Homeಕರ್ನಾಟಕಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

"ಬಿಜೆಪಿ ನಾಯಕರ ರಾಜಕೀಯ ಹೇಳಿಕೆಗಳನ್ನು ಕಸದ ಬುಟ್ಟಿಗೆ ಎಸೆಯಿರಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ"-ಸಿಎಂ

- Advertisement -
- Advertisement -

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿರುದ್ದ ಹೇಳಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು ಕೊಟ್ಟಿದ್ದು, ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋದಧ ಹಿಂದಿನ ದುರುದ್ದೇಶ ಎಂದು ಟೀಕಿಸಿದ್ದಾರೆ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ ಎಂದು ಸಿಎಂ ನೆನಪಿಸಿದ್ಧಾರೆ.

ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಐಆರ್ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...