Homeಮುಖಪುಟಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

ಬರೇಲಿಗೆ ಹೊರಟಿದ್ದ ಎಸ್‌ಪಿ ನಿಯೋಗಕ್ಕೆ ಪೊಲೀಸರ ತಡೆ: ಸಂಸದ ಝಿಯಾವುರ್ ರೆಹಮಾನ್‌ಗೆ ಗೃಹ ಬಂಧನ

- Advertisement -
- Advertisement -

ಇತ್ತೀಚೆಗೆ ಹಿಂಸಾಚಾರ ನಡೆದಿದ್ದ ಬರೇಲಿಗೆ ಹೊರಟಿದ್ದ ಸಮಾಜವಾದಿ ಪಕ್ಷದ(ಎಸ್‌ಪಿ) ನಿಯೋಗಕ್ಕೆ ಶನಿವಾರ (ಅ.4) ಉತ್ತರ ಪ್ರದೇಶ ಪೊಲೀಸರು ತಡೆ ಒಡ್ಡಿದ್ದಾರೆ ಎಂದು ವರದಿಯಾಗಿದೆ.

ಈದ್ ಮೀಲಾದ್ ಪ್ರಯುಕ್ತ ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಐ ಲವ್ ಮುಹಮ್ಮದ್’ ಬರಹವಿದ್ದ ಬ್ಯಾನರ್ ಹಾಕಿದ್ದ ಯುವಕರನ್ನು ಸೆಪ್ಟೆಂಬರ್ 4ರಂದು ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಅದರಂತೆ ಸೆಪ್ಟೆಂಬರ್ 26ರಂದು ಬರೇಲಿಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಆದರೆ, ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿತ್ತು. ಪರಿಣಾಮ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ಖಾನ್ ಸೇರಿದಂತೆ ಸುಮಾರು 35 ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸರು ಅಮಾಯಕರನ್ನೂ ಬಂಧಿಸಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ, ಉತ್ತರ ಪ್ರದೇಶದ ಪ್ರತಿಪಕ್ಷವಾದ ಸಮಾಜವಾದಿಯ ಮುಖ್ಯಸ್ಥ ಅಖಿಲೇಶ್ ಯಾದವ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ನೇತೃತ್ವದ 14 ಸದಸ್ಯರ ನಿಯೋಗಕ್ಕೆ ಬರೇಲಿಗೆ ಭೇಟಿ ನೀಡುವಂತೆ ನಿರ್ದೇಶಿಸಿದ್ದರು.

ಪೊಲೀಸರು ಮಾರ್ಗ ಮಧ್ಯೆ ತಡೆದಿರುವುದನ್ನು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ‘ಸಂವಿಧಾನದ ಉಲ್ಲಂಘನೆ’ ಎಂದು ಮಾತಾ ಪ್ರಸಾದ್ ಪಾಂಡೆ ಟೀಕಿಸಿದ್ದಾರೆ.

“ಆರಂಭದಲ್ಲಿ ಮನೆಯಲ್ಲಿಯೇ ಇರಲು ನನಗೆ ಸೂಚಿಸಲಾಗಿತ್ತು. ಆದರೆ, ನಂತರ ಅದನ್ನು ಸರಿಪಡಿಸಲಾಯಿತು. ನಮ್ಮ ಭೇಟಿಯ ಬಗ್ಗೆ ಸರ್ಕಾರಕ್ಕೆ ಮಾಹಿತಿ ತಿಳಿದ ತಕ್ಷಣ, ಬರೇಲಿಗೆ ಹೋಗದಂತೆ ತಡೆಯಲು ಲಕ್ನೋದಲ್ಲಿರುವ ನಮ್ಮ ಖಾಸಗಿ ನಿವಾಸದಲ್ಲಿ ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವ ವಿರೋಧಿ. ಇದು ಸಂವಿಧಾನವು ನೀಡಿರುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಮಾತಾ ಪ್ರಸಾದ್ ಪಾಂಡೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ನಡುವೆ, ಬರೇಲಿಗೆ ಭೇಟಿ ನೀಡದಂತೆ ತಡೆಯಲು ಸಮಾಜವಾದಿ ಪಕ್ಷದ ಸಂಸದ ಝಿಯಾವುರ್ ರೆಹಮಾನ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಸಂಭಾಲ್‌ನಲ್ಲಿರುವ ಅವರ ಮನೆಯ ಹೊರಗೆ ಪೊಲೀಸರನ್ನು ನಿಯೋಜಿಸಿರುವ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿವೆ.

