Homeಅಂತರಾಷ್ಟ್ರೀಯಬಿಷ್ಣೋಯಿ ಗ್ಯಾಂಗ್‌ 'ಭಯೋತ್ಪಾದಕ ಗುಂಪು' ಎಂದು ಘೋಷಿಸಿದ ಕೆನಡಾ ಸರ್ಕಾರ

ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

- Advertisement -
- Advertisement -

ಕೆನಡಾ ಸರ್ಕಾರವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಕ್ರಿಮಿನಲ್ ಕೋಡ್ ಅಡಿಯಲ್ಲಿ ಭಯೋತ್ಪಾದಕ ಗಂಪು ಎಂದು ಘೋಷಿಸಿದೆ.

ಈ ಕ್ರಮವು ಕೆನಡಿಯನ್ನರು ಬಿಷ್ಣೋಯ್ ಗ್ಯಾಂಗ್‌ಗೆ ಹಣಕಾಸು ಮತ್ತು ಇತರ ವಸ್ತುಗಳ ಬೆಂಬಲ ಒದಗಿಸುವುದನ್ನು ತಡೆಯಲಿದೆ. ಸರ್ಕಾರ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಅನುವು ಮಾಡಿಕೊಡಲಿದೆ.

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗಂಪು ಎಂದು ಘೋಷಿಸಿರುವುದರಿಂದ ಹಿಂಸೆ ಮತ್ತು ಬೆದರಿಕೆಯ ಮೂಲಕ ಭಯವನ್ನು ಹುಟ್ಟಿಸಿರುವ ಗುಂಪಿನ ವಿರುದ್ಧ ಹೋರಾಡಲು ಕಾನೂನು ಜಾರಿ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಕೆನಡಾ ಸರ್ಕಾರದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರೀ ಹೇಳಿದ್ದಾರೆ.

ಬಿಷ್ಣೋಯ್ ಗ್ಯಾಂಗ್ ರಾಜಸ್ಥಾನದಲ್ಲಿ ಹುಟ್ಟಿಕೊಂಡ ಒಂದು ಅಂತಾರಾಷ್ಟ್ರೀಯ ಸಿಂಡಿಕೇಟ್ ಆಗಿದ್ದು,  ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಇದರ ನೇತೃತ್ವ ವಹಿಸಿದ್ದಾನೆ.

ಬ್ರಿಟಿಷ್ ಕೊಲಂಬಿಯಾ, ಒಂಟಾರಿಯೊ ಮತ್ತು ಆಲ್ಬರ್ಟಾದಲ್ಲಿ ಸಕ್ರಿಯವಾಗಿರುವ ಈ ಗ್ಯಾಂಗ್, 2023ರಿಂದ 50ಕ್ಕೂ ಹೆಚ್ಚು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದೆ. ಪಂಜಾಬಿ ಸಂಗೀತಗಾರ ಎಪಿ ಧಿಲ್ಲೋನ್ ಮತ್ತು ಗಿಪ್ಪಿ ಗ್ರೆವಾಲ್ ಅವರ ಮನೆಗಳ ಮೇಲೆ ಬಾಂಬ್ ದಾಳಿ, ಈ ಆಗಸ್ಟ್‌ನಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಸರ್ರೆ ಕೆಫೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ದಕ್ಷಿಣ ಏಷ್ಯಾದ ಸಮುದಾಯಗಳನ್ನು ಗುರಿಯಾಗಿಸಿಕೊಂಡ ವ್ಯಾಪಕವಾದ ಸುಲಿಗೆ ದಂಧೆಗಳು ಇದರಲ್ಲಿ ಸೇರಿವೆ.

ಹಲವು ರಾಜಕೀಯ ನಾಯಕರು ಮತ್ತು ಸಮುದಾಯಗಳಿಂದ ಒತ್ತಡ ಬಂದ ನಂತರ ಕೆನಡಾ ಸರ್ಕಾರ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ.

