪಾಕಿಸ್ತಾನ ಸೇರಿ ಹಿಂದೂ ಕುಶ್ ಹಿಮಾಲಯ ಪ್ರದೇಶದ ಎಂಟು ಪ್ರಾದೇಶಿಕ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.

ನೇಪಾಳ ಮತ್ತು ಬಾಂಗ್ಲಾದೇಶದ ಉಲ್ಲೇಖವನ್ನು ಸೋನಮ್ ಒಂದು ಉದಾಹರಣೆಯಾಗಿ ನೀಡಿದ್ದಾರೆ. ಅವರ ಹೇಳಿಕೆಯ ಮೂಲ ಉದ್ದೇಶವೆಂದರೆ, “ಸರ್ಕಾರಗಳು ಜನರ ಕೂಗಿಗೆ ಗಮನ ಕೊಡದಿದ್ದರೆ, ಅದು ಕ್ರಾಂತಿಗೆ ಕಾರಣವಾಗಬಹುದು” ಎಂಬುದು. ಆದ್ದರಿಂದ, ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರದು ಎಂದು ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಶಾಂತಿಯುತ ಪ್ರತಿಭಟನೆ ಮತ್ತು ಭದ್ರತಾ ಪಡೆಗಳ ಪ್ರತಿಕ್ರಿಯೆ

ಸೋನಮ್ ವಾಂಗ್ಚುಕ್‌ರ ಕಾರ್ಯಕ್ರಮಗಳು ಯಾವಾಗಲೂ ಅಹಿಂಸಾತ್ಮಕವಾಗಿರುತ್ತವೆ. ಲೇಹ್ ಏಪೆಕ್ಸ್ ಬಾಡಿಯ ಪ್ರತಿಭಟನೆ ಶಾಂತಿಯುತವಾಗಿತ್ತು ಮತ್ತು ವಿದ್ಯಾರ್ಥಿಗಳು ಹಾಗೂ ಯುವಕರು ಹಿಂಸಾಚಾರಕ್ಕೆ ಯೋಜನೆ ಮಾಡಿರಲಿಲ್ಲ. ಆದರೆ, ಸಿಆರ್‌ಪಿಎಫ್ ಸಿಬ್ಬಂದಿ ಟಿಯರ್ ಗ್ಯಾಸ್ ಸಿಡಿಸಿದಾಗ, ಯುವಕರು ಕಲ್ಲು ತೂರಾಟ ಮಾಡಿ ಪ್ರತಿಕ್ರಿಯಿಸಿದರು. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು ಎಂದು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ಗೆ ಗುಂಡು ಹಾರಿಸುವ ಹಕ್ಕು ನೀಡಿದ್ದು ಯಾರು? ನಮ್ಮ ಸ್ವಂತ ಜನರ ಮೇಲೆ, ನಮ್ಮ ಸ್ವಂತ ಯುವಕರ ಮೇಲೆ ಏಕೆ ಗುಂಡು ಹಾರಿಸಬೇಕು? ಎಂದು ಸಿಆರ್‌ಪಿಎಫ್‌ನ ಕ್ರಮಗಳನ್ನು ಅಂಗ್ಮೋ ಪ್ರಶ್ನಿಸಿದ್ದಾರೆ.

ಹಣಕಾಸಿನ ಆರೋಪಗಳು ಮತ್ತು ಸಂಸ್ಥೆಗಳು

ಗೀತಾಂಜಲಿ ಆಂಗ್ಮೋ ಅವರು ಸೋನಮ್ ವಾಂಗ್ಚುಕ್‌ರ ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್‌ನೇಟಿವ್ಸ್ (ಹೆಚ್‌ಐಎಎಲ್‌) ಮತ್ತು ಇತರ ಉಪಕ್ರಮಗಳ ಮೇಲಿನ ಆರ್ಥಿಕ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹೆಚ್‌ಐಎಎಲ್‌ಗೆ ಬಂದ ವಿದೇಶಿ ಧನಸಹಾಯವು ದೇಣಿಗೆಯಲ್ಲ, ಅದು ಸಲಹಾ ಕಾರ್ಯಕ್ಕಾಗಿ ಬಂದ ಹಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಸಂಸ್ಥೆಯು ತನ್ನ 400 ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಎಫ್‌ಸಿಆರ್‍ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಮತ್ತು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ವಿಷಯಗಳ ಬಗ್ಗೆ ಅಂಗ್ಮೋ ಮಾತನಾಡಿದ್ದಾರೆ. ಈ ವಿಷಯಗಳಲ್ಲಿ ವಿಳಂಬವಾಗಿರುವುದು ಆಡಳಿತಾತ್ಮಕ ವರ್ಗೀಕರಣ ಮತ್ತು ತಡೆ ಹಿಡಿಯುವಿಕೆಯಿಂದ, ಯಾವುದೇ ತಪ್ಪು ಕೃತ್ಯದಿಂದ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್‌ಐಎಎಲ್‌ ಸಂಸ್ಥೆಯು ಐಸ್ ಸ್ತೂಪಗಳು ಮತ್ತು ನಿಷ್ಕ್ರಿಯ ಸೌರ ಕಟ್ಟಡಗಳಂತಹ ಆವಿಷ್ಕಾರಗಳನ್ನು ಬಳಸಿಕೊಂಡು ಸುಸ್ಥಿರ ಅಭಿವೃದ್ಧಿಯನ್ನು ಬೆಂಬಲಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 4ರಂದು ನಡೆದ ಹಿಂಸಾಚಾರದ ನಂತರ, ಕೇಂದ್ರ ಗೃಹ ಸಚಿವಾಲಯವು ಸೋನಮ್ ವಾಂಗ್ಚುಕ್‌ ಅವರು ಸ್ಥಾಪಿಸಿದ ಎಸ್‌ಇಸಿಎಂಒಎಲ್‌ ಸಂಸ್ಥೆಯ ಎಫ್‌ಸಿಆರ್‍ಎ ಪರವಾನಗಿಯನ್ನು ಆರ್ಥಿಕ ಅಕ್ರಮಗಳ ಆರೋಪದ ಮೇಲೆ ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...