Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...