Homeಕರ್ನಾಟಕಮೀಸಲಾತಿ ಕುರಿತು ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ: ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ

ಮೀಸಲಾತಿ ಕುರಿತು ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ: ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ

- Advertisement -
- Advertisement -

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ನಿಂದ ಖಚಿತ ಭರವಸೆ ಸಿಗುವವರೆಗೂ ದೆಹಲಿಯಲ್ಲೇ ಹೋರಾಟ ಮುಂದುವರಿಸಲಾಗುವುದು ಎಂದು ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ’ ತೀರ್ಮಾನ ಮಾಡಿದೆ.

ಕರ್ನಾಟಕದ ಅಲೆಮಾರಿ ಸಮುದಾಯಗಳಿಂದ ‘ದೆಹಲಿ ಚಲೋ’ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸುದೀರ್ಘ ಮಾತುಕತೆಯಲ್ಲಿ, ಸಮಸ್ಯೆ ಬಗೆಹರಿಸುವ ಪ್ರಕ್ರಿಯೆ ಕುರಿತು ಕೈ ನಾಯಕರು ಸಮಯ ಕೇಳಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕಡೆಯಿಂದ ಖಚಿತ ಅಭಿಪ್ರಾಯ ಹೊರಬೀಳುವ ತನಕ ದೆಹಲಿ ಬಿಡದಿರಲು ಸಮಿತಿ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಒಳಮೀಸಲಾತಿ ಹಂಚಿಕೆಯಲ್ಲಿ ಕರ್ನಾಟಕದ ಅಲೆಮಾರಿ ಸಮುದಾಯಕ್ಕೆ ಆಗಿರುವ ಘೋರ ಅನ್ಯಾಯವನ್ನು ಪ್ರತಿಭಟಿಸಿ ಹಾಗೂ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಆಗಿರುವ ತಪ್ಪನ್ನು ಸರಿಪಡಿಸಬೇಕು ಎಂದು ಒತ್ತಾಯಿಸಲು ಕರ್ನಾಟಕದಿಂದ ಬಂದ ನೂರಾರು ಜನ ಅಲೆಮಾರಿ ಬಂಧುಗಳು, ಕಲಾವಿದರು ಇಂದು ದೆಹಲಿಯ ಜಂತರ್ ಮಂತರಿನಲ್ಲಿ ಆಕರ್ಶಕ ಮತ್ತು ಆಕ್ರೋಶಭರಿತ ಪ್ರತಿಭಟನೆ ನಡೆಸಿದರು. ರಾಮ, ಲಕ್ಷ್ಮಣ, ರಾವಣ, ದುರ್ಗ, ಆಂಜನೇಯ ಮುಂತಾದ ವೇಷ ತೊಟ್ಟ ಕಲಾವಿದರು ತಮ್ಮ ಕಲಾ ರೂಪಗಳಲ್ಲೇ ತಮ್ಮ ನೋವನ್ನು ಹೊರಹಾಕಿದರು. ತಮಗೆ ತಾವೇ ಚಾಟಿಯಲ್ಲಿ ಬಿಗಿದುಕೊಳ್ಳುತ್ತಿದ್ದರೂ, ಇಡೀ ಸಮಾಜಕ್ಕೆ ಆ ಏಟು ಬೀಳುವಂತೆ ಗೋಚರಿಸುತ್ತಿತ್ತ.

