Homeಮುಖಪುಟಶೀಘ್ರ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೋನಮ್ ವಾಂಗ್‌ಚುಕ್ ಪತ್ನಿ

ಶೀಘ್ರ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೋನಮ್ ವಾಂಗ್‌ಚುಕ್ ಪತ್ನಿ

- Advertisement -
- Advertisement -

ಸೆಪ್ಟೆಂಬರ್ 24 ರಂದು ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗಳ ನಂತರ ಬಂಧನಕ್ಕೊಳಗಾದಾಗಿನಿಂದ ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿರುವ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಾಂಗ್‌ಚುಕ್ ಅವರ ಬಂಧನ ಕಾನೂನುಬಾಹಿರವಾಗಿದೆ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಗೀತಾಂಜಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಾಂಗ್‌ಚುಕ್ ಅವರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ, ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಆರೋಪಿಸಲಾಗಿದೆ; ಇದು ಸುಳ್ಳು ಎಂದು ಅವರ ಪತ್ನಿ ಗೀತಾಂಜಲಿ ಹೇಳಿದ್ದಾರೆ.

ವಾಂಗ್‌ಚುಕ್ ಮೇಲೆ ಎನ್‌ಎಸ್‌ಎ (ರಾಷ್ಟ್ರೀಯ ಭದ್ರತಾ ಕಾಯ್ದೆ) ಹೇರಿರುವುದನ್ನು ಅವರು ಪ್ರಶ್ನಿಸಿದ್ದು, ನನಗೆ ಇನ್ನೂ ಬಂಧನ ಆದೇಶ ಬಂದಿಲ್ಲ, ಇದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ಹೇಳಿದರು. ನನ್ನ ಪತಿಯನ್ನು ಸಂಪರ್ಕಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿರುವ ಹವಾಮಾನ ಕಾರ್ಯಕರ್ತನ ಬಿಡುಗಡೆಗಾಗಿ ಮಧ್ಯಪ್ರವೇಶಿಸುವಂತೆ ಗೀತಾಂಜಲಿ ಜೆ ಆಂಗ್ಮೋ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪರ್ಕಿಸಿದ್ದಾರೆ.

“ಯಾರಿಗೂ ಬೆದರಿಕೆಯಾಗದ ವ್ಯಕ್ತಿ ವಾಂಗ್‌ಚುಕ್ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ನಾವು ವಿನಂತಿಸುತ್ತೇವೆ, ಅವರು ತಮ್ಮ ರಾಷ್ಟ್ರವನ್ನು ಬಿಟ್ಟು ಬೇರೆಯವರಿಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ಲಡಾಖ್‌ನ ಧೈರ್ಯಶಾಲಿ ಪುತ್ರರಿಗೆ ಸೇವೆ ಸಲ್ಲಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ನಮ್ಮ ಮಹಾನ್ ರಾಷ್ಟ್ರದ ರಕ್ಷಣೆಗಾಗಿ ಭಾರತೀಯ ಸೇನೆಯೊಂದಿಗೆ ಒಗ್ಗಟ್ಟಿನಲ್ಲಿ ನಿಂತಿದ್ದಾರೆ” ಎಂದು ಆಂಗ್ಮೋ ಲೇಹ್‌ನ ಉಪ ಆಯುಕ್ತರ ಮೂಲಕ ರವಾನಿಸಲಾದ ಪತ್ರದಲ್ಲಿ ತಿಳಿಸಿದ್ದಾರೆ.

ಲೇಹ್‌ನಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗಳ ನಂತರ ಸೆಪ್ಟೆಂಬರ್ 26 ರಂದು ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ.

ಲೇಹ್ ಪಟ್ಟಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಾಲ್ವರು ಜನರನ್ನು ಬಲಿತೆಗೆದುಕೊಂಡ ಎರಡು ದಿನಗಳ ನಂತರ, ಸೆಪ್ಟೆಂಬರ್ 26 ರಂದು ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಆ ಪ್ರದೇಶವನ್ನು ಸಂವಿಧಾನದ ಆರನೇ ಶೆಡ್ಯೂಲ್‌ಗೆ ಸೇರಿಸುವುದು ಸೇರಿದಂತೆ ಬೇಡಿಕೆಗಳನ್ನು ಬೆಂಬಲಿಸಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತು.

2023 ರಲ್ಲಿ ಮಕ್ಕಳ ಮೇಲಿನ ಅಪರಾಧಗಳಲ್ಲಿ ಶೇ. 9.2 ರಷ್ಟು ಹೆಚ್ಚಳ: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...