ಬರೇಲಿಗೆ ಭೇಟಿ ನೀಡಲು ಮುಂದಾಗಿರುವ ಎಸ್‌ಪಿ ನಾಯಕರದ್ದು ‘ಬಾಲಿಶ ನಡೆ’ ಎಂದು ಬಿಜೆಪಿ ಕರೆದಿದೆ.

“ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬರೇಲಿಗೆ ನಿಯೋಗ ಕಳುಹಿಸಿರುವುದು ಬಾಲಿಶ ನಡೆ. ಎಸ್‌ಪಿ ಮುಸ್ಲಿಂ ಓಲೈಕೆಯ ಕೊಳಕು ರಾಜಕೀಯಕ್ಕೆ ಹೆಸರುವಾಸಿಯಾಗಿದೆ. 2027ರ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಪಿಯ ಪತನ ಮತ್ತು ಸರ್ವನಾಶ ಖಚಿತ. ಗಲಭೆ ಮುಕ್ತ ಯುಪಿ, ಉತ್ತಮ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ನಮ್ಮ ಗುರುತು ಮತ್ತು ಸಾಧನೆ. ಎಸ್‌ಪಿ ಬೆಂಬಲಿಗರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸೆಪ್ಟೆಂಬರ್ 26ರಂದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಗುಂಡು ಹಾರಿಸಿದ್ದಾರೆ ಎಂದು ಬರೇಲಿಯ ಸ್ಥಳೀಯರು ಆರೋಪಿಸಿದ್ದಾರೆ.

ಘರ್ಷಣೆಗೆ ಸಂಬಂಧಿಸಿದ ಎಫ್‌ಐಆರ್‌ನಲ್ಲಿ ಸೆಪ್ಟೆಂಬರ್ 26ರಂದು ನಡೆದ ಘಟನೆಯ ಹಿಂದೆ ‘ಯೋಜಿತ ಪಿತೂರಿ’ ಇದೆ. ಐಎಂಸಿ ಸದಸ್ಯರು ಕೇವಲ ಮನವಿ ಪತ್ರ ಸಲ್ಲಿಸುವ ಬದಲು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

‘ಐ ಲವ್ ಮುಹಮ್ಮದ್’ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕೊತ್ವಾಲಿಯಲ್ಲಿ ಐದು, ಬರಾದರಿಯಲ್ಲಿ ಎರಡು ಮತ್ತು ಕಿಲಾ, ಕ್ಯಾಂಟ್ ಮತ್ತು ಪ್ರೇಮ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಎಫ್‌ಐಆರ್ ದಾಖಲಾಗಿದ್ದು, 125 ಜನರು ಮತ್ತು 3,000 ಗುರುತಿಸಲಾಗದ ವ್ಯಕ್ತಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲಾದ ಧಾರ್ಮಿಕ ನಾಯಕನೊಂದಿಗೆ ಸಂಪರ್ಕ ಹೊಂದಿದವರ ಆಸ್ತಿಗಳನ್ನು ಆಡಳಿತವು ಗುರಿಯಾಗಿಸಿಕೊಂಡಿದೆ. ಬರೇಲಿ ಅಭಿವೃದ್ಧಿ ಪ್ರಾಧಿಕಾರವು ಧರ್ಮಗುರುವಿಗೆ ಆಶ್ರಯ ನೀಡಿದ್ದ ಫಹಾಮ್ ಒಡೆತನದ ಹೋಟೆಲ್ ಸ್ಕೈಲಾರ್ಕ್ ಅನ್ನು ಸೀಲ್ ಮಾಡಿದೆ. ಮತ್ತೊಬ್ಬ ಆರೋಪಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಆರಿಫ್ ಒಡೆತನದ ಫಹಾಮ್ ಲಾನ್, ಫ್ಲೋರಾ ಗಾರ್ಡನ್ ಎಂಬ ಹೋಟೆಲ್‌ಗಳು, ಜಲ್ಸಾ ಗ್ರೀನ್ ಮ್ಯಾರೇಜ್ ಹಾಲ್ ಅನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತವು ಸಂವಿಧಾನದ ಮೂಲಕ ಆಳಲ್ಪಡುತ್ತದೆ, ಬುಲ್ಡೋಜರ್ ನಿಯಮದಿಂದಲ್ಲ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...