Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...