ಬ್ರಿಟಿಷ್ ಕೊಲಂಬಿಯಾದ ಮುಖ್ಯಮಂತ್ರಿ ಡೇವಿಡ್ ಈಬಿ ಕಳೆದ ಜೂನ್‌ನಲ್ಲಿ ಪ್ರಧಾನಮಂತ್ರಿ ಮಾರ್ಕ್ ಕಾರ್ನಿಗೆ ಬಿಷ್ಣೋಯ್ ಗ್ಯಾಂಗ್‌ನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಲು ಒತ್ತಾಯಿಸಿದ್ದರು. “ಈ ಗುಂಪು ನಮ್ಮ ನೆಲದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ” ಎಂದು ಅವರು ಹೇಳಿದ್ದರು. ಜುಲೈನಲ್ಲಿ ಆಲ್ಬರ್ಟಾದ ಮುಖ್ಯಮಂತ್ರಿ ಡಾನಿಯಲ್ ಸ್ಮಿತ್ ಕೂಡ ಇದೇ ಬೇಡಿಕೆ ಮುಂದಿಟ್ಟಿದ್ದರು. ನಂತರ, ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಮತ್ತು ಸರ್ರೆ ಮೇಯರ್ ಬ್ರೆಂಡಾ ಲಾಕ್ ಕೂಡ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಕಳೆದ ಆಗಸ್ಟ್‌ನಲ್ಲಿ, ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಬಿಷ್ಣೋಯ್ ಗ್ಯಾಂಗ್ ವಿರುದ್ದ ಹೇಳಿಕೆ ಕೊಟ್ಟಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಎನ್‌ಡಿಪಿ ಸಂಸದರೂ ಇದಕ್ಕೆ ಬೆಂಬಲ ಕೊಟ್ಟಿದ್ದರು. ಆಗಸ್ಟ್ 11 ರಂದು, ಶಾಡೋದ ಸಾರ್ವಜನಿಕ ಸುರಕ್ಷತೆಯ ಮಂತ್ರಿ ಫ್ರಾಂಕ್ ಕಪುಟೊ ಬಿಷ್ಣೋಯ್ ಗ್ಯಾಂಗ್ ವಿರುದ್ದ ಕ್ರಮಕ್ಕೆ ಔಪಚಾರಿಕವಾಗಿ ಮನವಿ ಮಾಡಿದ್ದರು.

ಅಕ್ಟೋಬರ್ 2024ರಲ್ಲಿ, ಕೆನಡಾದ ಪೊಲೀಸ್ ಮುಖ್ಯಸ್ಥ ಮೈಕ್ ಡುಹೆಮೆ ಬಿಷ್ಣೋಯ್ ಗ್ಯಾಂಗ್‌ನ ಕೆಲವು ಕೃತ್ಯಗಳು ಸರ್ಕಾರಿ ಪ್ರಾಯೋಜಿತ ಎಂದು ಭಾರತದ ಕಡೆಗೆ ಬೊಟ್ಟು ಮಾಡಿದ್ದರು. ಈ ಆರೋಪಕ್ಕೆ  ಉದಾಹರಣೆಯಾಗಿ ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಯನ್ನು ಅವರು ಉಲ್ಲೇಖಿಸಿದ್ದರು. ಆದರೆ, ಭಾರತ ಸರ್ಕಾರ ಈ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾಕ್ಕೆ ಈ ಗ್ಯಾಂಗ್‌ನ ಬೆದರಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಅವರ ಹಣಕಾಸಿನ ಹರಿವನ್ನು ತಡೆಯಲು ಸಹಾಯ ಮಾಡಿದ್ದೇವೆ ಎಂದು ಭಾರತ ಹೇಳಿತ್ತು.

