Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...