Homeಮುಖಪುಟಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೊಳ್ಳುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಕ್ರಮದ ವಿರುದ್ಧ ಕೇರಳ ವಿಧಾನಸಭೆ ಸೋಮವಾರ (ಸೆ.29) ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಎಸ್‌ಐಆರ್ ವಿರುದ್ಧ ಈಗಾಗಲೇ ಬಲವಾದ ಆಕ್ಷೇಪ ವ್ಯಕ್ತಪಡಿಸಿರುವ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತು.

ನಿರ್ಣಯ ಮಂಡನೆ ವೇಳೆ, ಎಸ್‌ಐಆರ್ ಜಾರಿಗೆ ತರಲು ಚುನಾವಣಾ ಆಯೋಗ ತೆಗೆದುಕೊಂಡ ‘ಆತುರದ ಕ್ರಮ’ದ ಬಗ್ಗೆ ಮತ್ತು ಆ ಕ್ರಮದ ಹಿಂದೆ ದುರುದ್ದೇಶವಿದೆ ಎಂದು ಶಂಕಿಸಲಾಗಿರುವ ಬಗ್ಗೆ ಇರುವ ಕಳವಳಗಳನ್ನು ಸಿಎಂ ಸದನಕ್ಕೆ ತಿಳಿಸಿದರು.

ಚುನಾವಣಾ ಆಯೋಗವು ಎಸ್‌ಐಆರ್ ನಡೆಸಲು ಮುಂದಾಗಿರುವುದು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‍‌ಸಿ) ಜಾರಿಗೆ ತರುವ ‘ಹಿಂಬಾಗಿಲಿನ’ ಪ್ರಯತ್ನವಾಗಿದೆ ಎಂಬ ವ್ಯಾಪಕ ಕಳವಳಗಳ ಬಗ್ಗೆ ಅವರು ಗಮನಸೆಳೆದರು.

ಬಿಹಾರದಲ್ಲಿ ಇತ್ತೀಚೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆಯು ಅಂತಹ ಕಳವಳಗಳನ್ನು ದೃಢಪಡಿಸುತ್ತದೆ ಎಂದು ಹೇಳಿದೆ ಪಿಣರಾಯಿ ವಿಜಯನ್, ಇದು ‘ಹೊರಗಿಡುವ ರಾಜಕೀಯ’ ವನ್ನು ಪ್ರತಿಬಿಂಬಿಸುತ್ತದೆ ಎಂದರು.

ಬಿಹಾರದಲ್ಲಿ ಜಾರಿಗೆ ತರಲಾದ ಎಸ್‌ಐಆರ್ ಮತದಾರರ ಪಟ್ಟಿಯಿಂದ ಜನರನ್ನು ‘ತರ್ಕಬದ್ಧವಲ್ಲದ ಹೊರಗಿಡುವಿಕೆ’ಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ ವಿಜಯನ್, ಅದೇ ಮಾದರಿಯನ್ನು ದೇಶದಾದ್ಯಂತ ಅನುಸರಿಸಲಾಗುತ್ತಿದೆಯೇ ಎಂಬ ಅನುಮಾನ ಇದೆ ಎಂದು ಹೇಳಿದರು.

ಬಿಹಾರ ಎಸ್‌ಐಆರ್ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವಾಗ, ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಅನ್ನು ಜಾರಿಗೆ ತರಲು ಮಾಡಲಾಗುತ್ತಿರುವ ಪ್ರಯತ್ನಗಳನ್ನು ಸಿಎಂ ನಿರ್ಣಯದಲ್ಲಿ ಪ್ರಶ್ನಿಸಿದರು.

ದೀರ್ಘಾವಧಿಯ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್ ಅನ್ನು ಚುನಾವಣಾ ಆಯೋಗವು ತರಾತುರಿಯಲ್ಲಿ ಜಾರಿಗೆ ತರಲು ಪ್ರಯತ್ನಿಸುತ್ತಿರುವುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ಪ್ರಯತ್ನ ಎಂಬ ಭಯವಿದೆ ಎಂದು ಅವರು ಹೇಳಿದರು.

