Homeಮುಖಪುಟಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ, ಮಂಗಳವಾರ (ಸೆ.30) ಭಾರತೀಯ ಚುನಾವಣಾ ಆಯೋಗ (ಇಸಿಐ) ಬಿಹಾರದ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ವರ್ಷದ ಜೂನ್ 24ರ ವೇಳೆಗೆ 7.89 ಕೋಟಿ ಇದ್ದ ಬಿಹಾರದ ಒಟ್ಟು ಮತದಾರ ಸಂಖ್ಯೆ, ಎಸ್‌ಐಆರ್‌ ಬಳಿಕ 7.42 ಕೋಟಿಗೆ ಇಳಿದಿದೆ. ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆಯ ಪ್ರಕಾರ 65 ಲಕ್ಷ ಮತದಾರರನ್ನು  ಪಟ್ಟಿಯಿಂದ ಕೈಬಿಡಲಾಗಿದೆ.

ಎಸ್‌ಐಆರ್ ಬಳಿಕ ಆಗಸ್ಟ್ 1, 2025ರಂದು ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿತ್ತು. ಅದರಲ್ಲಿ 7.24 ಕೋಟಿ ಮತದಾರರಿದ್ದರು. ಇವರಲ್ಲಿ 3.66 ಲಕ್ಷ ಅನರ್ಹ ಮತದಾರರನ್ನು ಕೈಬಿಡಲಾಗಿದೆ. ಮತ್ತು 21.53 ಲಕ್ಷ ಅರ್ಹ ಮತದಾರರನ್ನು ಫಾರ್ಮ್ 6 ಬಳಸಿ ಸೇರಿಸಲಾಗಿದೆ. ಇದರಿಂದಾಗಿ ಅಂತಿಮ ಮತದಾರರ ಸಂಖ್ಯೆ 7.42 ಕೋಟಿ ಆಗಿದೆ.

ಎಸ್‌ಐಆರ್ ಪ್ರಕ್ರಿಯೆ ಸಂಕೀರ್ಣವಾಗಿತ್ತು. ಇದಕ್ಕಾಗಿ ಇದರಲ್ಲಿ ಭಾಗಿಯಾಗಿದ್ದ ಎಲ್ಲಾ ಪಕ್ಷಗಳು, ಮತದಾರರು ಮತ್ತು ಇತರ ಪ್ರಮುಖ ಪಾಲುದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಈ ನಡುವೆ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ನಂತರ, ವಿರೋಧ ಪಕ್ಷಗಳಿಂದ ಚುನಾವಣಾ ಆಯೋಗದ ವಿರುದ್ದ ಮೌಖಿಕ ದಾಳಿ ಮತ್ತು ಟೀಕೆಗಳು ಕೇಳಿ ಬಂದಿವೆ.

4.6 ಲಕ್ಷ ಹೊಸ ಮತದಾರರು ಹೇಗೆ ಸೇರ್ಪಡೆಯಾದರು? ಯೋಗೇಂದ್ರ ಯಾದವ್ ಪ್ರಶ್ನೆ

ಅಂತಿಮ ಪಟ್ಟಿಗೆ 4.6 ಲಕ್ಷ ಹೊಸ ಮತದಾರರನ್ನು ಹೇಗೆ ಸೇರಿಸಲಾಗಿದೆ ಎಂದು ಯೋಗೇಂದ್ರ ಯಾದವ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

“ಚುನಾವಣಾ ಆಯೋಗದ ಪ್ರಕಾರ, ಸೆಪ್ಟೆಂಬರ್ 1ರವರೆಗೆ ಸ್ವೀಕರಿಸಿದ ಹೊಸ ಫಾರ್ಮ್ -6 ಸಂಖ್ಯೆ 16.93 ಲಕ್ಷ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರಲಿಲ್ಲ. ಹೀಗಿರುವಾಗ ಚುನಾವಣಾ ಆಯೋಗ ಒಟ್ಟು 21.53 ಲಕ್ಷ ಮತದಾರರನ್ನು ಸೇರ್ಪಡೆಗೊಳಿಸಿರುವುದು ಹೇಗೆ? ಸೆಪ್ಟೆಂಬರ್ 1ರ ನಂತರ ಅಂತಿಮ ಪಟ್ಟಿಗೆ ಕನಿಷ್ಠ 4.6 ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿದ್ದು ಹೇಗೆ? ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯೋಗೇಂದ್ರ ಯಾದವ್ ಕೇಳಿದ್ದಾರೆ. 

