Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....