Homeಕರ್ನಾಟಕರಾಹುಲ್ ಗಾಂಧಿಗೆ ಜೀವ ಬೆದರಿಕೆ: ಪ್ರಧಾನಿ, ಗೃಹ ಸಚಿವರ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಪ್ರಧಾನಿ, ಗೃಹ ಸಚಿವರ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದು ಸಿಎಂ ತಿಳಿಸಿದ್ದಾರೆ.

ಅಸಮಾನತೆ ಹೋಗಲಾಡಿಸಲು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...