ಅಂತಿಮ ಪಟ್ಟಿಯಲ್ಲಿ ಬಡವರು, ದಲಿತರ ಹೆಸರು ಸೇರಿಸಿಲ್ಲ- ಪ್ರತಿಪಕ್ಷಗಳ ಆರೋಪ

ಕಾಂಗ್ರೆಸ್ ಪಕ್ಷವು ಅಂತಿಮ ಮತದಾರರ ಪಟ್ಟಿಯನ್ನು ತೀವ್ರವಾಗಿ ಟೀಕಿಸಿದೆ. ಎಸ್‌ಐಆರ್ ಅನ್ಯಾಯ ಮತ್ತು ಪಾರದರ್ಶಕತೆ ಕೊರತೆಯಿಂದ ಕೂಡಿದೆ ಎಂದಿದೆ.

ಎಸ್‌ಐಆಎರ್ ಪ್ರಕ್ರಿಯೆಯು ಆರಂಭದಿಂದಲೂ ದೋಷಪೂರಿತವಾಗಿದೆ. ಆದರೂ ಚುನಾವಣಾ ಆಯೋಗ ಎಸ್‌ಐಆರ್ ಯಶಸ್ವಿಯಾಗಿದೆ ಎಂದು ಘೋಷಿಸಿದೆ. 68 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಮತ್ತು ಕೇವಲ 21.53 ಲಕ್ಷ ಹೆಸರುಗಳನ್ನು ಮಾತ್ರ ಸೇರಿಸಲಾಗಿದೆ. ಜನರ ಮತದಾನದ ಹಕ್ಕನ್ನು ರಕ್ಷಿಸಲು ನಮ್ಮ ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್ ಹೇಳಿದ್ದಾರೆ.

ನಮ್ಮ ಶತ ಪ್ರಯತ್ನಗಳ ಹೊರತಾಗಿಯೂ ಬಡವರು, ದಲಿತರು, ಅತ್ಯಂತ ಹಿಂದುಳಿದವರು ಮತ್ತು ಹಿಂದುಳಿದ ವರ್ಗಗಳ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 10,000 ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಕಂಡುಕೊಂಡಿದ್ದೇವೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಕ್ತಾರ ಶಕ್ತಿ ಸಿಂಗ್ ಯಾದವ್ ತಿಳಿಸಿದ್ದಾರೆ.

ಮತಗಳ್ಳತನ ಆರೋಪಗಳಿಗೆ ಸೂಕ್ತ ಉತ್ತರ- ಎನ್‌ಡಿಎ

ಬಿಜೆಪಿ ವಕ್ತಾರ ಪ್ರಭಾಕರ್ ಮಿಶ್ರಾ ಅವರು ವಿರೋಧ ಪಕ್ಷದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಇದು ಮತಗಳ್ಳತನದ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರವಾಗಿದೆ” ಎಂದು ಹೇಳಿದ್ದಾರೆ. 

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಮಾತನಾಡಿ, 21.53 ಲಕ್ಷ ಹೊಸ ಹೆಸರುಗಳನ್ನು ಸೇರಿಸಲಾಗಿದೆ. ಅದರಲ್ಲಿ ಹೆಚ್ಚಿನವು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ದಲಿತ ಸಮುದಾಯಗಳಿಗೆ ಸೇರಿದವಾಗಿವೆ. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿಯ ‘ಮತ ಕಳ್ಳತನ’ ಆರೋಪಗಳಿಗೆ ಚುನಾವಣಾ ಆಯೋಗದ ಅಂತಿಮ ಪಟ್ಟಿಯು ಸರಿಯಾದ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

ಇಸ್ರೇಲ್ ಬೆದರಿಕೆಗಳ ನಡುವೆಯೂ ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...