Homeಕರ್ನಾಟಕಮೀಸಲಾತಿ ಕುರಿತು ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ: ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ

ಮೀಸಲಾತಿ ಕುರಿತು ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ: ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ

- Advertisement -
- Advertisement -

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ನಿಂದ ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ ಮುಂದುವರಿಸಲಾಗುವುದು ಎಂದು ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ತೀರ್ಮಾನ ಮಾಡಿದೆ.

ಕರ್ನಾಟಕದ ಅಲೆಮಾರಿ ಸಮುದಾಯಗಳಿಂದ ‘ದೆಹಲಿ ಚಲೋ’ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸುದೀರ್ಘ ಮಾತುಕತೆಯಲ್ಲಿ, ಸಮಸ್ಯೆ ಬಗೆಹರಿಸುವ ಪ್ರಕ್ರಿಯೆ ಕುರಿತು ಕೈ ನಾಯಕರು ಸಮಯ ಕೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕಡೆಯಿಂದ ಖಚಿತ ಅಭಿಪ್ರಾಯ ಹೊರಬೀಳುವ ತನಕ ದೆಹಲಿ ಬಿಡದಿರಲು ಸಮಿತಿ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಒಳಮೀಸಲಾತಿ ಹಂಚಿಕೆಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಕ್ಕೆ ಆಗಿರುವ ಘೋರ ಅನ್ಯಾಯವನ್ನು ಪ್ರತಿಭಟಿಸಿ ಹಾಗೂ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಆಗಿರುವ ತಪ್ಪನ್ನು ಸರಿಪಡಿಸಬೇಕು ಎಂದು ಒತ್ತಾಯಿಸಲು ಕರ್ನಾಟಕದಿಂದ ಬಂದ ನೂರಾರು ಜನ ಅಲೆಮಾರಿ ಬಂಧುಗಳು, ಕಲಾವಿದರು ಇಂದು ದೆಹಲಿಯ ಜಂತರ್ ಮಂತರಿನಲ್ಲಿ ಆಕರ್ಶಕ ಮತ್ತು ಆಕ್ರೋಶಭರಿತ ಪ್ರತಿಭಟನೆ ನಡೆಸಿದರು. ರಾಮ, ಲಕ್ಷ್ಮಣ, ರಾವಣ, ದುರ್ಗ, ಆಂಜನೇಯ ಮುಂತಾದ ವೇಷ ತೊಟ್ಟ ಕಲಾವಿದರು ತಮ್ಮ ಕಲಾ ರೂಪಗಳಲ್ಲೇ ತಮ್ಮ ನೋವನ್ನು ಹೊರಹಾಕಿದರು. ತಮಗೆ ತಾವೇ ಚಾಟಿಯಲ್ಲಿ ಬಿಗಿದುಕೊಳ್ಳುತ್ತಿದ್ದರೂ, ಇಡೀ ಸಮಾಜಕ್ಕೆ ಆ ಏಟು ಬೀಳುವಂತೆ ಗೋಚರಿಸುತ್ತಿತ್ತ.

