Homeಮುಖಪುಟಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು:...

ಅಯೋಧ್ಯೆ ತೀರ್ಪು | ಮಾಜಿ ಸಿಜೆಐ ಚಂದ್ರಚೂಡ್ ಹೇಳಿಕೆಗಳ ಆಧಾರದ ಮೇಲೆ ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು: ಕಾನೂನು ತಜ್ಞ ಪ್ರೊ. ಜಿ. ಮೋಹನ್ ಗೋಪಾಲ್

- Advertisement -
- Advertisement -

ಅಯೋಧ್ಯೆ ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಕುರಿತ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳು, 2019ರ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಸಾಕಷ್ಟು ಆಧಾರಗಳನ್ನು ಒದಗಿಸಬಹುದು ಎಂದು ಕಾನೂನು ತಜ್ಞ ಪ್ರೊಫೆಸರ್ ಡಾ.ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

‘ಬಾಬರಿ ಮಸೀದಿ ನಿರ್ಮಾಣವೇ ಮೂಲಭೂತ ಅಪವಿತ್ರ ಕೃತ್ಯ’ ಎಂಬ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಭಿಪ್ರಾಯವು 2019ರ ತೀರ್ಪಿಗೆ ವಿರುದ್ಧವಾಗಿದೆ ಎಂದು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದು, ಮಸೀದಿ ನಿರ್ಮಿಸಲು ದೇವಾಲಯವನ್ನು ನಾಶಪಡಿಸಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದ್ದಾರೆ.

2019ರ ರಾಮ ಮಂದಿರ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಎಸ್.ಎ ಬೊಬ್ಡೆ, ಡಿ.ವೈ ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಪೀಠ ಪ್ರಕಟಿಸಿತ್ತು.

ಈ ತೀರ್ಪು ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಪಕ್ಷಗಳಿಗೆ ಅನುಮತಿ ನೀಡಿತ್ತು. ಮುಸ್ಲಿಂ ಪಕ್ಷಕಾರರು ವಿವಾದಿತ ಸ್ಥಳದ ಮೇಲೆ ತಮ್ಮ ಸಂಪೂರ್ಣ ಹಕ್ಕನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ತೀರ್ಪು ಹೇಳಿತ್ತು. ಇದೇ ವೇಳೆ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ತೀರ್ಪು ಹೇಳಿತ್ತು. ಈ ತೀರ್ಪನ್ನು ಮುಖ್ಯವಾಗಿ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೇ ಬರೆದಿದ್ದಾರೆ ಎಂದು ನಂಬಲಾಗಿದೆ.

ತೀರ್ಪು ಮತ್ತು ನ್ಯಾಯಮೂರ್ತಿ ಚಂದ್ರಚೂಡ್ ಅವರ ನಂತರದ ಹೇಳಿಕೆಗಳ ನಡುವಿನ ಅಸಂಗತತೆಯು, ತೀರ್ಪಿನ ಮೇಲಿನ ಜನರ ವಿಶ್ವಾಸವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಹೊಂದಿದೆ ಪ್ರೊಫೆಸರ್ ಗೋಪಾಲ್ ಅವರು ಹೇಳಿದ್ದಾರೆ.

“ನ್ಯಾಯಾಲಯದ ಅಂತಿಮ ಜವಾಬ್ದಾರಿಯೆಂದರೆ ಜನರಲ್ಲಿ ವಿಶ್ವಾಸವನ್ನು ಮೂಡಿಸುವ ತೀರ್ಪುಗಳನ್ನು ನೀಡುವುದು. ನ್ಯಾಯ ದೊರೆಯಬೇಕು ಎಂದು ಮಾತ್ರವಲ್ಲ, ಅದು ದೊರೆತಿದೆ ಎಂದು ಎಲ್ಲರಿಗೂ, ವಿಶೇಷವಾಗಿ ಪ್ರಕರಣದಲ್ಲಿ ಸೋತವರಿಗೆ ಕಾಣಿಸಬೇಕು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಅಯೋಧ್ಯೆ ತೀರ್ಪು ತಪ್ಪಾಗಿ ನೀಡಲಾಗಿದೆ. ಈಗ ಪ್ರಶ್ನೆಯೆಂದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಹೇಳಿರುವುದನ್ನು ಗಮನದಲ್ಲಿಟ್ಟುಕೊಂಡು, ನಾವು ಒಟ್ಟಾಗಿ ಕ್ಯುರೇಟಿವ್ ಪಿಟಿಷನ್ ಸಲ್ಲಿಸಬೇಕೇ? ಎಂಬುದು, ಬಹುಶಃ ಸಲ್ಲಿಸಬೇಕು. ಏನಾಗುತ್ತದೆ ಎಂದು ನೋಡೋಣ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ.

ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಸಿ.ಎಚ್ ಮೊಹಮ್ಮದ್ ಕೋಯಾ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ವಕೀಲ ಮತ್ತು ಐಯುಎಂಎಲ್ ಸಂಸದ ಹಾರಿಸ್ ಬೀರನ್ ಕೇಳಿದ ಪ್ರಶ್ನೆಗೆ ಪ್ರೊ. ಗೋಪಾಲ್ ಉತ್ತರಿಸಿದ್ದಾರೆ.

2019ರ ಅಯೋಧ್ಯೆ ತೀರ್ಪನ್ನು “ಕೃತಕ” (contrived) ಮತ್ತು “ತರ್ಕರಹಿತ” (unreasoned) ಎಂದು ವಿವರಿಸಿದ ಪ್ರೊ. ಗೋಪಾಲ್, “ತೀರ್ಪಿಗೆ ಸೇರಿಸಲಾದ ಒಂದು ಭಾಗ (ಅಡೆಂಡಮ್) ಸಂಪೂರ್ಣವಾಗಿ ಧಾರ್ಮಿಕ ಆಡಳಿತದಂತಿತ್ತು (theocracy). ಆ ಭಾಗಕ್ಕೆ ಯಾರೂ ಸಹಿ ಮಾಡಿರಲಿಲ್ಲ. ಇಡೀ ತೀರ್ಪೇ ಶಂಕಾಸ್ಪದವಾಗಿದೆ” ಎಂದಿದ್ದಾರೆ.

“ದಯವಿಟ್ಟು ನೀವು ನ್ಯಾಯಪೀಠದಲ್ಲಿರುವಾಗ ನಿಮ್ಮ ಸೈದ್ಧಾಂತಿಕ ದೃಷ್ಟಿಕೋನದ ಬಗ್ಗೆ ಪಾರದರ್ಶಕವಾಗಿರಿ ಎಂದು ನಾನು ನ್ಯಾಯಾಧೀಶರಲ್ಲಿ ಮನವಿ ಮಾಡುತ್ತೇನೆ” ಎಂದ ಪ್ರೊ. ಗೋಪಾಲ್, ನ್ಯಾಯಮೂರ್ತಿ ಚಿನ್ನಪ್ಪ ರೆಡ್ಡಿ ತಾವು ಮಾರ್ಕ್ಸ್‌ವಾದಿ (ಕಮ್ಯೂನಿಸ್ಟ್ ಆಲೋಚನೆಯವರು) ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಕ್ಕಾಗಿ ಪ್ರೊ. ಉಪೇಂದ್ರ ಬಕ್ಷಿ ಅವರನ್ನು ಪ್ರಶಂಸಿಸಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ. “ಇಡಬ್ಲ್ಯುಎಸ್‌ ಮೀಸಲಾತಿ ಪ್ರಕರಣದಲ್ಲಿ, ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಎಸ್. ರವೀಂದ್ರ ಭಟ್ ಆರಂಭದಲ್ಲಿ ಅರ್ಜಿದಾರರ ವಾದಗಳ ಬಗ್ಗೆ ಸಂಶಯ ಹೊಂದಿದ್ದರು ಎಂದು ಮುಕ್ತವಾಗಿ ಹೇಳಿದ್ದರು. ಆದರೆ, ನಂತರ ಆ ವಾದಗಳಲ್ಲಿ ಒಳಿತು ಕಂಡು ಮೀಸಲಾತಿಯನ್ನು ರದ್ದುಗೊಳಿಸಿದರು. ನ್ಯಾಯಾಧೀಶರಿಗೆ ಯಾವುದೇ ಆಲೋಚನೆಗಳು ಇರಬಹುದು. ಆದರೆ, ಅವರು ಪ್ರಾಮಾಣಿಕರಾಗಿರಬೇಕು, ಸತ್ಯವನ್ನು ಹೇಳಬೇಕು ಮತ್ತು ತಮ್ಮ ದೃಷ್ಟಿಕೋನವನ್ನು ಮರೆಮಾಚದೆ ತಿಳಿಸಬೇಕು “ಎಂದಿದ್ದಾರೆ. 

ನ್ಯಾ. ಚಂದ್ರಚೂಡ್ ಅವರಿಗೆ ಅಯೋಧ್ಯೆ ವಿವಾದದ ಬಗ್ಗೆ ತೀವ್ರವಾದ ವೈಯಕ್ತಿಕ ನಂಬಿಕೆಗಳಿದ್ದರೆ (ಉದಾಹರಣೆಗೆ, ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಿದ್ದು ‘ಅಪವಿತ್ರ’ ಎಂದು ಭಾವಿಸಿದ್ದರೆ), ಅವರು ಈ ಪ್ರಕರಣದ ತೀರ್ಪಿನಿಂದ ದೂರ ಉಳಿಯಬೇಕಿತ್ತು ಪ್ರೊ. ಗೋಪಾಲ್ ಅಭಿಪ್ರಾಯಪಟ್ಟಿದ್ದಾರೆ.

