Homeಮುಖಪುಟ2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

- Advertisement -
- Advertisement -

2023ರಲ್ಲಿ ದೇಶದಲ್ಲಿ ನಡೆದ 24,678 ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 21,803 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಸಾವು ನೋವುಗಳು ವರದಿಯಾಗಿವೆ. 2023ರಲ್ಲಿ ನಡೆದ ಒಟ್ಟು ರೈಲ್ವೆ ಅಪಘಾತಗಳಲ್ಲಿ 56 ಪ್ರಕರಣಗಳು ಚಾಲಕನ ತಪ್ಪಿನಿಂದ ಉಂಟಾಗಿದ್ದರೆ, 43 ರೈಲು ಅಪಘಾತಗಳು ಕಳಪೆ ವಿನ್ಯಾಸ, ಹಳಿ ದೋಷಗಳು, ಸೇತುವೆ ಅಥವಾ ಸುರಂಗ ಕುಸಿತದಂತಹ ಯಾಂತ್ರಿಕ ದೋಷಗಳಿಂದ ಸಂಭವಿಸಿವೆ ಎಂದು ವರದಿ ವಿವರಿಸಿದೆ.

ರೈಲುಗಳಿಂದ ಜನರು ಬೀಳುವುದು, ಹಳಿಗಳಲ್ಲಿ ಜನರಿಗೆ ರೈಲು ಡಿಕ್ಕಿ ಹೊಡೆಯುವುದು ರೈಲ್ವೆ ಅಪಘಾತಗಳಲ್ಲಿ ಅತಿ ಹೆಚ್ಚು (ಶೇ.74.9ರಷ್ಟು ಅಥವಾ 24,678ರಲ್ಲಿ 18,480 ಪ್ರಕರಣಗಳು) ಸಂಭವಿಸಿದೆ. ರೈಲುಗಳಿಂದ ಬೀಳುವುದು ಅಥವಾ ಹಳಿಗಳಲ್ಲಿ ಜನರಿಗೆ ರೈಲುಗಳು ಡಿಕ್ಕಿ ಹೊಡೆಯುವುದರಿಂದ 15,878 ಜನರು ಸಾವನ್ನಪ್ಪಿದ್ದಾರೆ. ಇದು ರೈಲ್ವೆ ಅಪಘಾತಗಳ ಒಟ್ಟು ಸಾವುಗಳಲ್ಲಿ ಶೇ.72.8ರಷ್ಟು ಎಂದು ಎಂದು ವರದಿ ಬಹಿರಂಗಪಡಿಸಿದೆ.

ರೈಲಿನಿಂದ ಬೀಳುವುದು ಅಥವಾ ಹಳಿಯಲ್ಲಿ ರೈಲು ಡಿಕ್ಕಿ ಹೊಡೆದ ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲಿ ಶೇ. 29.8ರಷ್ಟು ಅಥವಾ 5,507 ಪ್ರಕರಣಗಳು ದಾಖಲಾಗಿವೆ.

ಒಟ್ಟು 24,678 ರೈಲ್ವೆ ಅಪಘಾತ ಪ್ರಕರಣಗಳು ವರದಿಯಾಗಿದ್ದು, 2022ಕ್ಕಿಂತ (23,139) 2023ರಲ್ಲಿ ಶೇ. 6.7ರಷ್ಟು ಹೆಚ್ಚಳವಾಗಿದೆ. ಅಪಘಾತಗಳ ಪರಿಣಾಮವಾಗಿ, 2023ರಲ್ಲಿ 3,014 ಜನರು ಗಾಯಗೊಂಡಿದ್ದಾರೆ ಮತ್ತು 21,803 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಸಿಆರ್‌ಬಿ ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ರೈಲ್ವೆ ಅಪಘಾತಗಳು (5,559 ಪ್ರಕರಣಗಳು) ವರದಿಯಾಗಿದ್ದು, ಉತ್ತರ ಪ್ರದೇಶ (ಶೇ. 13ರಷ್ಟು ಅಥವಾ 3,212 ಪ್ರಕರಣಗಳು) ಎರಡನೇ ಸ್ಥಾನದಲ್ಲಿದೆ.

ದತ್ತಾಂಶದ ವಿಶ್ಲೇಷಣೆಯು ಹೆಚ್ಚಿನ ರೈಲ್ವೆ ಅಪಘಾತಗಳು (3,771 ಪ್ರಕರಣಗಳು) ಸಂಜೆ 6 ರಿಂದ ರಾತ್ರಿ 9ರ ನಡುವೆ ಸಂಭವಿಸಿವೆ ಎಂದು ಬಹಿರಂಗಪಡಿಸುತ್ತದೆ. ಇದು ಒಟ್ಟು ರೈಲ್ವೆ ಅಪಘಾತಗಳ ಶೇ.15.3ರಷ್ಟಿದೆ. ಇನ್ನು ಶೇ.15ರಷ್ಟು ಅಥವಾ 3,693 ರೈಲ್ವೆ ಅಪಘಾತಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ನಡುವೆ ವರದಿಯಾಗಿವೆ.

ರೈಲ್ವೆ ಅಪಘಾತಗಳಿಗೆ ಚಾಲಕನ ತಪ್ಪು, ವಿಧ್ವಂಸಕ ಕೃತ್ಯ, ಸಿಗ್ನಲ್‌ಮನ್‌ಗಳ ದೋಷ, ಯಾಂತ್ರಿಕ ವೈಫಲ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಗರಿಷ್ಠ (ಶೇ.41.3 ಅಥವಾ 2,483 ಪ್ರಕರಣಗಳಲ್ಲಿ 1,025) ರೈಲ್ವೆ ಕ್ರಾಸಿಂಗ್ ಅಪಘಾತಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ. 32.4ರಷ್ಟು ಅಥವಾ 805 ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ ಶೇ.15.1 ಅಥವಾ 375 ಪ್ರಕರಣಗಳು) ವರದಿಯಾಗಿವೆ.

2023ರಲ್ಲಿ ರೈಲ್ವೆ ಕ್ರಾಸಿಂಗ್ ಅಪಘಾತಗಳಲ್ಲಿ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿದ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ. 2023ರಲ್ಲಿ ಈ ರಾಜ್ಯಗಳಲ್ಲಿ ಕ್ರಮವಾಗಿ ಶೇ. 44.9 ಅಥವಾ 2,242ರಲ್ಲಿ 1,007 ಸಾವುಗಳು), ಶೇ. 25.9 ಅಥವಾ 581 ಸಾವುಗಳು ಮತ್ತು ಶೇ. 16.7 ಅಥವಾ 375 ಸಾವುಗಳು ವರದಿಯಾಗಿವೆ.

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14 ರಷ್ಟು ಹೆಚ್ಚಳ; 6,100ಕ್ಕೂ ಅಧಿಕ ಮಹಿಳೆಯರ ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...