ಬೆಳಿಗ್ಗೆ 10 ರಿಂದ 12.30 ರ ತನಕ ಪ್ರತಿಭಟನೆ ನಡೆಸಿ ನಂತರ ಕಾಂಗ್ರೆಸ್ ಮುಖಂಡರನ್ನು ಕಾಣಲು ಕಾಂಗ್ರೆಸ್ ಕಚೇರಿಯ ಕಡೆ ಪ್ರತಿಭಟನಾಕಾರರು ಹೆಜ್ಜೆಹಾಕಿದರು. ಮಧ್ಯಪ್ರವೇಶಿಸಿದ ದೆಹಲಿ ಪೋಲೀಸರು, ಬಿಗಿಬಂದೋಬಸ್ತಿನ ಕಾರಣ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಹೋಗಲು ಅವಕಾಶವಿಲ್ಲ, ನಾವೇ ವಾಹನಗಳಲ್ಲಿ ಕರೆದೊಯ್ಯುತ್ತೇವೆ ಎಂದು ಬಸ್ಸುಗಳ ವ್ಯವಸ್ಥೆ ಮಾಡಿದರು. ಕಾಂಗ್ರೆಸ್ ಕಚೇರಿಯ ಮುಂದೆ ಅಲೆಮಾರಿ ಸಮುದಾಯದ ಆಕ್ರೋಶ ವ್ಯಕ್ತಗೊಳ್ಳುತ್ತಿತ್ತು. ಎಐಸಿಸಿ ಮುಖಂಡರು ಎಲ್ಲರನ್ನೂ ಒಳಗೆ ಬಿಡಿ ಎಂದು ಹೇಳಿದರೂ ದೆಹಲಿ ಪೋಲೀಸರು ಅವಕಾಶ ಕೊಡಲಿಲ್ಲ. ಏನಾದರೂ ಅಚಾತುರ್ಯ ನಡೆದರೆ ನಾವು ಹೊಣೆಯಾಗಬೇಕಾಗುತ್ತದೆ ಪ್ರತಿನಿಧಿಗಳನ್ನು ಮಾತ್ರ ಬಿಡಲು ಸಾಧ್ಯ ಎಂದು ಕಡ್ಡಿತುಂಡಾದಂತೆ ಹೇಳಿದರು. ಆದ್ದರಿಂದ, ನಿಯೋಗ ಮಾತ್ರವೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತನಾಡಲು ಸಾಧ್ಯವಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲೆಮಾರಿ ಮುಖಂಡರ ಸಭೆ

ಕಾಂಗ್ರೆಸ್ ಹೈಕಮಾಂಡ್ ಪರವಾಗಿ ಮಾತುಕತೆಗೆ ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ ಅವರು ನಿಯೋಗದ ಮಾತುಗಳನ್ನು ವ್ಯವಧಾನದಿಂದ ಕೇಳಿಸಿಕೊಂಡರು. ಕೊನೆಗೆ ಮಾತನಾಡಿದ ಅವರು, “ಕರ್ನಾಟಕದಿಂದ ತಾವುಗಳು ಇಷ್ಟು ದೂರ ಬರುವುದಕ್ಕೆ ಬಹಳ ಕಷ್ಟಗಳನ್ನು ತೆಗೆದುಕೊಳ್ಳಬೇಕಾಯಿತು; ಅದಕ್ಕಾಗಿ ನಾನು ವಿಷಾದಿಸುತ್ತೇನೆ. ಇಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಆಸ್ಪತ್ರೆಯಲ್ಲಿದ್ದಾರೆ. ರಾಹುಲ್ ಗಾಂಧಿಯವರು ದೇಶದ ಹೊರಗಿದ್ದಾರೆ. ದುರ್ಗ ಪೂಜೆ ಇರುವುದರಿಂದ ಎಲ್ಲ ಮುಖಂಡರುಗಳು ಅವರವರ ಕ್ಷೇತ್ರಗಳಲ್ಲಿದ್ದಾರೆ. ಆದ್ದರಿಂದ ನಮ್ಮ ಕಡೆಯಿಂದ ಇಂದೇ ಖಚಿತ ತೀರ್ಮಾನ ಹೇಳಲು ಕಷ್ಟವಾಗುತ್ತಿದೆ. ಆದರೆ ನಿಮ್ಮ ಜೊತೆ ನಾವಿದ್ದೇವೆ, ಈ ಸಮಸ್ಯೆಗೆ ಸೂಕ್ತ ಪರಿಹಾರ ಖಂಡಿತ ಹುಡುಕೋಣ’ ಎಂದು ಭರವಸೆ ನೀಡಿದರು.

