Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...