Homeಮುಖಪುಟ2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

- Advertisement -
- Advertisement -

2023ರಲ್ಲಿ ದೇಶದಲ್ಲಿ ನಡೆದ 24,678 ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 21,803 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಸಾವು ನೋವುಗಳು ವರದಿಯಾಗಿವೆ. 2023ರಲ್ಲಿ ನಡೆದ ಒಟ್ಟು ರೈಲ್ವೆ ಅಪಘಾತಗಳಲ್ಲಿ 56 ಪ್ರಕರಣಗಳು ಚಾಲಕನ ತಪ್ಪಿನಿಂದ ಉಂಟಾಗಿದ್ದರೆ, 43 ರೈಲು ಅಪಘಾತಗಳು ಕಳಪೆ ವಿನ್ಯಾಸ, ಹಳಿ ದೋಷಗಳು, ಸೇತುವೆ ಅಥವಾ ಸುರಂಗ ಕುಸಿತದಂತಹ ಯಾಂತ್ರಿಕ ದೋಷಗಳಿಂದ ಸಂಭವಿಸಿವೆ ಎಂದು ವರದಿ ವಿವರಿಸಿದೆ.

ರೈಲುಗಳಿಂದ ಜನರು ಬೀಳುವುದು, ಹಳಿಗಳಲ್ಲಿ ಜನರಿಗೆ ರೈಲು ಡಿಕ್ಕಿ ಹೊಡೆಯುವುದು ರೈಲ್ವೆ ಅಪಘಾತಗಳಲ್ಲಿ ಅತಿ ಹೆಚ್ಚು (ಶೇ.74.9ರಷ್ಟು ಅಥವಾ 24,678ರಲ್ಲಿ 18,480 ಪ್ರಕರಣಗಳು) ಸಂಭವಿಸಿದೆ. ರೈಲುಗಳಿಂದ ಬೀಳುವುದು ಅಥವಾ ಹಳಿಗಳಲ್ಲಿ ಜನರಿಗೆ ರೈಲುಗಳು ಡಿಕ್ಕಿ ಹೊಡೆಯುವುದರಿಂದ 15,878 ಜನರು ಸಾವನ್ನಪ್ಪಿದ್ದಾರೆ. ಇದು ರೈಲ್ವೆ ಅಪಘಾತಗಳ ಒಟ್ಟು ಸಾವುಗಳಲ್ಲಿ ಶೇ.72.8ರಷ್ಟು ಎಂದು ಎಂದು ವರದಿ ಬಹಿರಂಗಪಡಿಸಿದೆ.

ರೈಲಿನಿಂದ ಬೀಳುವುದು ಅಥವಾ ಹಳಿಯಲ್ಲಿ ರೈಲು ಡಿಕ್ಕಿ ಹೊಡೆದ ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲಿ ಶೇ. 29.8ರಷ್ಟು ಅಥವಾ 5,507 ಪ್ರಕರಣಗಳು ದಾಖಲಾಗಿವೆ.

ಒಟ್ಟು 24,678 ರೈಲ್ವೆ ಅಪಘಾತ ಪ್ರಕರಣಗಳು ವರದಿಯಾಗಿದ್ದು, 2022ಕ್ಕಿಂತ (23,139) 2023ರಲ್ಲಿ ಶೇ. 6.7ರಷ್ಟು ಹೆಚ್ಚಳವಾಗಿದೆ. ಅಪಘಾತಗಳ ಪರಿಣಾಮವಾಗಿ, 2023ರಲ್ಲಿ 3,014 ಜನರು ಗಾಯಗೊಂಡಿದ್ದಾರೆ ಮತ್ತು 21,803 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಸಿಆರ್‌ಬಿ ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ರೈಲ್ವೆ ಅಪಘಾತಗಳು (5,559 ಪ್ರಕರಣಗಳು) ವರದಿಯಾಗಿದ್ದು, ಉತ್ತರ ಪ್ರದೇಶ (ಶೇ. 13ರಷ್ಟು ಅಥವಾ 3,212 ಪ್ರಕರಣಗಳು) ಎರಡನೇ ಸ್ಥಾನದಲ್ಲಿದೆ.

ದತ್ತಾಂಶದ ವಿಶ್ಲೇಷಣೆಯು ಹೆಚ್ಚಿನ ರೈಲ್ವೆ ಅಪಘಾತಗಳು (3,771 ಪ್ರಕರಣಗಳು) ಸಂಜೆ 6 ರಿಂದ ರಾತ್ರಿ 9ರ ನಡುವೆ ಸಂಭವಿಸಿವೆ ಎಂದು ಬಹಿರಂಗಪಡಿಸುತ್ತದೆ. ಇದು ಒಟ್ಟು ರೈಲ್ವೆ ಅಪಘಾತಗಳ ಶೇ.15.3ರಷ್ಟಿದೆ. ಇನ್ನು ಶೇ.15ರಷ್ಟು ಅಥವಾ 3,693 ರೈಲ್ವೆ ಅಪಘಾತಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ನಡುವೆ ವರದಿಯಾಗಿವೆ.

ರೈಲ್ವೆ ಅಪಘಾತಗಳಿಗೆ ಚಾಲಕನ ತಪ್ಪು, ವಿಧ್ವಂಸಕ ಕೃತ್ಯ, ಸಿಗ್ನಲ್‌ಮನ್‌ಗಳ ದೋಷ, ಯಾಂತ್ರಿಕ ವೈಫಲ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಗರಿಷ್ಠ (ಶೇ.41.3 ಅಥವಾ 2,483 ಪ್ರಕರಣಗಳಲ್ಲಿ 1,025) ರೈಲ್ವೆ ಕ್ರಾಸಿಂಗ್ ಅಪಘಾತಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ. 32.4ರಷ್ಟು ಅಥವಾ 805 ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ ಶೇ.15.1 ಅಥವಾ 375 ಪ್ರಕರಣಗಳು) ವರದಿಯಾಗಿವೆ.

2023ರಲ್ಲಿ ರೈಲ್ವೆ ಕ್ರಾಸಿಂಗ್ ಅಪಘಾತಗಳಲ್ಲಿ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿದ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ. 2023ರಲ್ಲಿ ಈ ರಾಜ್ಯಗಳಲ್ಲಿ ಕ್ರಮವಾಗಿ ಶೇ. 44.9 ಅಥವಾ 2,242ರಲ್ಲಿ 1,007 ಸಾವುಗಳು), ಶೇ. 25.9 ಅಥವಾ 581 ಸಾವುಗಳು ಮತ್ತು ಶೇ. 16.7 ಅಥವಾ 375 ಸಾವುಗಳು ವರದಿಯಾಗಿವೆ.

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14 ರಷ್ಟು ಹೆಚ್ಚಳ; 6,100ಕ್ಕೂ ಅಧಿಕ ಮಹಿಳೆಯರ ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...