”ಇದನ್ನು ಬಗೆಹರಿಸಲು ಏನು ಪ್ರಕ್ರಿಯೆ ಅಳವಡಿಸಬಹುದು ಎಂದು ತೀರ್ಮಾನಿಸಲು ನಮಗೆ ಸ್ವಲ್ಪ ಸಮಯಾವಕಾಶಬೇಕು. ರಾಹುಲ್ ಗಾಂಧಿಯವರು ಬಂದೊಡನೆ ಅವರೊಡನೆ ತಮಗೆ ನೇರ ಭೇಟಿಯ ವ್ಯವಸ್ಥೆ ಮಾಡುತ್ತೇವೆ” ಎಂದರು.

ಸಭೆ ಎಂದು  ಸಾಧ್ಯವಾಗಬಹುದು ಎಂಬುದರ ಬಗ್ಗೆ ಖಚಿತ ದಿನಾಂಕ ತಿಳಿಸಿ ಎಂದು ಕೇಳಿದಾಗ, “ಅದನ್ನು ತಿಳಿಸಬೇಕಾದರೂ ನಾನು ಹಿರಿಯ ಮುಖಂಡರುಗಳ ಜೊತೆ ಮಾತನಾಡಬೇಕಾಗುತ್ತದೆ; ಹೆಚ್ಚಲ್ಲ, ಆದರೆ ಸ್ವಲ್ಪ ಸಮಯವಕಾಶದ ಅಗತ್ಯವಿದೆ” ಎಂದು ಅವರು ಉತ್ತರಿಸಿದರು.

ಕಾಂಗ್ರೆಸ್‌ನೊಂದಿಗಿನ ಮಾತುಕತೆಯ ನಂತರ ಅಂಬೇಡ್ಕರ್ ಭವನದಲ್ಲಿ ಎಲ್ಲ ಅಲೆಮಾರಿ ಮುಖಂಡರ ಮತ್ತು ಸದಸ್ಯರ ಸುದೀರ್ಘ ಸಭೆ ನಡೆಯಿತು. “ಮೊಟ್ಟ ಮೊದಲ ಬಾರಿಗೆ ಎಚ್ಚೆತ್ತಿರುವ ಅಲೆಮಾರಿ ಸಮುದಾಯದ 59 ಜಾತಿಗಳು ಇಂದು ಒಂದು ಕುಟುಂಬವಾಗಿ ಒಂದಾಗಿದ್ದೇವೆ. ದೆಹಲಿಗೂ ಬಂದು ನಮ್ಮ ಕೂಗನ್ನು ಪ್ರಬಲವಾಗಿ ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಒಗ್ಗಟ್ಟನ್ನು ಮತ್ತು ನ್ಯಾಯಕ್ಕಾಗಿನ ನಮ್ಮ ಹೋರಾಟವನ್ನು ಕೊನೆ ಮುಟ್ಟುವ ತನಕ ಮುಂದುವರೆಸುತ್ತೇವೆ” ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

“ಅಲೆಮಾರಿ ಸಮುದಾಯಗಳ ನಿಯೋಗವನ್ನು ಬರಮಾಡಿಕೊಂಡು ಸುದೀರ್ಘ ಮಾತುಕತೆ ನಡೆಸಿದ ಕಾಂಗ್ರೆಸ್ ಪ್ರತಿನಿಧಿಯಾದ ಅಭಿಷೇಕ್ ದತ್ ಅವರಿಗೆ ಈ ಸಮಿತಿ ಧನ್ಯವಾದಗಳನ್ನು ತಿಳಿಸುತ್ತದೆ. ಕಾಂಗ್ರೆಸ್ ಪ್ರತಿನಿಧಿಗಳು ಭರವಸೆಯ ಮಾತುಗಳನ್ನಾಡಿದ್ದರೂ ಮುಂದಿನ ಪ್ರಕ್ರಿಯೆ ಕುರಿತು ಖಚಿತವಾದ ಉತ್ತರ ನೀಡಲು ಒಂದಷ್ಟು ಸಮಯಬೇಕು ಎಂದು ಹೇಳಿದ್ದಾರೆ. ಅವರ ಇಕ್ಕಟ್ಟನ್ನೂ ನಾವು ಅರ್ಥಮಾಡಿಕೊಳ್ಳುತ್ತೇವೆ. ಆದರೆ ಖಚಿತ ತೀರ್ಮಾನ ಆಗುವ ತನಕ ನಾವು ದೆಹಲಿಯನ್ನು ತೊರೆಯುವ ಮಾತೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಈ ಸಮಸ್ಯೆಗೆ ಪರಿಹಾರ ಮಾರ್ಗ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