ಬಿಷ್ಣೋಯ್ ಗ್ಯಾಂಗ್‌ ಅನ್ನು ‘ಭಯೋತ್ಪಾದಕ’ ಗುಂಪು ಎಂದು ಘೋಷಣೆ ಮಾಡಿರುವುದರಿಂದ ಪೊಲೀಸರಿಗೆ ಅಪರಾಧ ಕೃತ್ಯಗಳನ್ನು ತಡೆಯಲು ಹೆಚ್ಚು ಬಲ ಸಿಗಲಿದೆ ಎನ್ನಲಾಗಿದೆ. ಆದರೆ. ತಜ್ಞರು ಇದರಿಂದ ದೊಡ್ಡ ಬದಲಾವಣೆ ಆಗದಿರಬಹುದು ಎಂದು ಹೇಳಿದ್ದಾರೆ. ಟೊರೊಂಟೊ ಸನ್‌ ಪತ್ರಿಕೆ ಜೊತೆ ಮಾತನಾಡಿರುವಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಗವರ್ನೆನ್ಸ್ ಇನ್ನೋವೇಷನ್‌ನ ತಜ್ಞ ವೆಸ್ಲಿ ವಾರ್ಕ್ “ಕೆನಡಾದಲ್ಲಿ ಅಪರಾಧದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಕಡಿಮೆ ಇದೆ, ಇದೇ ಮುಖ್ಯ ಸಮಸ್ಯೆ” ಎಂದಿದ್ದಾರೆ.

ಕೆನಡಾ ಮತ್ತು ಭಾರತದ ಸಂಬಂಧಗಳು ಜೂನ್ 2025ರ ಜಿ7 ಶೃಂಗಸಭೆಯ ನಂತರ ಸ್ವಲ್ಪ ಸುಧಾರಿಸುತ್ತಿರುವ ಸಂದರ್ಭದಲ್ಲಿ, ಬಿಷ್ಣೋಯ್ ಗ್ಯಾಂಗ್‌ ‘ಭಯೋತ್ಪಾದಕ’ ಗುಂಪು ಎಂದು ಘೋಷಿಸಲಾಗಿದೆ. ಜಿ7 ಶೃಂಗಸಭೆಯ ನಂತರ ಭಾರತ ಮತ್ತು ಕೆನಡಾ ತಮ್ಮ ರಾಯಭಾರಿಗಳನ್ನು ಮತ್ತೆ ನೇಮಿಸಿವೆ. ಭಾರತೀಯ ಅಧಿಕಾರಿಗಳು ಕೆನಡಾದ ಕ್ರಮದ ಇನ್ನೂ ಏನೂ ಹೇಳಿಲ್ಲ. ಆದರೆ. ಈ ಕ್ರಮವು ಲಾರೆನ್ಸ್ ಬಿಷ್ಣೋಯ್ ಗುಂಪಿನ ಸಹಾಯಕರಾದ ಗೋಲ್ಡಿ ಬ್ರಾರ್‌ನಂತಹವರನ್ನು ಭಾರತಕ್ಕೆ ವಾಪಸ್ ಕಳುಹಿಸುವ (ಎಕ್ಸ್‌ಟ್ರಾಡಿಷನ್) ಪ್ರಕರಣಗಳಲ್ಲಿ ಕೆನಡಾಕ್ಕೆ ಹೆಚ್ಚಿನ ಶಕ್ತಿ ನೀಡಬಹುದು ಎನ್ನಲಾಗಿದೆ.

ಕಳೆದ ವರ್ಷ, ಆರ್‌ಸಿಎಂಪಿ (ಕೆನಡಾ ಪೊಲೀಸ್) ಕರಣ್ ಬ್ರಾರ್ (ಗೋಲ್ಡಿ ಬ್ರಾರ್‌ಗೆ ಸಂಬಂಧವಿಲ್ಲ) ಮತ್ತು ಕರಣ್‌ಪ್ರೀತ್ ಸಿಂಗ್ ಎಂಬವರನ್ನು ಜೂನ್ 2023ರಲ್ಲಿ ಸರ್ರೆಯಲ್ಲಿ ನಡೆದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ ಕೊಲೆಗೆ ಸಂಬಂಧಿಸಿದಂತೆ ಮೇ 2024ರಲ್ಲಿ ಬಂಧಿಸಿತ್ತು. ಈ ಇಬ್ಬರನ್ನೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರೆಂದು ಆರ್‌ಸಿಎಂಪಿ ಗುರುತಿಸಿದೆ.

