Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...