Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...