ಬೆಳಿಗ್ಗೆ 10 ರಿಂದ 12.30 ರ ತನಕ ಪ್ರತಿಭಟನೆ ನಡೆಸಿ ನಂತರ ಕಾಂಗ್ರೆಸ್ ಮುಖಂಡರನ್ನು ಕಾಣಲು ಕಾಂಗ್ರೆಸ್ ಕಚೇರಿಯ ಕಡೆ ಪ್ರತಿಭಟನಾಕಾರರು ಹೆಜ್ಜೆಹಾಕಿದರು. ಮಧ್ಯಪ್ರವೇಶಿಸಿದ ದೆಹಲಿ ಪೋಲೀಸರು, ಬಿಗಿಬಂದೋಬಸ್ತಿನ ಕಾರಣ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಹೋಗಲು ಅವಕಾಶವಿಲ್ಲ, ನಾವೇ ವಾಹನಗಳಲ್ಲಿ ಕರೆದೊಯ್ಯುತ್ತೇವೆ ಎಂದು ಬಸ್ಸುಗಳ ವ್ಯವಸ್ಥೆ ಮಾಡಿದರು. ಕಾಂಗ್ರೆಸ್ ಕಚೇರಿಯ ಮುಂದೆ ಅಲೆಮಾರಿ ಸಮುದಾಯದ ಆಕ್ರೋಶ ವ್ಯಕ್ತಗೊಳ್ಳುತ್ತಿತ್ತು. ಎಐಸಿಸಿ ಮುಖಂಡರು ಎಲ್ಲರನ್ನೂ ಒಳಗೆ ಬಿಡಿ ಎಂದು ಹೇಳಿದರೂ ದೆಹಲಿ ಪೋಲೀಸರು ಅವಕಾಶ ಕೊಡಲಿಲ್ಲ. ಏನಾದರೂ ಅಚಾತುರ್ಯ ನಡೆದರೆ ನಾವು ಹೊಣೆಯಾಗಬೇಕಾಗುತ್ತದೆ ಪ್ರತಿನಿಧಿಗಳನ್ನು ಮಾತ್ರ ಬಿಡಲು ಸಾಧ್ಯ ಎಂದು ಕಡ್ಡಿತುಂಡಾದಂತೆ ಹೇಳಿದರು. ಆದ್ದರಿಂದ, ನಿಯೋಗ ಮಾತ್ರವೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತನಾಡಲು ಸಾಧ್ಯವಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲೆಮಾರಿ ಮುಖಂಡರ ಸಭೆ

ಕಾಂಗ್ರೆಸ್ ಹೈಕಮಾಂಡ್ ಪರವಾಗಿ ಮಾತುಕತೆಗೆ ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ ಅವರು ನಿಯೋಗದ ಮಾತುಗಳನ್ನು ವ್ಯವಧಾನದಿಂದ ಕೇಳಿಸಿಕೊಂಡರು. ಕೊನೆಗೆ ಮಾತನಾಡಿದ ಅವರು, “ಕರ್ನಾಟಕದಿಂದ ತಾವುಗಳು ಇಷ್ಟು ದೂರ ಬರುವುದಕ್ಕೆ ಬಹಳ ಕಷ್ಟಗಳನ್ನು ತೆಗೆದುಕೊಳ್ಳಬೇಕಾಯಿತು; ಅದಕ್ಕಾಗಿ ನಾನು ವಿಷಾದಿಸುತ್ತೇನೆ. ಇಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಆಸ್ಪತ್ರೆಯಲ್ಲಿದ್ದಾರೆ. ರಾಹುಲ್ ಗಾಂಧಿಯವರು ದೇಶದ ಹೊರಗಿದ್ದಾರೆ. ದುರ್ಗ ಪೂಜೆ ಇರುವುದರಿಂದ ಎಲ್ಲ ಮುಖಂಡರುಗಳು ಅವರವರ ಕ್ಷೇತ್ರಗಳಲ್ಲಿದ್ದಾರೆ. ಆದ್ದರಿಂದ ನಮ್ಮ ಕಡೆಯಿಂದ ಇಂದೇ ಖಚಿತ ತೀರ್ಮಾನ ಹೇಳಲು ಕಷ್ಟವಾಗುತ್ತಿದೆ. ಆದರೆ ನಿಮ್ಮ ಜೊತೆ ನಾವಿದ್ದೇವೆ, ಈ ಸಮಸ್ಯೆಗೆ ಸೂಕ್ತ ಪರಿಹಾರ ಖಂಡಿತ ಹುಡುಕೋಣ’ ಎಂದು ಭರವಸೆ ನೀಡಿದರು.

