Homeಕರ್ನಾಟಕಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ಶಿಫಾರಸ್ಸಿನಂತೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ನಿಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ತಮ್ಮ ಹೋರಾಟವನ್ನು ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸಿದವು.

ಇಷ್ಟು ದಿನ ರಾಜ್ಯಕ್ಕೆ ಸೀಮಿತವಾಗಿದ್ದ ಹೋರಾಟವನ್ನು ಇದೀಗ ರಾಷ್ಟ್ರ ರಾಜಧಾನಿಗೆ ವಿಸ್ತರಿಸಿದ್ದಾರೆ. ಅಲೆಮಾರಿಗಳ ಹೋರಾಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು, ಅಲೆಮಾರಿಗಳು ಅನಿವಾರ್ಯವಾಗಿ ‘ದೆಹಲಿ ಚಲೋ’ ಹಮ್ಮಿಕೊಂಡಿದ್ದರು. ತಮ್ಮ ಹೋರಾಟದ ಭಾಗವಾಗಿ ಇಂದು ಕಾಂಗ್ರೆಸ್‌ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ಅಲೆಮಾರಿ ಹೋರಾಟದ ನಿಯೋಗ, ಪ್ರತ್ಯೇಕ ಮೀಸಲಾತಿಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

 

ನವದೆಹಲಿಯ ಪ್ರಸಿದ್ಧ ⁠ಜಂತರ್ ಮಂತರ್‌ನಲ್ಲಿ ಅಲೆಮಾರಿಗಳು ವಿಶಿಷ್ಠ ಮತ್ತು ಆಕ್ರೋಶಭರಿತರಾಗಿ ಪ್ರತಿಭಟಿಸಿದರು. ದೆಹಲಿಯ ⁠ಕಾಂಗ್ರೆಸ್ ಪ್ರಧಾನ ಕಚೇರಿಯ ಮುಂದೆ ಸಹ ಅಲೆಮಾರಿಗಳು ತಮ್ಮ ಪ್ರದರ್ಶನ ನೀಡಿದರು. ಅಲೆಮಾರಿ ನಿಯೋಗದ ಜೊತೆಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡರು, ⁠ಸಮಸ್ಯೆ ಬಗೆಹರಿಸುವ ಪ್ರಕ್ರಿಯೆ ಕುರಿತು ತೀರ್ಮಾನ ತಗೆದುಕೊಳ್ಳಲು ಸಮಯ ಕೇಳಿದ್ದಾರೆ ಎಂದು ಹೋರಾಟಗಾರರು ಮಾಹಿತಿ ನೀಡಿದ್ದಾರೆ.

ನ್ಯಾ. ನಾಗಮೋಹನ್​ ದಾಸ್ ಅವರು ತಮ್ಮ ವರದಿಯಲ್ಲಿ​ ಅಲೆಮಾರಿಗಳು ಮೊದಲ ಆದ್ಯತೆ ನೀಡಿ, ಶೇ.1 ಪ್ರತ್ಯೇಕ ಮೀಸಲಾತಿ ಶಿಫಾರಸ್ಸು ಮಾಡಿದ್ದರು. ಜೊತೆಗೆ, ಪರಿಶಿಷ್ಟ ಸಮುದಾಯವನ್ನ ಐದು ವಿಭಾಗಗಳಾಗಿ ವಿಂಗಡಿಸಿದ್ದರು. ಆದರೆ, ಪರಿಶಿಷ್ಠ ಜಾತಿ ಪಟ್ಟಿಯಲ್ಲಿರುವ ಸ್ಪೃಶ್ಯ ಸಮುದಾಯದ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಮೂರು ವಿಭಾಗ ಮಾಡಿದ್ದರು. ಅಲೆಮಾರಿಗಳಿಗೆ ಶಿಫಾರಸ್ಸು ಮಾಡಿದ್ದ ಶೇ.1 ನ್ನು ಲಂಬಾಣಿ, ಭೋವಿ, ಕೊರಷ-ಕೊರಮ ಜಾತಿಗಳಂತ ಪ್ರಬಲ ಸಮುದಾಯ ಜೊತೆಗೆ ಸೇರಿಸಿದ್ದರು. ಇದನ್ನು ವಿರೋಧಿಸಿ 59 ಅಲೆಮಾರಿ ಸಮುದಾಯಗಳು ಹೋರಾಟ ನಡೆಸುತ್ತಿವೆ.

“ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆರೋಗವು, ವರ್ಗ 1: ಅತ್ಯಂತ ಹಿಂದುಳಿದ ಅಲೆಮಾರಿ ಜಾತಿಗಳು – 1% ಮೀಸಲಾತಿ, ವರ್ಗ 2: ಹೆಚ್ಚು ಹಿಂದುಳಿದ ಮಾದಿಗರು ಮತ್ತು ಸಂಬಂಧಿತ ಜಾತಿಗಳು – 6% ಮೀಸಲಾತಿ, ವರ್ಗ 3: ಹಿಂದುಳಿದ ಹೊಲಯರು ಮತ್ತು ಸಂಬಂಧಿತ ಜಾತಿಗಳು – 5% ಮೀಸಲಾತಿ, ವರ್ಗ 4: ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಚ ಹಾಗೂ ಸಂಬಂಧಿತ ಜಾತಿಗಳು – 4% ಮೀಸಲಾತಿ, ವರ್ಗ 5: ತಮ್ಮನ್ನು AK, AD ಹಾಗೂ AA ಎಂದು ಗುರುತಿಸಿಕೊಳ್ಳುವ ಇತರ ಜಾತಿಗಳು – 1% ಮೀಸಲಾತಿ ಹಂಚಿಕೆ ಮಾಡಬೇಕೆಂದು ಶಿಫಾರಸು ಮಾಡಿತ್ತು. ಆದರೆ, ಸರ್ಕಾರವು ಕೆಲವು ಸಂಪುಟ ಸಚಿವರ ಒತ್ತಡಕ್ಕೆ ಮಣಿದು, ಪ್ರಬಲ ರಾಜಕೀಯ ಲಾಬಿಗಳ ಬೇಡಿಕೆಗಳನ್ನು ಪೂರೈಸುವ ಆತುರದಲ್ಲಿ, ದಲಿತ ಅಲೆಮಾರಿ ಸಮುದಾಯವನ್ನು ಬಲಿಯ ಕುರಿಯನ್ನಾಗಿ ಮಾಡಲಾಗಿದೆ. ಹೆಚ್ಚು ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಕಡಿಮೆ ಹಿಂದುಳಿದ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಗಿದೆ. ಇದು ರಾಜಕೀಯ ಅಪರಾಧ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...