Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...