”ಇದನ್ನು ಬಗೆಹರಿಸಲು ಏನು ಪ್ರಕ್ರಿಯೆ ಅಳವಡಿಸಬಹುದು ಎಂದು ತೀರ್ಮಾನಿಸಲು ನಮಗೆ ಸ್ವಲ್ಪ ಸಮಯಾವಕಾಶಬೇಕು. ರಾಹುಲ್ ಗಾಂಧಿಯವರು ಬಂದೊಡನೆ ಅವರೊಡನೆ ತಮಗೆ ನೇರ ಭೇಟಿಯ ವ್ಯವಸ್ಥೆ ಮಾಡುತ್ತೇವೆ” ಎಂದರು.

ಸಭೆ ಎಂದು  ಸಾಧ್ಯವಾಗಬಹುದು ಎಂಬುದರ ಬಗ್ಗೆ ಖಚಿತ ದಿನಾಂಕ ತಿಳಿಸಿ ಎಂದು ಕೇಳಿದಾಗ, “ಅದನ್ನು ತಿಳಿಸಬೇಕಾದರೂ ನಾನು ಹಿರಿಯ ಮುಖಂಡರುಗಳ ಜೊತೆ ಮಾತನಾಡಬೇಕಾಗುತ್ತದೆ; ಹೆಚ್ಚಲ್ಲ, ಆದರೆ ಸ್ವಲ್ಪ ಸಮಯವಕಾಶದ ಅಗತ್ಯವಿದೆ” ಎಂದು ಅವರು ಉತ್ತರಿಸಿದರು.

ಕಾಂಗ್ರೆಸ್‌ನೊಂದಿಗಿನ ಮಾತುಕತೆಯ ನಂತರ ಅಂಬೇಡ್ಕರ್ ಭವನದಲ್ಲಿ ಎಲ್ಲ ಅಲೆಮಾರಿ ಮುಖಂಡರ ಮತ್ತು ಸದಸ್ಯರ ಸುದೀರ್ಘ ಸಭೆ ನಡೆಯಿತು. “ಮೊಟ್ಟ ಮೊದಲ ಬಾರಿಗೆ ಎಚ್ಚೆತ್ತಿರುವ ಅಲೆಮಾರಿ ಸಮುದಾಯದ 59 ಜಾತಿಗಳು ಇಂದು ಒಂದು ಕುಟುಂಬವಾಗಿ ಒಂದಾಗಿದ್ದೇವೆ. ದೆಹಲಿಗೂ ಬಂದು ನಮ್ಮ ಕೂಗನ್ನು ಪ್ರಬಲವಾಗಿ ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಒಗ್ಗಟ್ಟನ್ನು ಮತ್ತು ನ್ಯಾಯಕ್ಕಾಗಿನ ನಮ್ಮ ಹೋರಾಟವನ್ನು ಕೊನೆ ಮುಟ್ಟುವ ತನಕ ಮುಂದುವರೆಸುತ್ತೇವೆ” ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

“ಅಲೆಮಾರಿ ಸಮುದಾಯಗಳ ನಿಯೋಗವನ್ನು ಬರಮಾಡಿಕೊಂಡು ಸುದೀರ್ಘ ಮಾತುಕತೆ ನಡೆಸಿದ ಕಾಂಗ್ರೆಸ್ ಪ್ರತಿನಿಧಿಯಾದ ಅಭಿಷೇಕ್ ದತ್ ಅವರಿಗೆ ಈ ಸಮಿತಿ ಧನ್ಯವಾದಗಳನ್ನು ತಿಳಿಸುತ್ತದೆ. ಕಾಂಗ್ರೆಸ್ ಪ್ರತಿನಿಧಿಗಳು ಭರವಸೆಯ ಮಾತುಗಳನ್ನಾಡಿದ್ದರೂ ಮುಂದಿನ ಪ್ರಕ್ರಿಯೆ ಕುರಿತು ಖಚಿತವಾದ ಉತ್ತರ ನೀಡಲು ಒಂದಷ್ಟು ಸಮಯಬೇಕು ಎಂದು ಹೇಳಿದ್ದಾರೆ. ಅವರ ಇಕ್ಕಟ್ಟನ್ನೂ ನಾವು ಅರ್ಥಮಾಡಿಕೊಳ್ಳುತ್ತೇವೆ. ಆದರೆ ಖಚಿತ ತೀರ್ಮಾನ ಆಗುವ ತನಕ ನಾವು ದೆಹಲಿಯನ್ನು ತೊರೆಯುವ ಮಾತೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿ ಈ ಸಮಸ್ಯೆಗೆ ಪರಿಹಾರ ಮಾರ್ಗ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

