Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...