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿವೆ. ಅದರ ನಂತರ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಪರಿಸ್ಥಿತಿಯಲ್ಲಿ, ಎಸ್‌ಐಆರ್ ಅನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ ಎಂದ ಸಿಎಂ, ಇದು ಇದು ಚುನಾವಣಾ ಆಯೋಗದ ಮೇಲೆ ಅನುಮಾನದ ನೆರಳು ಮೂಡಿಸುತ್ತಿದೆ ಎಂದು ತಿಳಿಸಿದರು. 

ಇದಕ್ಕೂ ಮುನ್ನ, 2002ರಲ್ಲಿ ಕೇರಳದಲ್ಲಿ ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಯನ್ನು ನಡೆಸಲಾಗಿತ್ತು. ಪ್ರಸ್ತುತ ಪರಿಷ್ಕರಣೆಯನ್ನು 2002ರ ಆಧಾರದ ಮೇಲೆ ನಡೆಸುವುದು ‘ಅವೈಜ್ಞಾನಿಕ’ ಎಂದು ಅವರು ಹೇಳಿದರು.
1987ರ ನಂತರ ಜನಿಸಿದವರು ತಮ್ಮ ತಂದೆ ಅಥವಾ ತಾಯಿಯ ಪೌರತ್ವ ಪ್ರಮಾಣಪತ್ರವನ್ನು ನೀಡಿದರೆ ಮಾತ್ರ ಮತ ಚಲಾಯಿಸಬಹುದು ಎಂಬ ಎಸ್‌ಐಆರ್ ನ ಅವಶ್ಯಕತೆಯು ದೇಶದ ವಯಸ್ಕರ ಹಕ್ಕುಸ್ವಾಮ್ಯವನ್ನು ದುರ್ಬಲಗೊಳಿಸುವ ನಿರ್ಧಾರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
2003ರ ನಂತರ ಜನಿಸಿದವರು ತಮ್ಮ ತಂದೆ ಮತ್ತು ತಾಯಿಯ ಪೌರತ್ವ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ ಮತ ಚಲಾಯಿಸಬಹುದು ಎಂದು ಷರತ್ತು ವಿಧಿಸಲಾಗಿದೆ ಎಂದು ಅವರು ತಿಳಿಸಿದರು.
ತಜ್ಞರ ಅಧ್ಯಯನಗಳು, ಎಸ್‌ಐಆರ್‌ನ ಅಂತಹ ನಿಬಂಧನೆಗಳಿಂದಾಗಿ ಸಮಾಜದ ಅಂಚಿನಲ್ಲಿರುವ ವರ್ಗಗಳ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ತೋರಿಸಿದೆ ಎಂದರು.
ಮತದಾರರ ಪಟ್ಟಿಯಿಂದ ಹೊರಗಿಡಲ್ಪಟ್ಟವರಲ್ಲಿ ಹೆಚ್ಚಿನವರು ಅಲ್ಪಸಂಖ್ಯಾತ ಸಮುದಾಯಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಮಹಿಳೆಯರು ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರು ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಧರ್ಮದ ಆಧಾರದ ಮೇಲೆ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುವವರು ಎಸ್‌ಐಆರ್ ಅನ್ನು ಬಳಸುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಇದು ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ ಎಂದು ಹೇಳಿದರು.

ಚುನಾವಣಾ ಆಯೋಗವು ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಇಂತಹ ಪದ್ಧತಿಗಳಿಂದ ದೂರವಿರಬೇಕೆಂದು ವಿಧಾನಸಭೆಯು ಸರ್ವಾನುಮತದಿಂದ ಒತ್ತಾಯಿಸುತ್ತದೆ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ನಡೆಸಬೇಕೆಂದು ಕೂಡ ಆಗ್ರಹಿಸುತ್ತದೆ ಎಂದು ಸಿಎಂ ಹೇಳಿದರು.

ಕೆಲವು ಸದಸ್ಯರು ಸೂಚಿಸಿದ ತಿದ್ದುಪಡಿಗಳ ನಂತರ, ಸ್ಪೀಕರ್ ಎ.ಎನ್ ಶಂಸೀರ್ ಅವರು ಸದನವು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ ಎಂದು ಘೋಷಿಸಿದರು.

ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...