Homeಅಂತರಾಷ್ಟ್ರೀಯಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

ಫಿಲಿಪೈನ್ಸ್‌ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ, 150ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಸೆಂಟ್ರಲ್ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಸಾವಿಗೀಡಾದವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕುಸಿದ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ದುರಂತದಲ್ಲಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಭೂಕಂಪದಿಂದ ಹಾನಿಗೊಳಗಾಗಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಮರುಸ್ಥಾಪಿಸಲು ಸಂಬಂಧಪಟ್ಟ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ಫಿಲಿಪೈನ್ಸ್‌ನ ಸೆಬೂ ಪ್ರಾಂತ್ಯದ ಉತ್ತರ ಭಾಗದಲ್ಲಿರುವ ಬೊಗೊ ನಗರದ ಬಳಿ ಕಡಲ ತೀರದಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಕಂಪನ ಸಂಭವಿಸಿದೆ. ಇದರ ಕೇಂದ್ರ ಬಿಂದು ಬೊಗೊ ನಗರಕ್ಕೆ ಸಮೀಪದಲ್ಲೇ ಇದೆ. ಗಾಯಾಳುಗಳಿಂದ ಆಸ್ಪತ್ರೆಗಳು ತುಂಬಿವೆ, ಆಸ್ಪತ್ರೆ ಸಿಬ್ಬಂದಿ ಒತ್ತಡ ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ ಎಂದು ರಫಿ ಅಲೆಜಾಂಡ್ರೊ ಎಂಬ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸೆಬೂ ಪ್ರಾಂತ್ಯದ ವಿಪತ್ತು ನಿರ್ವಹಣಾ ಕಚೇರಿಯ ಮಾಹಿತಿಯ ಆಧಾರದ ಮೇಲೆ 69 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಸಂಖ್ಯೆಯನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಪ್ರಾದೇಶಿಕ ಸಿವಿಲ್ ಡಿಫೆನ್ಸ್ ಕಚೇರಿಯ ಮಾಹಿತಿ ಅಧಿಕಾರಿ ಜೇನ್ ಅಬಾಪೊ ಹೇಳಿದ್ದಾರೆ. ಮತ್ತೊಬ್ಬ ಅಧಿಕಾರಿಯ ಪ್ರಕಾರ, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ಫಿಲಿಪೈನ್ಸ್‌ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಬದುಕುಳಿದವರಿಗೆ ಶೀಘ್ರ ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ಕಾರ್ಯದರ್ಶಿಗಳು ಸ್ಥಳದಲ್ಲೇ ಇದ್ದು, ಪರಿಹಾರ ಕಾರ್ಯಾಚರಣೆಗಳನ್ನು ನಿರ್ದೇಶಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ  ಸಂತಾಪ ಸೂಚಿಸಿದ್ದಾರೆ.

ಸೆಬೂ ನಗರ ಫಿಲಿಪೈನ್ಸ್‌ನ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇಲ್ಲಿ 34 ಲಕ್ಷ ಜನರು ವಾಸಿಸುತ್ತಾರೆ. ಭೂಕಂಪದಿಂದ ಆಗಿರುವ ಹಾನಿಯ ಹೊರತಾಗಿಯೂ, ದೇಶದ ಎರಡನೇ ಅತಿ ಜನ ನಿಬಿಡ ವಿಮಾನ ನಿಲ್ದಾಣ ಎನಿಸಿಕೊಂಡಿರುವ ಮ್ಯಾಕ್ಟಾನ್-ಸೆಬೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಸೆಬೂ ಬಳಿಕ ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಮತ್ತೊಂದು ನಗರವಾದ ಸ್ಯಾನ್ ರೆಮಿಜಿಯೊವನ್ನು ವಿಪತ್ತು ಘೋಷಿತ ಪ್ರದೇಶವೆಂದು ಗುರುತಿಸಲಾಗಿದೆ. ಇದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗೆ ಸಹಾಯವಾಗಲಿದೆ. ಸ್ಥಳಾಂತರಗೊಂಡವರಿಗೆ ಆಹಾರ ಮತ್ತು ನೀರಿನ ಅಗತ್ಯವಿದೆ, ಹಾಗೆಯೇ ಶೋಧ ಮತ್ತು ರಕ್ಷಣಾ ಕಾರ್ಯಕರ್ತರಿಗೆ ಸಹಾಯ ಮಾಡಲು ಭಾರೀ ಉಪಕರಣಗಳ ಅಗತ್ಯವಿದೆ ಎಂದು ನಗರದ ಉಪಮೇಯರ್ ಆಲ್ಫಿ ರೇನ್ಸ್ ಮನವಿ ಮಾಡಿದ್ದಾರೆ.