“ತೀರ್ಮಾನ ತೆಗೆದುಕೊಳ್ಳುವ ತನಕ ದೆಹಲಿಯಲ್ಲೇ ಉಳಿಯುತ್ತೇವೆ. ಎಷ್ಟೇ ದಿನ ಆದರೂ ಸಹ ಕಾಯುತ್ತೇವೆ. ಪರಿಹಾರ ಪಡೆದೇ ಹಿಂತಿರುಗುತ್ತೇವೆ. ಈ ಅವಕಾಶ ಕಳೆದುಕೊಂಡರೆ ನಮಗೆ ಮತ್ತೆ ನ್ಯಾಯ ಸಿಗಲು ಸಾಧ್ಯವಿಲ್ಲ. ಹಾಗಾಗಿ ಕರ್ನಾಟಕದಿಂದಲೂ ನಿತ್ಯ ಒಂದೆರಡು ಅಲೆಮಾರಿ ತಂಡಗಳು ದೆಹಲಿಗೆ ಬಂದು ಸೇರಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ನಮ್ಮಂಥ ಅನಾಥ ಜೀವಿಗಳಿಗೆ ದೆಹಲಿಯಲ್ಲಿ ನೆಲೆ, ನೀರು, ಊಟ ಕಲ್ಪಿಸಲು ಶ್ರಮಿಸುತ್ತಿರುವ ದೆಹಲಿಯ ಮಾನವೀಯ ಮನಸ್ಸುಗಳಿಗೆ ಈ ಸಂದರ್ಭದಲ್ಲಿ ಮನದಾಳದ ನಮನಗಳನ್ನು ಅಲೆಮಾರಿ ಸಮುದಾಯ ಸಲ್ಲಿಸುತ್ತದೆ” ಹೋರಾಟಗಾರರು ತಿಳಿಸಿದರು.

“ಕಾಂಗ್ರೆಸ್ ಆಫೀಸಿನ ಮುಂದಿನ ಪ್ರದರ್ಶನದ ಸಂದರ್ಭದಲ್ಲಿ ಒಂದಿಬ್ಬರು ಬಿಜೆಪಿಯ ಕಿಡಿಗೇಡಿಗಳು ಹೋರಾಟನ್ನು ಕೆಡಿಸಲು ಪ್ರಯತ್ನಿಸುತ್ತಾರೆ. ಯಾವುದೇ ಕಾರಣಕ್ಕೂ ಒಪ್ಪಲಾಗದ ಘೋಷಣೆಗಳನ್ನು ಹಾಕಿದ್ದಾರೆ. ಇದನ್ನು ಬಿಜೆಪಿ ವರ್ಸಸ್ ಕಾಂಗ್ರೆಸ್ ಹೋರಾಟವಾಗಿ ತಿರುಗಿಸುವ ದುಷ್ಠ ಪ್ರಯತ್ನ ನಡೆಸಿದ್ದಾರೆ. ಇದಕ್ಕಾಗಿ ಸಮಿತಿ ವಿಷಾದ ವ್ಯಕ್ತಪಡಿಸುತ್ತದೆ, ಇಂತಹ ಸ್ವಾರ್ಥಿಗಳನ್ನು ಮುಂದಿನ ಹೋರಾಟಗಳಿಂದ ಹೊರಗಿಡುವ ಒಕ್ಕೊರಲ ತೀರ್ಮಾನವನ್ನು ಅಲೆಮಾರಿಗಳ ಮಾಹಾ ಒಕ್ಕೂಟ ತೆಗೆದುಕೊಳ್ಳುತ್ತಿದೆ” ಎಂದು ಸಭೆಯಲ್ಲಿ ತಿಳಿಸಿದರು.

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...