“ತೀರ್ಮಾನ ತೆಗೆದುಕೊಳ್ಳುವ ತನಕ ದೆಹಲಿಯಲ್ಲೇ ಉಳಿಯುತ್ತೇವೆ. ಎಷ್ಟೇ ದಿನ ಆದರೂ ಸಹ ಕಾಯುತ್ತೇವೆ. ಪರಿಹಾರ ಪಡೆದೇ ಹಿಂತಿರುಗುತ್ತೇವೆ. ಈ ಅವಕಾಶ ಕಳೆದುಕೊಂಡರೆ ನಮಗೆ ಮತ್ತೆ ನ್ಯಾಯ ಸಿಗಲು ಸಾಧ್ಯವಿಲ್ಲ. ಹಾಗಾಗಿ ಕರ್ನಾಟಕದಿಂದಲೂ ನಿತ್ಯ ಒಂದೆರಡು ಅಲೆಮಾರಿ ತಂಡಗಳು ದೆಹಲಿಗೆ ಬಂದು ಸೇರಿಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ನಮ್ಮಂಥ ಅನಾಥ ಜೀವಿಗಳಿಗೆ ದೆಹಲಿಯಲ್ಲಿ ನೆಲೆ, ನೀರು, ಊಟ ಕಲ್ಪಿಸಲು ಶ್ರಮಿಸುತ್ತಿರುವ ದೆಹಲಿಯ ಮಾನವೀಯ ಮನಸ್ಸುಗಳಿಗೆ ಈ ಸಂದರ್ಭದಲ್ಲಿ ಮನದಾಳದ ನಮನಗಳನ್ನು ಅಲೆಮಾರಿ ಸಮುದಾಯ ಸಲ್ಲಿಸುತ್ತದೆ” ಹೋರಾಟಗಾರರು ತಿಳಿಸಿದರು.

“ಕಾಂಗ್ರೆಸ್ ಆಫೀಸಿನ ಮುಂದಿನ ಪ್ರದರ್ಶನದ ಸಂದರ್ಭದಲ್ಲಿ ಒಂದಿಬ್ಬರು ಬಿಜೆಪಿಯ ಕಿಡಿಗೇಡಿಗಳು ಹೋರಾಟನ್ನು ಕೆಡಿಸಲು ಪ್ರಯತ್ನಿಸುತ್ತಾರೆ. ಯಾವುದೇ ಕಾರಣಕ್ಕೂ ಒಪ್ಪಲಾಗದ ಘೋಷಣೆಗಳನ್ನು ಹಾಕಿದ್ದಾರೆ. ಇದನ್ನು ಬಿಜೆಪಿ ವರ್ಸಸ್ ಕಾಂಗ್ರೆಸ್ ಹೋರಾಟವಾಗಿ ತಿರುಗಿಸುವ ದುಷ್ಠ ಪ್ರಯತ್ನ ನಡೆಸಿದ್ದಾರೆ. ಇದಕ್ಕಾಗಿ ಸಮಿತಿ ವಿಷಾದ ವ್ಯಕ್ತಪಡಿಸುತ್ತದೆ, ಇಂತಹ ಸ್ವಾರ್ಥಿಗಳನ್ನು ಮುಂದಿನ ಹೋರಾಟಗಳಿಂದ ಹೊರಗಿಡುವ ಒಕ್ಕೊರಲ ತೀರ್ಮಾನವನ್ನು ಅಲೆಮಾರಿಗಳ ಮಾಹಾ ಒಕ್ಕೂಟ ತೆಗೆದುಕೊಳ್ಳುತ್ತಿದೆ” ಎಂದು ಸಭೆಯಲ್ಲಿ ತಿಳಿಸಿದರು.

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...