“ಭಾರೀ ಮಳೆಯಾಗುತ್ತಿದೆ ಮತ್ತು ವಿದ್ಯುತ್ ಇಲ್ಲ, ಆದ್ದರಿಂದ ನಮಗೆ ನಿಜವಾಗಿಯೂ ಸಹಾಯ ಬೇಕು. ವಿಶೇಷವಾಗಿ ನಗರದ ಉತ್ತರ ಭಾಗದಲ್ಲಿ, ಏಕೆಂದರೆ ಭೂಕಂಪದಿಂದ ನೀರಿನ ಪೂರೈಕೆ ಮಾರ್ಗಗಳು ಹಾನಿಗೊಳಗಾಗಿವೆ. ಇದರಿಂದ ನೀರಿನ ಕೊರತೆ ಎದುರಾಗಿದೆ” ಎಂದು ರೇನ್ಸ್ ಡಿಜೆಡ್‌ಎಂಎಂ ರೇಡಿಯೊಗೆ ತಿಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು, ಭೂಮಿ ಕಂಪಿಸುವಾಗ ಜನರು ತಮ್ಮ ಮನೆಗಳಿಂದ ಓಡಿಹೋಗುವ ಮತ್ತು ಕಟ್ಟಡಗಳು ಕುಸಿಯುವ ದೃಶ್ಯಗಳನ್ನು ತೋರಿಸಿವೆ. 100 ವರ್ಷಗಳಿಗಿಂತ ಹಳೆಯ ಚರ್ಚ್‌ವೊಂದು ಕುಸಿದ ದೃಶ್ಯಗಳನ್ನು ಪ್ರಕಟಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ಭೂಕಂಪವು ಭೂಮಿಯಿಂದ 10 ಕಿಮೀ ಆಳದಲ್ಲಿ ಸಂಭವಿಸಿದೆ. 6.9 ತೀವ್ರತೆಯ ಪ್ರಬಲ ಕಂಪನದ ನಂತರ, 6.0 ತೀವ್ರತೆಯವರೆಗಿನ ಕೆಲವು ಸಣ್ಣ ಕಂಪನಗಳು ಆಗಿವೆ. ಆದರೆ, ಅವುಗಳಿಂದ ಸುನಾಮಿ ಅಪಾಯ ಇರಲಿಲ್ಲ. ಫಿಲಿಪೈನ್ಸ್‌ನಲ್ಲಿ ಭೂಕಂಪಗಳು ಮತ್ತು ಜ್ವಾಲಾಮುಖಿಗಳು ಸಾಮಾನ್ಯ. ಏಕೆಂದರೆ ಆ ದೇಶ “ರಿಂಗ್ ಆಫ್ ಫೈರ್” ಪ್ರದೇಶದಲ್ಲಿದೆ. ಈ ವರ್ಷದ ಜನವರಿಯಲ್ಲಿ ಎರಡು ದೊಡ್ಡ ಭೂಕಂಪಗಳು ಸಂಭವಿಸಿದ್ದವು. ಆದರೆ, ಯಾವುದೇ ಜೀವಹಾನಿ ಆಗಿರಲಿಲ್ಲ. 2023ರಲ್ಲಿ ಸಂಭವಿಸಿದ ಭೂಕಂಪದಿಂದ 8 ಜನರು ಸಾವನ್ನಪ್ಪಿದ್ದರು.

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...