Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...