Homeಮುಖಪುಟಕೇಂದ್ರದ 'ಸಹಯೋಗ್' ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

ಕೇಂದ್ರದ ‘ಸಹಯೋಗ್’ ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

- Advertisement -
- Advertisement -

ಕೇಂದ್ರದ ‘ಸಹಯೋಗ್’ ಪೋರ್ಟಲ್ ವಿರುದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್ ಹೇಳಿದೆ.

ಹೈಕೋರ್ಟ್ ಆದೇಶವನ್ನು ಒಪ್ಪುವುದಿಲ್ಲ ಎಂದು ಗೌರಯುತವಾಗಿ ಹೇಳುತ್ತಿದ್ದೇವೆ. ಇದರ ವಿರುದ್ದ ಮೇಲ್ಮನವಿಯ ಸಲ್ಲಿಸುತ್ತೇವೆ ಎಂದು ಎಕ್ಸ್‌ ಕಂಪನಿಯ ಗ್ಲೋಬಲ್ ಅಫೇರ್ಸ್ ವಿಭಾಗ ಸೋಮವಾರ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿತ್ತು.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಎಕ್ಸ್ ಕಂಪನಿಯು ಕರ್ನಾಟಕ ಹೈಕೋರ್ಟ್ ತೀರ್ಪು ಬಾಂಬೆ ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಬಾಂಬೆ ಹೈಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ‘ಫ್ಯಾಕ್ಟ್ ಚೆಕ್ ಯೂನಿಟ್’ ಅನ್ನು ರದ್ದುಗೊಳಿಸಿತ್ತು.

ವಿದೇಶಿ ಕಂಪನಿಯೊಂದು ಭಾರತದ ಸಂವಿಧಾನದ ಆರ್ಟಿಕಲ್ 19(1)(a) ಅಡಿ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಅಭಿಪ್ರಾಯವನ್ನು ಎಕ್ಸ್ ಒಪ್ಪಿಕೊಂಡಿಲ್ಲ.

ಹೈಕೋರ್ಟ್ ಸಂವಿಧಾನದ 19 ನೇ ವಿಧಿಯಡಿ ವಿದೇಶಿ ಕಂಪನಿಗಳು ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಸಾಧ್ಯವಿಲ್ಲ ಎಂದಿದೆ.

ಆ ರೀತಿಯ ಹಕ್ಕುಗಳು ಭಾರತದ ನಾಗರಿಕರಿಗೆ ಮಾತ್ರ ಮೀಸಲಾಗಿದ್ದುಎಕ್ಸ್ ಕಾರ್ಪ್ ರೀತಿಯ ಮಧ್ಯಸ್ಥ ಸಂಸ್ಥೆಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಬಯಸಿದರೆ ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಲು ಸಹಯೋಗ್ ಪೋರ್ಟಲ್ ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಐಟಿ ಕಾಯ್ದೆಯ ಸೆಕ್ಷನ್ 69ಎ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಕಡ್ಡಾಯಗೊಳಿಸಲಾದ ಮಾರ್ಗಸೂಚಿ ಪಾಲಿಸಲು ಅಡ್ಡಿಯಾಗುತ್ತದೆ ಎಂದು ವಾದಿಸಿ ಎಕ್ಸ್ ಕಾರ್ಪ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಕಟವಾದ ಟ್ವೀಟ್‌ಗಳನ್ನು ತೆಗೆಯುವಂತೆ ರೈಲ್ವೆ ಸಚಿವಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.

ಹೀಗಾಗಿ, ಸೆಕ್ಷನ್ 79(3)(b) ಮಾಹಿತಿ ನಿರ್ಬಂಧ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶವಿಲ್ಲ. ಇದು ವಿಶೇಷವಾಗಿ ಸೆಕ್ಷನ್ 69Aರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಆದೇಶಿಸಬೇಕು ಎಂದು ಎಕ್ಸ್ ಕೋರಿತ್ತು.

ತೀರ್ಪಿನ ಮೂಲಕ ನ್ಯಾಯಾಲಯ ನಿಸ್ಸಂದಿಗ್ಧವಾಗಿ 19ನೇ ವಿಧಿಯಡಿ ಒದಗಿಸಲಾದ ಹಕ್ಕುಗಳನ್ನು ವಿದೇಶಿಯರಿಗೆ ನೀಡಲಾಗದು ಎಂದಿದೆ. 19ನೇ ವಿಧಿಯ ಮೂಲಕ ದೇಶದ ಕಾನೂನನ್ನು ಪ್ರಶ್ನಿಸಲು ಯತ್ನಿಸುವುದನ್ನು ಸಹಿಸಲಾಗದು ಎಂದಿರುವ ತೀರ್ಪು, ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಸ್ವಾತಂತ್ರ್ಯ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂಬುದಾಗಿ ಪುನರುಚ್ಚರಿಸಿದೆ.

ಅಲ್ಲದೆ ಯಾವುದೇ ಮಾಧ್ಯಮ ಕಾನೂನು ವ್ಯಾಪ್ತಿಯಿಂದ ಹೊರಗೆ ಇರುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...