ಬಿಷ್ಣೋಯ್ ಗ್ಯಾಂಗ್‌ನ ಕೆನಡಾದ ಕಾರ್ಯಾಚರಣೆಗಳನ್ನು ಗೋಲ್ಡಿ ಬ್ರಾರ್ ಎಂಬ 29 ವರ್ಷದ ಗ್ಯಾಂಗ್‌ಸ್ಟರ್ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈತ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ವಾಸಿಸುತ್ತಿದ್ದಾನೆ. ಗೋಲ್ಡಿ ಬ್ರಾರ್ 2017ರಲ್ಲಿ ವಿದ್ಯಾರ್ಥಿ ವೀಸಾದ ಮೂಲಕ ಭಾರತದಿಂದ ಪರಾರಿಯಾಗಿದ್ದು, ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ಸಹಾಯಕ ಮತ್ತು ಸಾರ್ವಜನಿಕ ಮುಖವಾಗಿದ್ದಾನೆ. 2022ರಲ್ಲಿ ಪಂಜಾಬಿ ರ‍್ಯಾಪರ್ ಸಿದ್ಧು ಮೂಸೆ ವಾಲಾ ಕೊಲೆಗೆ ತಾನೇ ಜವಾಬ್ದಾರ ಎಂದು ಬ್ರಾರ್ ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಅಂದಿನಿಂದ, ಕೆನಡಾದಲ್ಲಿ ಬೆದರಿಸಿ ಹಣ ಪಡೆಯುವುದು ಮತ್ತು ಗುರಿಯಿಟ್ಟ ಕೊಲೆಗಳನ್ನು ನಡೆಸುತ್ತಿದ್ದಾನೆ. ಆಗಾಗ್ಗೆ ಎನ್‌ಕ್ರಿಪ್ಟೆಡ್ ಆಪ್‌ಗಳನ್ನು ಬಳಸಿಕೊಂಡು ಜೈಲಿನಲ್ಲಿರುವ ಬಿಷ್ಣೋಯ್‌ನ ಜಾಲದೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾನೆ ಎಂದು ವರದಿಗಳು ಹೇಳಿವೆ.

ಜೂನ್ 2025ರಲ್ಲಿ ಕೆಲವು ವರದಿಗಳು ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ನಡುವೆ ಜಗಳವಿದೆ ಎಂದು ಹೇಳಿದ್ದವು. ಆದರೂ, ಬ್ರಾರ್ ಇನ್ನೂ ವಿದೇಶದಲ್ಲಿ ವಾಸಿಸುವ ಜನರ ವ್ಯಾಪಾರಗಳನ್ನು ಗುರಿಯಾಗಿಸುವ ಬಿಷ್ಣೋಯ್‌ನ ಬೆದರಿಕೆಯಿಂದ ಹಣ ಪಡೆಯುವ ಜಾಲದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗ್ತಿದೆ.

ಈ ಗ್ಯಾಂಗ್ ಬ್ರಾಂಪ್ಟನ್‌ನ ‘ಬ್ರದರ್ಸ್ ಕೀಪರ್ಸ್’ ಎಂಬ ಸಣ್ಣ ಗುಂಪಿನೊಂದಿಗೂ ಸಂಪರ್ಕ ಹೊಂದಿದೆ. ಈ ಗುಂಪು ಪಂಜಾಬಿ ಸಂಗೀತಗಾರರು ಮತ್ತು ವ್ಯಾಪಾರಿಗಳ ವಿರುದ್ಧ ಬೆಂಕಿಯಿಡುವಿಕೆ ಮತ್ತು ಗುಂಡಿನ ದಾಳಿಗಳನ್ನು ಮಾಡಿದ ಆರೋಪ ಎದುರಿಸುತ್ತಿದೆ.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...