“ಚಂದ್ರಚೂಡ್ ಅವರು ಒಬ್ಬ ಒಳ್ಳೆಯ ನ್ಯಾಯಾಧೀಶ ಮತ್ತು ನನ್ನ ಸ್ನೇಹಿತರಾಗಿದ್ದರೂ, ಅಯೋಧ್ಯೆ ಪ್ರಕರಣದಲ್ಲಿ ಅವರು ತಮ್ಮ ವೈಯಕ್ತಿಕ ನಂಬಿಕೆಗಳ ಬಗ್ಗೆ (ಉದಾಹರಣೆಗೆ, ಬಾಬರಿ ಮಸೀದಿಯನ್ನು ‘ಅಪವಿತ್ರ’ ಎಂದು ಭಾವಿಸಿದ್ದು) ಪಾರದರ್ಶಕವಾಗಿರಲಿಲ್ಲವೇ?” ಎಂದು ಗೋಪಾಲ್ ಪ್ರಶ್ನಿಸಿದ್ದಾರೆ.

“ನ್ಯಾಯಮೂರ್ತಿ ಚಂದ್ರಚೂಡ್ ಅವರ ಇತ್ತೀಚಿನ ಹೇಳಿಕೆಗಳಿಂದಾಗಿ 2019ರ ಅಯೋಧ್ಯೆ ತೀರ್ಪು ಈಗ ‘ದೋಷಪೂರಿತ’ವಾಗಿದೆ (ಅಂದರೆ, ತಪ್ಪಿತ್ತು ಎಂದು ಪರಿಗಣಿಸಬಹುದು) ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸುವುದು ಜನರ ಅಭಿಪ್ರಾಯವನ್ನು ರೂಪಿಸಲು ಮತ್ತು ಅಯೋಧ್ಯೆ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ತಿಳಿಸಲು ಒಂದು ಅವಕಾಶವಾಗಿದೆ” ಎಂದು ಪ್ರೊ. ಗೋಪಾಲ್ ಹೇಳಿದ್ದಾರೆ,

“ನ್ಯಾಯಮೂರ್ತಿ ಚಂದ್ರಚೂಡ್ ಅವರು ಏನು ಹೇಳಿದ್ದಾರೆ ಎಂದು ತಿಳಿದುಕೊಳ್ಳೋಣ ಮತ್ತು ಕ್ಯುರೇಟಿವ್ ಪಿಟಿಷನ್ (ಪುನಃಪರಿಶೀಲನಾ ಅರ್ಜಿ) ಸಲ್ಲಿಸಲು ಕೆಲಸ ಮಾಡೋಣ. ಈ ಇಡೀ ವಿಷಯವನ್ನು ಮತ್ತೆ ವಿಚಾರಣೆ ಮಾಡಬೇಕೆಂದು ಕೋರೋಣ. ಈಗ ಈ ತೀರ್ಪು ದೋಷಪೂರಿತವಾಗಿದೆ. ಈ ರೀತಿಯ ಪ್ರತಿಕ್ರಿಯೆಯ ಮೂಲಕ ನಾವು ಜನರ ಅಭಿಪ್ರಾಯವನ್ನು ರೂಪಿಸಬಹುದು. ಚಂದ್ರಚೂಡ್ ಅವರ ಹೇಳಿಕೆಗಳನ್ನು ಒಂದು ಅವಕಾಶವಾಗಿ ಬಳಸಿಕೊಂಡು, ಈ ಪ್ರಕರಣದಲ್ಲಿ ನಿಜವಾಗಿ ಏನಾಯಿತು ಎಂದು ಜನರಿಗೆ ಮನವರಿಕೆ ಮಾಡೋಣ ಮತ್ತು ಸಾಧ್ಯವಾದರೆ ಕೋರ್ಟ್‌ಗೆ ಹೋಗಿ ಈ ಪ್ರಕರಣವನ್ನು ಮತ್ತೆ ವಿಚಾರಣೆಗೆ ಒಳಪಡಿಸುವಂತೆ ಮಾಡೋಣ” ಎಂದು ಪ್ರೊ. ಮೋಹನ್ ಜಿ. ಗೋಪಾಲ್ ಹೇಳಿದ್ದಾರೆ.

ಇತ್ತೀಚೆಗೆ ದಿ ವೈರ್‌ನ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರಿಗೆ ನೀಡಿದ ಸಂದರ್ಶನದಲ್ಲಿ, ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು “ಬಾಬರಿ ಮಸೀದಿ ನಿರ್ಮಾಣವೇ ಅಪವಿತ್ರ” ಎಂದು ಹೇಳಿದ್ದಾರೆ. ತೀರ್ಪಿನಲ್ಲಿ ದಾಖಲಾದ ಅಂಶಗಳಿಗೆ ವಿರುದ್ಧವಾಗಿರುವ ಈ ಹೇಳಿಕೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Now it’s established that the Ayodhya judgement is a chief justice has not followed justice. .He being a Hindu and he was supporter of VHP and BJP he has killed the justice. Even at that time Vajpayee was also felt that justice was denied . He wasn’t happy with the concocted judgement.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...