Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...